ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿ ಭಾಗದ ಪರಂಪರೆ ಸಾರುವ ‘ಕುದ್ರು’ ಸಿನಿಮಾ

Twitter
Facebook
LinkedIn
WhatsApp
ಕರಾವಳಿ ಭಾಗದ ಪರಂಪರೆ ಸಾರುವ ‘ಕುದ್ರು’ ಸಿನಿಮಾ

ತ್ತೀಚಿಗೆ ದಕ್ಷಿಣ ಕನ್ನಡದ ಭವ್ಯ ಪರಂಪರೆಯ ಕುರಿತಾದ ಚಿತ್ರಗಳು ಹೆಚ್ಚು ಬರುತ್ತಿದೆ‌. “ಕುದ್ರು” ಸಹ ಅದೇ ಸುಂದರ ಪರಿಸರದಲ್ಲಿ  ನಡೆಯವ ಕಥೆ.  ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು.  ನಾನು ಮೂಲತಃ ಉಡುಪಿಯವನು.  ನೀರಿನಿಂದ ಸುತ್ತುವರೆದ ದ್ವೀಪವನ್ನು ತುಳುವಿನಲ್ಲಿ “ಕುದ್ರು ಎನ್ನುತ್ತಾರೆ. ಈ ಚಿತ್ರದ ಕಥೆಯನ್ನು ನಾನೇ ಬರೆದಿದ್ದೇನೆ. ಮಧು ವೈ ಜಿ ಹಳ್ಳಿ ನಿರ್ದೇಶನ ಮಾಡಿದ್ದಾರೆ. “ಕುದ್ರು” ದ್ವೀಪದಲ್ಲಿ  ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಮೂರು ಪಂಗಡದವರು ವಾಸಿಸುತ್ತಿರುತ್ತಾರೆ. ಎಲ್ಲರೂ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಈ ರೀತಿಯಲ್ಲಿ ನಮ್ಮ ಚಿತ್ರದ ಕಥೆ ಸಾಗುತ್ತದೆ. ಉಡುಪಿ, ಬೆಂಗಳೂರು, ಗೋವಾ  ಹಾಗೂ ಸೌದಿ ಅರೇಬಿಯಾದಲ್ಲಿ ಚಿತ್ರೀಕರಣ ಮಾಡಿದ್ದೇವೆ. ಇಂದು ಅಭಿಮಾನ್ ಸ್ಟುಡಿಯೋದಲ್ಲಿ ಹಾಡಿನ ಚಿತ್ರೀಕರಣ ಮಾಡಿತ್ತಿದ್ದೇವೆ. ಈ ಹಾಡಿಗೆ ಹೆಜ್ಜೆ ಹಾಕಲು ದೂರದ ದೆಹಲಿಯಿಂದ ನಟಿ ನಮ್ರತಾ ಮಲ್ಲ ಬಂದಿದ್ದಾರೆ ಎಂದರು ನಿರ್ಮಾಪಕ ಹಾಗೂ ಕಥೆಗಾರ ಭಾಸ್ಕರ್ ನಾಯಕ್.

“ಕುದ್ರು” ನನ್ನ ಮೊದಲ ನಿರ್ದೇಶನದ ಚಿತ್ರ. ಒಂದು ಸಣ್ಣ ದ್ವೀಪದಲ್ಲಿ ಬೇರೆಬೇರೆ ಸಮುದಾಯದವರು ಸಾಮರಸ್ಯದಿಂದ ಬಾಳುತ್ತಿದಾಗ, ಒಂದು ವಾಟ್ಸಾಪ್ ಸಂದೇಶ ಹೇಗೆ ಅಶಾಂತಿಯನ್ನು  ತಂದು ಹಾಕುತ್ತದೆ ಹಾಗೂ ಬಂದ ತೊಂದರೆಯನ್ನು ನಿವಾರಣೆ ಮಾಡಿಕೊಂಡು‌ ಮತ್ತೆ ಸಾಮರಸ್ಯದಿಂದ ಹೇಗೆ ಜೀವನ ನಡೆಸಬಹುದು ಎಂಬುದನ್ನು “ಕುದ್ರು” ಚಿತ್ರದಲ್ಲಿ ತೋರಿಸುತ್ತಿದ್ದೇವೆ. ಹರ್ಷಿತ್ ಶೆಟ್ಟಿ, ಗಾಡ್ವಿನ್ ಹಾಗೂ ಫರ್ಹಾನ್ ಚಿತ್ರದ ನಾಯಕರಾಗಿ ನಟಿಸಿದ್ದು, ಪ್ರಿಯಾ ಹೆಗ್ಡೆ, ವಿನುತ ಹಾಗೂ ಡೈನ ಡಿಸೋಜ ನಾಯಕಿಯಾಗಿ ಅಭಿನಯಿಸಿದ್ದಾರೆ. ಮೂವರು ನಾಯಕರು ನಮ್ರತಾ ಅವರೊಂದಿಗೆ  ಅಭಿನಯಿಸುತ್ತಿರುವ ಈ ಹಾಡಿನ ಚಿತ್ರೀಕರಣದೊಂದಿಗೆ ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯವಾಗಲಿದೆ.‌ ಪ್ರತೀಕ್ ಕುಂಡು ಸಂಗೀತ ನಿರ್ದೇಶನ ಹಾಗೂ ದೀಪು ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.  ಎಪ್ಪತ್ತಕ್ಕೂ ಅಧಿಕ ಭಾಗದ ಚಿತ್ರೀಕರಣ ರೈನ್ ಎಫೆಕ್ಟ್ ನಲ್ಲೇ ನಡೆದಿರುವುದು ಚಿತ್ರದ ವಿಶೇಷ ಎಂದರು ನಿರ್ದೇಶಕ ಮಧು ವೈ ಜಿ ಹಳ್ಳಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ