ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರಾವಳಿ ಜಿಲ್ಲೆಗೆ ರೆಡ್‌ ಅಲರ್ಟ್, ಮಹಾಮಳೆಗೆ ತತ್ತರಿಸಿದ ರಾಜ್ಯದ 7 ಜಿಲ್ಲೆ!

Twitter
Facebook
LinkedIn
WhatsApp
ಕರಾವಳಿ ಜಿಲ್ಲೆಗೆ ರೆಡ್‌ ಅಲರ್ಟ್, ಮಹಾಮಳೆಗೆ ತತ್ತರಿಸಿದ ರಾಜ್ಯದ 7 ಜಿಲ್ಲೆ!

ಬೆಂಗಳೂರು (ಜು.7): ರಾಜ್ಯದ ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆ ಬುಧವಾರ ಕೊಂಚ ಇಳಿಮುಖವಾಗಿದ್ದರೂ ನಿರಂತರ ಮಳೆ ಮುಂದುವರಿದಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುರುವಾರ ರೆಡ್‌ ಅಲರ್ಚ್‌ ಘೋಷಣೆ ಮಾಡಲಾಗಿದ್ದು ಉತ್ತರ ಕನ್ನಡದಲ್ಲೂ ಆರೆಂಜ್‌ ಅಲರ್ಚ್‌ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೂರೂ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಏತನ್ಮಧ್ಯೆ ಭಾರೀ ಮಳೆಗೆ ಭೂಕುಸಿತವುಂಟಾಗಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡದ ಬಂಟ್ವಾಳದಿಂದ ವರದಿಯಾಗಿದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಘಟ್ಟಪ್ರದೇಶಗಳಲ್ಲೂ ಭಾರೀ ಮಳೆ ಮುಂದುವರಿದಿದ್ದು ಕೊಡಗಿನ ಜಿಲ್ಲೆಯ ಎಲ್ಲ ಶಾಲೆ ಕಾಲೇಜುಗಳಿಗೆ ಮತ್ತು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಕಳಸ, ಎನ್‌.ಆರ್‌.ಪುರ, ಮೂಡಿಗೆರೆ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೂ 4 ದಿನಗಳ ಕಾಲ ಗಾಳಿಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, 20.45 ಸೆಂ.ಮೀ.ಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಮುಖ್ಯವಾಗಿ ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಸುರಿದ ಮಳೆಗೆ 8 ಮನೆಗಳಿಗೆ ಭಾಗಶಃ ಹಾನಿಯಾಗಿದ್ದರೆ, 4 ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ. 81 ವಿದ್ಯುತ್‌ ಕಂಬಗಳು ಮುರಿದಿವೆ. ಜೊತೆಗೆ ಉಳ್ಳಾಲದ ಉಚ್ಚಿಲ ಸೀಗ್ರೌಂಡಿನಲ್ಲಿ ಕಡಲ್ಕೊರೆತ ಮುಂದುವರಿದಿದ್ದು ಅನೇಕ ಮನೆಗಳು ಅಪಾಯದ ಅಂಚಿನಲ್ಲಿವೆ.

ಧಾರಾಕಾರ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪಂಜಿಕಲ್ಲು ಸಮೀಪ ನೇಲ್ಯಪಲ್ಕೆ ಸಮೀಪ ಕಜೆಬೈಲು ಎಂಬಲ್ಲಿ ಶೆಡ್‌ ಮನೆಯ ಮೇಲೆ ಧರೆಕುಸಿದು ಕೇರಳ ಮೂಲದ ನಾಲ್ವರು ರಬ್ಬರ್‌ ಟ್ಯಾಪಿಂಗ್‌ ಕಾರ್ಮಿಕರು ಅದರಡಿ ಸಿಲುಕಿಕೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ. ಈ ಪೈಕಿ ಮೂವರನ್ನು ರಕ್ಷಿಸಲಾಗಿದ್ದು, ಒಬ್ಬ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಧಾರಾಕಾರ ಮಳೆಗೆ ಜಿಲ್ಲಾದ್ಯಂತ ತುಂಬಿ ಹರಿಯುತ್ತಿದ್ದ ನದಿಗಳಲ್ಲಿ ಬುಧವಾರವೂ ನೀರಿನ ಹರಿವು ಕಡಿಮೆಯಾಗಿರಲಿಲ್ಲ. ಕೋಟ ಸಮೀಪದ ಹತ್ತಾರು ಮನೆಗಳು ಜಲಾವೃತವಾಗಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಬುಧವಾರ ರಕ್ಷಣಾ ಕಾರ್ಯ ನಡೆಸಿ, ಅಲ್ಲಿನ ಜನರನ್ನು ಸ್ಥಳಾಂತರಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಸಿದ್ಧಾಪುರ, ಕುಮಟಾ, ಭಟ್ಕಳಗಳಲ್ಲಿ ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ಗಂಗಾವಳಿ ನದಿಯಲ್ಲಿ ಅಪಾಯದಲ್ಲಿ ಸಿಲುಕಿದ್ದ ಬೋಟ್‌ನಿಂದ ಐವರನ್ನು ರಕ್ಷಿಸಲಾಗಿದೆ. ಯಲ್ಲಾಪುರದಲ್ಲಿ ಭಾರಿ ಮಳೆಗೆ ಶಾಲಾ ಆವರಣ ಗೋಡೆ ಕುಸಿದಿದೆ. ಯಲ್ಲಾಪುರ ಹಾಗೂ ಸಿದ್ಧಾಪುರದಲ್ಲಿ ಮಳೆ ಮುಂದುವರಿದಲ್ಲಿ ಗಂಗಾವಳಿ ಹಾಗೂ ಅಘನಾಶಿನಿ ನದಿಯಲ್ಲಿ ನೀರಿನ ಮಟ್ಟಏರಲಿದೆ.

ಇನ್ನು ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಹಾಸನ, ಅರಕಲಗೂಡನಲ್ಲಿ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಹಠಾತ್ತನೆ ಹಿಡಿದ ಮಳೆಯಿಂದಾಗಿ ಭತ್ತದ ಕೃಷಿ ಚಟುವಟಿಕೆಗೆ ತೀವ್ರ ಹಿನ್ನಡೆಯಾಗಿದೆ. ಅರಕಲಗೂಡು ತಾಲೂಕಿನ ದುಮ್ಮಿ ಗ್ರಾಮದಲ್ಲಿ ಮನೆಯೊಂದರ ಗೋಡೆ ಕುಸಿದಿದ್ದು, ಮನೆಯಲ್ಲಿದ್ದ ವೃದ್ಧೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಏತನ್ಮಧ್ಯೆ ಉತ್ತರ ಕರ್ನಾಟಕ ಭಾಗದ ಬೆಳಗಾವಿ ಜಿಲ್ಲೆಯಾದ್ಯಂತ ಮಳೆ ಬುಧವಾರವೂ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿಯೂ ಮಳೆ ಮುಂದುವರೆದಿರುವುದರಿಂದ ಕೃಷ್ಣಾ ನದಿಯ ಉಪನದಿಗಳಾದ ವೇದಗಂಗಾ, ದೂಧಗಂಗಾ ನದಿಗಳು ತುಂಬಿ ಹರಿಯುತ್ತಿವೆ. ಆದರೆ ಎಲ್ಲಿಯೂ ಪ್ರವಾಹ ಉಂಟಾಗಿಲ್ಲ. ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲೂ ಮಂಗಳವಾರ ತೀವ್ರವಾಗಿದ್ದ ಮಳೆಯ ಪ್ರಮಾಣ ಬುಧವಾರ ತೀರಾ ಇಳಿಮುಖವಾಗಿದೆ.

ಹೆದ್ದಾರಿ ಟೆಂಟ್‌ಗಳಲ್ಲಿರುವ 25 ಕುಟುಂಬ ಅಪಾಯದಲ್ಲಿ : ಹಾಸನ ಜಿಲ್ಲೆಯ ಪೈಕಿ ಸಕಲೇಶಪುರ ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ 75 ರ ಕಾಮಗಾರಿ ನಡೆಯುತ್ತಿದ್ದು, ಇದಕ್ಕಾಗಿ ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದಿಂದ ನೂರಾರು ಕಾರ್ಮಿಕರು ಬಂದಿದ್ದಾರೆ. ಆದರೆ, ಇವರಿಗೆಲ್ಲಾ ಉಳಿಯಲು ಸರಿಯಾದ ವ್ಯವಸ್ಥೆ ಇಲ್ಲದೆ ಸಕಲೇಶಪುರ ತಾಲೂಕಿನ ದೋಣಿಗಾಲ್‌ ಬಳಿ ರಸ್ತೆಬದಿಯಲ್ಲಿ ಟೆಂಟ್‌ ಹಾಕಿಕೊಂಡಿದ್ದಾರೆ. ಗುತ್ತಿಗೆದಾರರು ಕಾರ್ಮಿಕರು ತಂಗಲು ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ. ಹಾಗಾಗಿ ಸುಮಾರು 80 ಮಂದಿ ಗುಡ್ಡದ ಕೆಳಗೆ ಟೆಂಟ್‌ ಹಾಕಿಕೊಂಡು ಪ್ರಾಣ ಭಯದಲ್ಲೇ ದಿನ ದೂಡುತ್ತಿದ್ದಾರೆ. ಒಂದು ವೇಳೆ ಗುಡ್ಡವೇನಾದರು ಕುಸಿದಲ್ಲಿ ಭಾರೀ ಅನಾಹುತ ಸಂಭವಿಸಲಿದೆ.

ಮಂಗಳೂರು-ಮಡಿಕೇರಿ ಹೆದ್ದಾರಿಗೆ ಮತ್ತೆ ಬರೆ ಕುಸಿತ:   ಕೊಡಗು ಜಿಲ್ಲೆಯಲ್ಲೂ ಮಳೆ ಅನಾಹುತ ಮುಂದುವರಿದಿದ್ದು ಮಡಿಕೇರಿ- ಮಂಗಳೂರು ರಾಷ್ಟ್ರೀಯ ರಸ್ತೆಯಲ್ಲಿ ಮತ್ತೆ ಬರೆ ಕುಸಿತ ಉಂಟಾಗಿದೆ. ಹೆದ್ದಾರಿಯ ಕರ್ತೋಜಿ ಎಂಬಲ್ಲಿ ಭಾರಿ ಗಾತ್ರದ ಮಣ್ಣು ಕುಸಿದ ಪರಿಣಾಮ ಕೆಲ ಕಾಲ ರಸ್ತೆ ಸಂಚಾರಕ್ಕೆ ತೊಡಕುಂಟಾಯಿತು. ಇದರಿಂದಾಗಿ ರಸ್ತೆಯ ಒಂದು ಬದಿಯಲ್ಲಿ ಮಾತ್ರ ವಾಹನಗಳು ಸಂಚರಿಸುವಂತಾಗಿದೆ. ಮಳೆ ಹೆಚ್ಚಾದರೆ ಮತ್ತಷ್ಟುಮಣ್ಣು ಕುಸಿದು ಸಂಚಾರ ಬಂದ್‌ ಆಗುವ ಸಾಧ್ಯತೆ ಕಂಡುಬರುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist