![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಕಾಂಗ್ರೆಸ್ ಹೈಕಮಾಂಡ್ ಆಯೋಜಿಸಿದ ಡಿಜಿಟಲ್ ಸದಸ್ಯತನ ಕಾರ್ಯಕ್ರಮಕ್ಕೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ
ವ್ಯಕ್ತವಾಗಿದೆ.ಕರಾವಳಿಯ ಬಹುತೇಕ ವಿಧಾನಸಭಾ ಕ್ಷೇತ್ರಗಳು ಹೆಚ್ಚಿನ ಸಾಧನೆಯನ್ನು ಮಾಡಿಲ್ಲ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಸದಸ್ಯತನ ನೊಂದಾವಣೆ ಯಾಗಿದೆ. ಇದುವರೆಗೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35,000 ಸದಸ್ಯತನ ನೊಂದಾವಣೆ ಯಾಗಿದೆ.
ರಾಜ್ಯ ಕಾಂಗ್ರೆಸ್ 3 ಲಕ್ಷ ಸದಸ್ಯತನ ನೋಂದಾವಣಿ ಯ ಗುರಿಯನ್ನು ನೀಡಿತು. ಉಡುಪಿ ಜಿಲ್ಲೆಗೆ ಎರಡು ಲಕ್ಷದ ಸದಸ್ಯತನ ದ ಗುರಿಯನ್ನು ನೀಡಿತು. ಆದರೆ ಇದುವರೆಗೆ 25,000 ಸದಸ್ಯರು ನೊಂದಾವಣಿ ಯಾಗಿದ್ದಾರೆ.ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಆದರೆ ಪಂಜಾಬಿನ ಚುನಾವಣೆಯ ನಂತರ ಆಮ್ ಆದ್ಮಿ ಪಕ್ಷಕ್ಕೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ ಎಂದು ತಿಳಿದುಬಂದಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ. ಸಮಾಜಸೇವೆಯಲ್ಲಿ ಆಸಕ್ತಿ ಇರುವ, ಹೋರಾಟದ ಮನೋಭಾವ ಹೊಂದಿರುವ ಹಲವಾರು ವ್ಯಕ್ತಿಗಳು ಆಮ್ ಆದ್ಮಿ ಯತ್ತ ಕರಾವಳಿಯಲ್ಲಿ ಒಲವು ತೋರುತ್ತಿದ್ದಾರೆ ಎಂದು ತಿಳಿದುಬಂದಿದೆ.ವಿದ್ಯಾವಂತ, ಸಮಾಜಸೇವೆ ಆಸಕ್ತಿ ಇರುವ ಹಲವಾರು ಮಂದಿ ಈಗಾಗಲೇ ಅಮ್ ಆದ್ಮಿ ಪಕ್ಷವನ್ನು ಸಂಪರ್ಕಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವೀಕ್ಷಕರಾದ ಅಶೋಕ್ ಎಡಮಲೆ ತಿಳಿಸಿದ್ದಾರೆ.
ಕರಾವಳಿಯಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಜನರು ಹಾಗೂ ಕಾರ್ಯಕರ್ತರು ಭ್ರಮನಿರಸನ ವನ್ನು ಹೊಂದಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಿದ್ದಾರೆ. ಒಂದು ವೇಳೆ ಈ ಸ್ಥಿತಿ ಮುಂದುವರಿದರೆ, ಪಕ್ಷದ ಬೆಳವಣಿಗೆಗೆ ಬಹಳಷ್ಟು ಮಾರಕವಾಗಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.ಈ ನಡುವೆ ಕರಾವಳಿಯಲ್ಲಿ ಆಮ್ ಆದ್ಮಿ ಪಕ್ಷ ಹೊಸ ಸಂಚಲನವನ್ನು ಮೂಡಿಸುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸ್ವಲ್ಪ ದಿಗಿಲು ಉಂಟಾಗುವಂತೆ ಮಾಡಿದೆ. ಇನ್ನೊಂದು ಬದಿಯಲ್ಲಿ ಬಿಜೆಪಿ ಈ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ತಿಳಿದುಬಂದಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist