ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಮಲ ಹುಟ್ಟುವುದು ಕೆಸರಲ್ಲಿ, ಅರಳಿದ ಮೇಲೆ ಮುದುಡಲೇ ಬೇಕು – ಸುರೇಶ್‌ಗೌಡ

Twitter
Facebook
LinkedIn
WhatsApp
file7g5zatjnnjrbji481931623374410

ಮಂಡ್ಯ: ಕಮಲ ಹುಟ್ಟುವುದು ಕೆಸರಲ್ಲಿ, ಅರಳಿದ ಮೇಲೆ ಮುದುಡಲೇ ಬೇಕು ಎನ್ನುವ ಮೂಲಕ ಬಿಜೆಪಿಗೆ ಸಂಸದೆ ಸುಮಲತಾ (Sumalatha Ambareesh) ಬೆಂಬಲ ಘೋಷಣೆ ವಿಚಾರವಾಗಿ ಜೆಡಿಎಸ್ (JDS) ಶಾಸಕ ಸುರೇಶ್‌ಗೌಡ (Suresh Gowda) ಕುಟುಕಿದರು.

ಮಂಡ್ಯ (Mandya) ಜಿಲ್ಲೆಯ ನಾಗಮಂಗಲದಲ್ಲಿ (Nagamangala) ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಬಿಜೆಪಿಗೆ ಬೆಂಬಲ ನೀಡಿದ್ದು ಅವರ ವೈಯಕ್ತಿಕ ನಿರ್ಧಾರ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಒಂದು ಬಿಟ್ಟು ಕಾಂಗ್ರೆಸ್, ಬಿಜೆಪಿ, ರೈತ ಸಂಘ, ಸ್ವಾಭಿಮಾನ ಎಲ್ಲಾ ಒಂದೇ. ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಜಿಲ್ಲೆಯಲ್ಲಿ ಪರಸ್ಪರ ಅವರು ಎಂದಿಗೂ ಬೈದುಕೊಳ್ಳುವುದಿಲ್ಲ. ಎರಡೂ ಪಕ್ಷದವರು ಸೇರಿ ಜೆಡಿಎಸ್ ಪಕ್ಷವನ್ನು ಬೈಯುತ್ತಾರೆ ಎಂದರು. 

ಸುಮಲತಾ ದೊಡ್ಡವರಿದ್ದಾರೆ, ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಸುಮಲತಾ ಮೇಲೆ ಹಲ್ಲೆ ನಡೆದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಬಹುದು, ಆ ಕೆಲಸ ಮಾಡಲಿ. ನಾವು ಅಭಿವೃದ್ಧಿ ಮಾಡಿದರೆ ಜನ ನಮ್ಮ ಕೈ ಹಿಡಿಯುತ್ತಾರೆ. ಇಲ್ಲದಿದ್ದರೆ ಮನೆಗೆ ಕಳುಹಿಸುತ್ತಾರೆ. ಕಮಲ ಹುಟ್ಟುವುದು ಕೆಸರಲ್ಲಿ, ಅರಳಿದ ಮೇಲೆ ಮುದುಡಲೇ ಬೇಕು. ಮೋದಿ (Narendra Modi) ಅವರಿಗೆ ದೇವೇಗೌಡರ (H.D.Deve Gowda) ಮೇಲೆ ಗೌರವವಿದೆ. ಹಾಗಾಗಿ ಅವರು ಜೆಡಿಎಸ್ ವಿರುದ್ಧ ಮಾತನಾಡುವುದಿಲ್ಲ. ಇದನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದು ಸುಮಲತಾ ಅವರ ಕಾಲೆಳೆದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ