ಸೋಮವಾರ, ಏಪ್ರಿಲ್ 29, 2024
ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಂಠಪೂರ್ತಿ ಕುಡಿದು ಬಸ್‌ನಲ್ಲಿ ಯುವತಿಯ ಸೀಟ್ ಮೇಲೆ ಮೂತ್ರವಿಸರ್ಜನೆ ಮಾಡಿದ ಭೂಪ

Twitter
Facebook
LinkedIn
WhatsApp
12 3 2010 025 1

ಹುಬ್ಬಳ್ಳಿ: ಕಂಠಪೂರ್ತಿ ಮದ್ಯಪಾನ (Alcohol) ಮಾಡಿದ್ದ ವ್ಯಕ್ತಿಯೊಬ್ಬ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ (KSRTC Bus) ಯುವತಿಯೊಬ್ಬಳ ಸೀಟ್ ಮೇಲೆ ಮೂತ್ರವಿಸರ್ಜನೆ (Urination) ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ವಿಜಯಪುರದಿಂದ ಮಂಗಳೂರಿನ ಕಡೆ ಹೊರಟಿದ್ದ ಬಸ್‌ನಲ್ಲಿ 32 ವರ್ಷದ ಕುಡುಕ ಪ್ರಯಾಣಿಕನೊಬ್ಬ ಅನಾಗರಿಕ ಪ್ರದರ್ಶನ ತೋರಿದ್ದಾನೆ. ಕೆಎಸ್‌ಆರ್‌ಟಿಸಿಯ ಹವಾನಿಯಂತ್ರಿತವಲ್ಲದ ಸ್ಲೀಪರ್ ಬಸ್ ಅನ್ನು ಪ್ರಯಾಣದ ವೇಳೆ ನಡುವೆ ಹುಬ್ಬಳ್ಳಿ ಬಳಿಯ ಕಿರೆಸೂರು ಡಾಬಾ ಬಳಿ ಊಟಕ್ಕೆಂದು ನಿಲ್ಲಿಸಲಾಗಿತ್ತು. ಎಲ್ಲಾ ಪ್ರಯಾಣಿಕರು ಬಸ್‌ನಿಂದ ಇಳಿದು ಊಟಕ್ಕೆ ಹೋಗಿದ್ದರು. ಆದರೆ ಅದೇ ಬಸ್‌ನಲ್ಲಿದ್ದ ಕುಡುಕ ಪ್ರಯಾಣಿಕ ಬಸ್‌ನಿಂದ ಇಳಿಯಲಾರದೇ 3ನೇ ಸೀಟ್ ಮೇಲೆ ಕುಳಿತು ಮೂತ್ರ ವಿಸರ್ಜನೆ ಮಾಡಿದ್ದಾನೆ.

ಈ ಸೀಟ್‌ನಲ್ಲಿ 20 ವರ್ಷದ ಯುವತಿಯೊಬ್ಬಳು ಪ್ರಯಾಣ ಮಾಡುತ್ತಿದ್ದಳು. ಕುಡುಕ ಮೂತ್ರ ವಿಸರ್ಜನೆ ಮಾಡಿದ್ದ ವೇಳೆ ಆಕೆ ಊಟ ಮುಗಿಸಿಕೊಂಡು ವಾಪಾಸಾಗುತ್ತಿದ್ದಳು. ಆಗ ಕುಡುಕನ ವರ್ತನೆ ಕಂಡು ಯುವತಿ ಕೆಂಡಾಮಂಡಲವಾಗಿದ್ದಾಳೆ. ವಿಷಯವನ್ನು ಚಾಲಕ ಮತ್ತು ನಿರ್ವಾಹಕರಿಗೆ ತಿಳಿಸಿದ್ದಾಳೆ. ಬಳಿಕ ಕುಡುಕ ಪ್ರಯಾಣಿಕನಿಗೆ ಬಸ್ ಸಿಬ್ಬಂದಿ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದು, ಯುವತಿಗೆ ಸೀಟ್ ಅನ್ನು ಬದಲಿಸಿ ಕೊಟ್ಟಿದ್ದಾರೆ.

ಮಾತ್ರ ವಿಸರ್ಜನೆ ಮಾಡಿದ ವ್ಯಕ್ತಿ ನಿಲ್ಲಲು ಸಾಧ್ಯವಾಗದಷ್ಟು ಮದ್ಯಪಾನ ಮಾಡಿದ್ದು, ಆತನ ಮೈ ಮೇಲೆ ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿದ್ದ ಎನ್ನಲಾಗಿದೆ. ಈ ಬಗ್ಗೆ ಯುವತಿ ದೂರು ನೀಡಲು ಹಿಂದೇಟು ಹಾಕಿದ್ದಾಳೆ. ಬಸ್ ಚಾಲಕ ಸಂತೋಷ್ ಹಾಗೂ ನಿರ್ವಾಹಕ ಉಮೇಶ್ ಈ ಬಗ್ಗೆ ವಿಭಾಗೀಯ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ