ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರ್ನಾಟಕದಲ್ಲಿ ಮೊದಲ ಬಾರಿಗೆ ಬೆಂಗ್ಳೂರಲ್ಲಿ ಸಿಸಿಟಿವಿ ಕಂಟ್ರೋಲ್ ರೂಮ್ ಸ್ಥಾಪನೆ..!

Twitter
Facebook
LinkedIn
WhatsApp
ಕರ್ನಾಟಕದಲ್ಲಿ ಮೊದಲ ಬಾರಿಗೆ ಬೆಂಗ್ಳೂರಲ್ಲಿ ಸಿಸಿಟಿವಿ ಕಂಟ್ರೋಲ್ ರೂಮ್ ಸ್ಥಾಪನೆ..!

ಬೆಂಗಳೂರು: ಹೆಚ್ಚಾಗುತ್ತಿರುವ ಅಪರಾಧ ತಡೆಗಟ್ಟಲು ಹಾಗೂ ಜನರಲ್ಲಿ ಅಪರಾಧ ತಡೆ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯದಲ್ಲೇ ಮೊದಲ ಬಾರಿಗೆ 20 ಕೋಟಿ ವೆಚ್ಚದಲ್ಲಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಸಿಸಿಟಿವಿ ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದ್ದು ನಿನ್ನೆ(ಗುರುವಾರ) ಗೃಹ ಸಚಿವ ಆರಗ ಜ್ಞಾನೇಂದ್ರ ಚಾಲನೆ ನೀಡಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆ ಹಾಗೂ ಶಾಸಕ ಮುನಿರತ್ನ ಅವರ ಕೇತ್ರನುದಾನದಡಿ ಯಶವಂತಪುರ ಠಾಣೆಯಲ್ಲಿ ಸಿಸಿಟಿವಿ ನಿಯಂತ್ರಣ ಕೇಂದ್ರವನ್ನು ಸಚಿವರಾದ ಆರಗ ಜ್ಞಾನೇಂದ್ರ ಹಾಗೂ ಸ್ಥಳೀಯ ಶಾಸಕ ಹಾಗೂ ಸಂಸದ ಮುನಿರತ್ನ ಅವರು ಉದ್ಘಾಟಿಸಿದರು. ನಗರದಲ್ಲಿ  ದಿನೇ ದಿನೆ ಹೆಚ್ಚಾಗುತ್ತಿರುವ ಅಪರಾಧ ತಡೆಗಟ್ಟಲು ಹಾಗೂ ಅರಿವು ಮೂಡಿಸಲು ನೂತನ ಕಂಟ್ರೋಲ್ ರೂಮ್ ಸಹಕಾರಿಯಾಗಲಿದೆ.

ನಿಯಂತ್ರಣ ಕೇಂದ್ರದಲ್ಲಿ ಠಾಣಾ ವ್ಯಾಪ್ತಿಯ ರೈಲು-ಬಸ್ ನಿಲ್ದಾಣಗಳು, ಧಾರ್ಮಿಕ ಕೇಂದ್ರಗಳು ಹಾಗೂ ಜನಸಂದಣಿ ಪ್ರದೇಶ ಸೇರಿದಂತೆ 24 ಆಯಕಟ್ಟಿನ ಜಾಗಗಳಲ್ಲಿ 63 ಕ್ಯಾಮರ ಅಳವಡಿಸಲಾಗಿದೆ. ಇದಕ್ಕೆ ಕೇಬಲ್ ಗಳನ್ನ ನೆಲದಡಿ ಹಾಕಲಾಗಿದೆ.

ಕ್ಯಾಮರ ಅಳವಡಿಸಲಾದ ಜಾಗಗಳಲ್ಲಿ ಧ್ವನಿವರ್ಧಕ ಹಾಕಲಾಗಿದೆ. ಕೇಂದ್ರ ಕಚೇರಿಯಿಂದಲೇ ಪೊಲೀಸ್ ಸಿಬ್ಬಂದಿ ನಿರ್ದೇಶನ ನೀಡಿದರೆ ಎಲ್ಲಾ ಕಡೆಗಳಲ್ಲಿ ಏಕಕಾಲದಲ್ಲಿ ಬರಲಿದೆ. ವಿವಿಧ ಅಪರಾಧ ಕೃತ್ಯವೆಸಗಿ ಆರೋಪಿಗಳು ಪರಾರಿಯಾದರೆ ಅಥವಾ ಅನುಮಾನಸ್ಪಾದವಾಗಿ ವ್ಯಕ್ತಿ ಹಾಗೂ ವಸ್ತು ಕಂಡುಬಂದರೆ ಕೂಡಲೇ ಸಿಬ್ಬಂದಿ ನಿರ್ದೇಶನ ನೀಡಬಹುದಾಗಿದೆ. ಹಬ್ಬ-ಹರಿದಿನ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಅಪರಾಧ ನಡೆಯದ ಹಾಗೇ ಮುಂಜಾಗ್ರತ ಕ್ರಮಗಳ ಕುರಿತು ಅರಿವು ಮೂಡಿಸಲು ನೆರವಾಗಿದೆ. ಪ್ರಾಯೋಗಿಕವಾಗಿ ಯಶವಂತಪುರ ಠಾಣೆಯಲ್ಲಿ ಸಿಸಿಟಿವಿ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಯಶಸ್ವಿಯಾದರೆ ಅಗತ್ಯನುಗುಣವಾಗಿ ನಗರದ ವಿವಿಧ ಠಾಣೆಗಳಲ್ಲಿ ನಿಯಂತ್ರಣ ಕಚೇರಿ ಸ್ಥಾಪನೆ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದರು.

ಪಿಎಫ್ಐ ಮುಖಂಡರು ರಾಮಮಂದಿರ ಸ್ಫೋಟಿಸಲು ಸಂಚು ಆರೋಪ ಸಂಬಂಧ ಪ್ರತಿಕ್ರಿಯಿಸಿದ ಆರಗ ಜ್ಞಾನೇಂದ್ರ ಅವರು,. ವಿಚಾರಣೆ ವೇಳೆ ಅನೇಕ ಸಂಗತಿ ಹೊರಬರುತ್ತಿವೆ. ಶಾಂತಿಕದಡುವ ಮತ್ತು ರಕ್ತಪಾತ ನಡೆಸಲು ಸಂಚು ರೂಪಿಸಲಾಗಿತ್ತು. ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಖ್ಯೆಯಲ್ಲಿ ಬಂಧನವಾಗಬಹುದು. ಪ್ರಕರಣ ಕುರಿತಂತೆ ಗೃಹ ಸಚಿವನಾಗಿ ಏನು ಹೇಳುವುದಿಲ್ಲ. ತನಿಖಾ ಹಂತದಲ್ಲಿರುವುದರಿಂದ ಈ ಬಗ್ಗೆ ಏನು ಹೇಳುವುದಿಲ್ಲ ಎಂದರು.

ಇನ್ನೂ ಸಹಶಿಕ್ಷಕರ ಅಕ್ರಮ ನೇಮಕ ಸಂಬಂಧ ಮಾತನಾಡಿದ ಸಚಿವರು ಪ್ರಕರಣ ಸಂಬಂಧ 59 ಶಿಕ್ಷಕರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಕಾಲದಲ್ಲಿ ಅಕ್ರಮ ನಡೆದಿತ್ತು. ಅದನ್ನು ಮುಚ್ಚಿಡಲಾಗಿತ್ತು. ಇದಕ್ಕೆ ಸಾಕ್ಷ್ಯಾಧಾರ ಲಭ್ಯವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿ ಬಂಧನವಾಗಲಿದ್ದಾರೆ. ಪಿಎಸ್ಐ ಕೇಸ್ ನಲ್ಲಿ ಐಪಿಎಸ್ ಅಧಿಕಾರಿ ಸೇರಿ 102 ಮಂದಿಯನ್ನ ಬಂಧಿಸಲಾಗಿದೆ. ವಸ್ತುಗಳ ಹಾಗೇ ಸರ್ಕಾರಿ ಉದ್ಯೋಗವನ್ನು ಹಣ ನೀಡಿ ಪಡೆಯುವುದು ಎಷ್ಟು ಸರಿ ? ಕಷ್ಟಪಟ್ಟು ಓದಿದ ಅಭ್ಯರ್ಥಿಗಳು ಎಲ್ಲಿಗೆ ಹೋಗಬೇಕು ಎಂದು ಕಳವಳ ವ್ಯಕ್ತಪಡಿಸಿದರು.

ಕಾಂತಾರ ಸಿನಿಮಾ ಬಗ್ಗೆ ನಟ ಚೇತನ್ ಟ್ವೀಟ್ ಗೆ ಕುರಿತಂತೆ ಪ್ರತಿಕ್ರಿಯಿಸಿ ಸಿನಿಮಾದ ಬಗ್ಗೆ ವಿಮರ್ಶೆ ಮಾಡಲಿ. ಅದು ಬಿಟ್ಟು ಧರ್ಮದ ಬಗ್ಗೆ ಮಾತನಾಡುವುದು ಸರಿಯಲ್ಲ. ಯಾರಿಗೂ ಶೋಭೆ ತರುವುದಿಲ್ಲ. ಚೇತನ್ ವಿರುದ್ಧ ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist