ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಬ್ಬಿಣ, ಗೋಧಿಹಿಟ್ಟನ್ನು ಬಳಸಿ KKRTC ಕಂಡಕ್ಟರ್ ಆಗಲು ಅಭ್ಯರ್ಥಿಗಳ ಖತರ್ನಾಕ್ ಐಡಿಯಾ!

Twitter
Facebook
LinkedIn
WhatsApp
ಕಬ್ಬಿಣ, ಗೋಧಿಹಿಟ್ಟನ್ನು ಬಳಸಿ KKRTC ಕಂಡಕ್ಟರ್ ಆಗಲು ಅಭ್ಯರ್ಥಿಗಳ ಖತರ್ನಾಕ್ ಐಡಿಯಾ!

ಕಲಬುರಗಿ: ಕಾಲಿನಲ್ಲಿ ಕಬ್ಬಿಣದ ಪೀಸ್​ಗಳು, ಒಳ ಉಡುಪಲ್ಲಿ ಕೆಜಿ ಕಲ್ಲು, ಶರ್ಟ್​ ಜೇಬು ಒಳಗೆ ಐರನ್ ಪೀಸ್​ಗಳನ್ನು ಇಟ್ಟುಕೊಂಡು ಬಂದು ಸರ್ಕಾರಿ ಹುದ್ದೆ ಪಡೆಯಬೇಕೆಂದು ಕೊಂಡಿದ್ದ ಖತರ್ನಾಕ್ ಕಿಲಾಡಿಗಳು ನಿನ್ನೆ ಸಿಕ್ಕಿಬಿದ್ದಿದ್ದರು. ಈಗ ಇದೇ ರೀತಿಯ ಮತ್ತೊಂದು ಐಡಿಯಾ ನೋಡಿ ಕೆಲಸ ಪಡೆಯಲೇ ಬೇಕು ಎಂದು ಬಂದಿದ್ದ ಮತ್ತೊಬ್ಬ ಕಿಲಾಡಿ ಸಿಕ್ಕಿಬಿದ್ದಿದ್ದಾನೆ. ಅಕ್ರಮವಾಗಿ ದೈಹಿಕ ಪರೀಕ್ಷೆ ಪಾಸಾಗಲು ತೊಡೆಗೆ ಗೋದಿ ಹಿಟ್ಟನ್ನು ಮೆತ್ತಿಕೊಂಡು ಬಂದಿದ್ದ ಓರ್ವ ಅಭ್ಯರ್ಥಿ ಕಳ್ಳಾಟ ಬಯಲಾಗಿದೆ.

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 1619 ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿ ಮಾಡಿಕೊಳ್ತಿದೆ. ಇದಕ್ಕೆ 38 ಸಾವಿರ ಅಭ್ಯರ್ಥಿಗಳು ಅರ್ಜಿ ಹಾಕಿದ್ದಾರೆ. ಮೊದಲ ಹಂತದಲ್ಲಿ, ದಾಖಲಾತಿ ಪರಿಶೀಲನೆ, ದೇಹದಾರ್ಡ್ಯ ಪರೀಕ್ಷೆ ನಡೆಸಲಾಗುತ್ತಿದೆ. ಚಾಲಕ ಕಂ ನಿರ್ವಾಹಕನಾಗಲು 55 ಕೆಜಿ ತೂಕ, 163 ಸೆಂಟಿ ಮೀಟರ್ ಎತ್ತರವಿರಬೇಕು. ಆದ್ರೆ, ಟೆಸ್ಟ್​ಗೆ ಬಂದಿದ್ದ ನಾಲ್ವರು ಖದೀಮರು ತೂಕ ಹೆಚ್ಚಳಕ್ಕಾಗಿ ಒಳ ಉಡುಪಲ್ಲಿ ಕೆಜಿ ಕಲ್ಲು, ಕಾಲುಗಳಿಗೆ, ಸೊಂಟಕ್ಕೆ ಕಬ್ಬಿಣದ ಪೀಸ್​ಗಳನ್ನು ಕಟ್ಟಿಕೊಂಡಿದ್ರು. ಅಲ್ಲದೇ ಶರ್ಟ್​​ ಒಳಗೆ ಜೇಬುಗಳನ್ನ ಮಾಡಿಸಿಕೊಂಡು ಕಬ್ಬಿಣದ ಪೀಸ್​ಗಳನ್ನು ಹುದುಗಿಸಿಟ್ಟಿದ್ರು. ಈ ಖದೀಮರ ಕಳ್ಳಾಟ ಕಂಡು ಅಧಿಕಾರಿಗಳೇ ಶಾಕ್ ಆಗಿದ್ದರು. ಇದೇ ರೀತಿಯ ಖತರ್ನಾಕ್ ಐಡಿಯಾ ಮಾಡಿಕೊಂಡು ಬಂದಿದ್ದ ಮತ್ತೋರ್ವ ಅಭ್ಯರ್ಥಿ ಸಿಕ್ಕಿಬಿದ್ದಿದ್ದಾನೆ.

ಅಕ್ರಮವಾಗಿ ದೈಹಿಕ ಪರೀಕ್ಷೆ ಪಾಸಾಗಲು ಯತ್ನಿಸಿದ ಓರ್ವ ಅಭ್ಯರ್ಥಿ ತನ್ನ ತೊಡೆಗೆ ಗೋದಿ ಹಿಟ್ಟನ್ನು ಮೆತ್ತಿಕೊಂಡು ಬಂದ್ದಿದ್ದಾನೆ. ಇಲಾಖೆಯ ಸಿಬ್ಬಂದಿ ಪರಿಶೀಲನೆ ವೇಳೆ ಅಭ್ಯರ್ಥಿ ಕಳ್ಳಾಟ ಬಯಲಾಗಿದೆ. ಸದ್ಯ ಅಭ್ಯರ್ಥಿಯನ್ನು ನೇಮಕಾತಿ ಪ್ರಕ್ರಿಯೆಯಿಂದಲೇ ಕೈಬಿಡಲಾಗಿದೆ. ಮಾನವೀಯತೆ ದೃಷ್ಟಿಯಿಂದ ಕೇಸ್​​ ದಾಖಲಿಸದೆ ಬಿಟ್ಟು ಕಳಿಸಲಾಗಿದೆ. ಹೆಚ್ಚು ತೂಕವನ್ನು ತೋರಿಸಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿರುವುದು ಇಲಾಖೆ ಅಧಿಕಾರಿಗಳಿಗೆ ತಲೆ ನೋವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist