ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಚ್ಚಿದ ಹಾವನ್ನೆ ಕಚ್ಚಿಕೊಂದ ವ್ಯಕ್ತಿ

Twitter
Facebook
LinkedIn
WhatsApp
ಕಚ್ಚಿದ ಹಾವನ್ನೆ ಕಚ್ಚಿಕೊಂದ ವ್ಯಕ್ತಿ

ಬಾಲಸೋರ್: ಬಸ್ತಾ ಪೊಲೀಸ್ ಠಾಣೆ ವ್ಯಾಪ್ತಿಯ ದಾರದಾ ಗ್ರಾಮದ ಸಲೀಲ್ ನಾಯಕ್ ಎಂಬಾತ ಸಿಟ್ಟಿನ ಭರದಲ್ಲಿ ನಾಗರಹಾವನ್ನು ಕೊಂದಿದ್ದಾನೆ. ಸರೀಸೃಪವು ತನ್ನ ಕಾಲಿಗೆ ಕುಟುಕಿದ್ದರಿಂದ ತಾನು ಅದನ್ನು ಕಚ್ಚಿ ಕೊಂದಿದ್ದಾನೆ. ಮಂಗಳವಾರ ಈ ಘಟನೆ ನಡೆದಿದ್ದು, ಸತ್ತ ಹಾವನ್ನು ಕೊರಳಿಗೆ ನೇತು ಹಾಕಿಕೊಂಡು ನಾಯಕ್ ತಿರುಗಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

ಇತ್ತೀಚೆಗೆ ಉಂಟಾಗಿದ್ದ ಪ್ರವಾಹದ ಬಳಿಕ ಪರಿಸ್ಥಿತಿಯನ್ನು ಪರಿಶೀಲಿಸಲು ಸಲೀಲ್ ತನ್ನ ಕೃಷಿಭೂಮಿಗೆ ಹೋಗುತ್ತಿದ್ದಾಗ ನಾಗರಹಾವು ಆತನ ಎಡಗಾಲಿಗೆ ಕಚ್ಚಿದೆ. ಇದರಿಂದ ಕೋಪಗೊಂಡ ಆತ, ಕಚ್ಚಿ ತಪ್ಪಿಸಿಕೊಂಡಿದ್ದ ಹಾವನ್ನು ಹುಡುಕಿ ಹಿಡಿದುಕೊಂಡಿದ್ದಾನೆ. ಬಳಿಕ ಅದು ಸಾಯುವವರೆಗೂ ಕಚ್ಚಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಬಳಿಕ ಸತ್ತ ನಾಗರ ಹಾವನ್ನು ಕೊರಳಿಗೆ ನೇತುಹಾಕಿಕೊಂಡು ದಾರದಾ ಮಾರುಕಟ್ಟೆಗೆ ತೆರಳಿದ್ದಾನೆ. ಇದನ್ನು ಕಂಡು ಅಲ್ಲಿದ್ದ ಸ್ಥಳೀಯರು ಆಸ್ಪತ್ರೆಗೆ ಹೋಗುವಂತೆ ಸೂಚಿಸಿದಾಗ ತಾನೊಬ್ಬ ಮಾಂತ್ರಿಕ ಎಂದು ಹೇಳಿ ಮಂತ್ರಘೋಷ ಹಾಕಿ ವಿಷವನ್ನು ಹೊರತೆಗೆದಿದ್ದಾಗಿ ತಿಳಿಸಿದ್ದಾನೆ.

ಬಾಲಸೋರ್ ಜಿಲ್ಲಾ ಅರಣ್ಯ ಅಧಿಕಾರಿ (ಡಿಎಫ್‌ಒ) ಆಯುಷ್ ಜೈನ್ ಅವರು ಮಾಹಿತಿ ಪಡೆದ ನಂತರ, ಅರಣ್ಯ ಸಿಬ್ಬಂದಿ ಸಲೀಲ್‌ನನ್ನು ಒಂದು ದಿನದ ಮಟ್ಟಿಗೆ ಬಂಧಿಸಿ ಅಂತಹ ಕೃತ್ಯಗಳನ್ನು ಪುನರಾವರ್ತಿಸದಂತೆ ಎಚ್ಚರಿಕೆ ನೀಡಿ ಬುಧವಾರ ಬಿಡುಗಡೆ ಮಾಡಿದ್ದಾರೆ.

‘ಸಲೀಲ್ ದೈಹಿಕವಾಗಿ ಸದೃಢವಾಗಿದ್ದರೂ ಮಾನಸಿಕವಾಗಿ ಅಸ್ವಸ್ಥ ಎಂದು ವರದಿಯಾಗಿದೆ. ಹೀಗಾಗಿ ಆತನನ್ನು ನೋಡಿಕೊಳ್ಳುವಂತೆ ಅವರ ಕುಟುಂಬಕ್ಕೆ ಸಲಹೆ ನೀಡಲಾಗಿದೆ’ ಎಂದು ಜೈನ್ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ