ಬೆಂಗಳೂರು(ಏ.30): ಅರೆವಾಹಕ (ಸೆಮಿಕಂಡಕ್ಟರ್) ಉದ್ಯಮ ಕ್ಷೇತ್ರವು ಇಂದು ಜಾಗತಿಕವಾಗಿ ಮಹತ್ವದ ಪಾತ್ರ ವಹಿಸುತ್ತಿದ್ದು, ಭವಿಷ್ಯದಲ್ಲಿ ಭಾರತವನ್ನು ‘ಸೆಮಿ ಕಂಡಕ್ಟರ್ ಹಬ್’(Semi Conductor Hub) ಆಗಿ ಬೆಳೆಸುವ ಗುರಿ ನಮ್ಮ ಸರ್ಕಾರದ್ದಾಗಿದೆ. ಇದಕ್ಕಾಗಿ ಈ ಕ್ಷೇತ್ರದ ಉದ್ಯಮಗಳಿಗೆ ಹಾಗೂ ಹೂಡಿಕೆಗೆ ಎಲ್ಲ ರೀತಿಯ ಪ್ರೋತ್ಸಾಹ ಮತ್ತು ಸಹಕಾರ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಘೋಷಿಸಿದ್ದಾರೆ.
ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಸಂವಹನ ಇಲಾಖೆಯು ದೇಶದ ಅರೆವಾಹಕ ಉದ್ಯಮ ವಲಯ ಉತ್ತೇಜಿಸಲು ಶುಕ್ರವಾರ ನಗರದ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ ಮೂರು ದಿನಗಳ ‘ಸೆಮಿಕಾನ್ ಇಂಡಿಯಾ 2022’ (Semicon India 2022) ಸಮ್ಮೇಳನವನ್ನು ವರ್ಚುವಲ್ ಆಗಿ ಉದ್ಘಾಟಿಸಿ ಅವರು ಮಾತನಾಡಿದರು.
ಸೆಮಿಕಂಡಕ್ಟರ್ ತಂತ್ರಜ್ಞಾನದಲ್ಲಿ ಭಾರತವು(India) ಆಕರ್ಷಕ ಹೂಡಿಕೆಯ ತಾಣವಾಗಲು ಪ್ರಮುಖ ಆರು ಕಾರಣಗಳಿವೆ. ನಾವು 130 ಕೋಟಿ ಭಾರತೀಯರಿಗೆ ಡಿಜಿಟಲ್ ಮೂಲ ಸೌಕರ್ಯ ಕಲ್ಪಿಸುವತ್ತ ಸಾಗುತ್ತಿದ್ದೇವೆ. ದೇಶದಲ್ಲಿ ಡಿಜಿಟಲ್ ಪಾವತಿ(Digital Payment) ಕ್ರಾಂತಿಯಾಗುತ್ತಿದೆ. ಯುಪಿಐ ವಿಶ್ವದ ಅತಿ ಹೆಚ್ಚು ಪಾವತಿ ವೇದಿಕೆಯಾಗಿದೆ. ಆರೋಗ್ಯ ಕಲ್ಯಾಣ ಸೇರಿದಂತೆ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಜೀವನ ಮಟ್ಟಸುಧಾರಿಸಲು ನಾವು ಡಿಜಿಟಲ್ ತಂತ್ರಜ್ಞಾನವನ್ನು ಬಳಸುತ್ತಿದ್ದೇವೆ. 6 ಲಕ್ಷ ಹಳ್ಳಿಗಳಿಗೆ ಬ್ರಾಡ್ಬ್ಯಾಂಡ್ ಸೇವೆ ಒದಗಿಸುವ ಹಾದಿಯಲ್ಲಿದ್ದೇವೆ. 5ಜಿ, ಇಂಟರ್ನೆಟ್ ಆಫ್ ಥಿಂಗ್ಸ್(ಐಒಟಿ) ಮತ್ತು ಕ್ಲೀನ್ ಎನರ್ಜಿ ತಂತ್ರಜ್ಞಾನಗಳಲ್ಲಿ ಸಾಮರ್ಥ್ಯ ಹೆಚ್ಚಿಸಲು ಹೂಡಿಕೆ ಮಾಡುತ್ತಿದ್ದೇವೆ. ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸ್ಟಾರ್ಚ್ಅಪ್ ವ್ಯವಸ್ಥೆ ನಮ್ಮ ದೇಶದಲ್ಲಿದೆ. ಪ್ರತಿ ವಾರ ಹೊಸ ಯೂನಿಕಾರ್ನ್ಗಳು ಬರುತ್ತಿವೆ. ಈ ಎಲ್ಲಾ ಕಾರಣಗಳಿಂದ ಸೆಮಿಕಂಡಕ್ಟರ್ ವಹಿವಾಟಿನಲ್ಲಿ ಭಾರತವು 2026ರ ವೇಳೆಗೆ 80 ಬಿಲಿಯನ್ ಡಾಲರ್ ಮತ್ತು 2030ರ ವೇಳೆಗೆ 110 ಬಿಲಿಯನ್ ಡಾಲರ್ ದಾಟುವ ನಿರೀಕ್ಷೆ ಇದೆ ಎಂದು ಹೇಳಿದರು.
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?