ಭಾನುವಾರ, ಏಪ್ರಿಲ್ 28, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಲಿಂಪಿಕ್​ನಲ್ಲಿ ಆರ್ಚರಿಯಲ್ಲಿ ದಕ್ಷಿಣ ಕೊರಿಯಾದ ವಿರುದ್ಧ ಭಾರತಕ್ಕೆ ಸೋಲು.

Twitter
Facebook
LinkedIn
WhatsApp
ಒಲಿಂಪಿಕ್​ನಲ್ಲಿ ಆರ್ಚರಿಯಲ್ಲಿ ದಕ್ಷಿಣ ಕೊರಿಯಾದ ವಿರುದ್ಧ ಭಾರತಕ್ಕೆ ಸೋಲು.

ಆರ್ಚರಿಯಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದ ಭಾರತದ ಅತನು ದಾಸ್, ಪ್ರವೀಣ್ ಜಾಧವ್ ಮತ್ತು ತರುಣ್ ದೀಪ್ ರೈ ದಕ್ಷಿಣ ಕೊರಿಯಾ ವಿರುದ್ಧ ಸೋಲುಕಂಡು ಪದಕದ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ. ಇಂದು ಮುಂಜಾನೆ ಭಾರತದ ತ್ರಿಮೂರ್ತಿಗಳಾದ ಅತನು ದಾಸ್, ಪ್ರವೀಣ್ ಜಾಧವ್ ಮತ್ತು ತರುಣ್ ದೀಪ್ ರೈ ಕಜಕಿಸ್ತಾನದ ವಿರುದ್ಧ 6-2 ಅಂತರದಿಂದ ಜಯಭೇರಿ ಬಾರಿಸಿ ಕ್ವಾರ್ಟರ್ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಇವರಿಂದ ಪದಕದ ನಿರೀಕ್ಷೆಯಿತ್ತು.

ಆದರೆ, ಕ್ವಾರ್ಟರ್ ಫೈನಲ್​ನಲ್ಲಿ ದಕ್ಷಿಣ ಕೊರಿಯಾದ ಕಿಮ್ ವೂಜಿನ್, ಕಿಮ್ ಜೆ ಡೊಕ್ ಮತ್ತು ಒ ಜಿನ್ಹೆಕ್ ವಿರುದ್ಧ 0-6 ಅಂತರದಲ್ಲಿ ಹೀನಾಯ ಸೋಲು ಕಂಡರು. ದ. ಕೊರಿಯಾ ಸೆಮಿ ಫೈನಲ್​ಗೆ ಪ್ರವೇಶ ಪಡೆದಿದೆ.

ಇನ್ನೂ ಭಾರತದ ಸುತೀರ್ಥಾ ಮುಖರ್ಜಿ ಟೇಬಲ್ ಟೆನಿಸ್ ಎರಡನೇ ಸುತ್ತಿನಲ್ಲಿಯೇ ಸೋತು ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಿಂದ ಹೊರಬಿದ್ದಿದ್ದಾರೆ.
ಸ್ವೀಡನ್‌ನ ಆಟಗಾರ್ತಿ ಲಿಂಡಾ ಬರ್ಗ್ ಸ್ಟಾರ್ಮ್ ವಿರುದ್ಧ ರೋಚಕ ಜಯ ಗಳಿಸಿದ್ದ ಸುತೀರ್ಥ ಮುಖರ್ಜಿ ಭರವಸೆಯನ್ನು ಹುಟ್ಟುಹಾಕಿದ್ದರು.

ಆದರೆ, ಸುತೀರ್ಥಾ ಮುಖರ್ಜಿ ಎರಡನೇ ಸುತ್ತಿನಲ್ಲಿ ಮುಗ್ಗರಿಸಿದ್ದಾರೆ. ಪೋರ್ಚುಗಲ್ ದೇಶದ ಆಟಗಾರ್ತಿ ಫು ಯು ವಿರುದ್ಧ ಟೊಕಿಯೊ ಒಲಿಂಪಿಕ್ಸ್ ಮಹಿಳಾ ಸಿಂಗಲ್ಸ್ ಟೇಬಲ್ ಟೆನಿಸ್ ಎರಡನೇ ಸುತ್ತಿನಲ್ಲಿ ಭಾರತದ ಸುತೀರ್ಥಾ ಮುಖರ್ಜಿ 0-4 ಅಂತರದಿಂದ ಸೋಲುವುದರ ಮೂಲಕ ಒಲಿಂಪಿಕ್ಸ್‌ನಿಂದ ಹೊರಬಿದ್ದಿದ್ದಾರೆ.

ಇತ್ತ ಚೊಚ್ಚಲ ಬಾರಿಯ ಒಲಿಂಪಿಕ್​ನಲ್ಲಿ ಭವಾನಿ ದೇವಿ ಸೇಬರ್ ಫೆನ್ಸಿಂಗ್‍ನಲ್ಲಿ ತುನಿಶಿಯಾ ದೇಶದ ನಡಿಯ ಅಝೀಝಿ ಅವರನ್ನು 15-3 ಅಂತರದಿಂದ ಸೋಲಿಸುವುದರ ಮೂಲಕ ಪದಕದ ಭರವಸೆ ಮೂಡಿಸಿದ್ದರು. ಆದರೆ ಎರಡನೇ ಸುತ್ತಿನಲ್ಲಿ ಸೇಬರ್ ಫೆನ್ಸಿಂಗ್‍ನ ವಿಶ್ವದ ನಂ. 3 ಆಟಗಾರ್ತಿ ಮ್ಯಾನೊನ್ ಬ್ರುನೆಟ್ ವಿರುದ್ಧ 7-15 ಅಂತರದಲ್ಲಿ ಸೋಲು ಕಂಡಿದ್ದಾರೆ. ಈ ಮೂಲಕ ಟೋಕಿಯೋ ಒಲಿಂಪಿಕ್ಸ್‌ನಿಂದ ಹೊರಬಿದ್ದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು