ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕದಲ್ಲಿ ಮೊದಲ ಬಾರಿಗೆ ಬೆಂಗ್ಳೂರಲ್ಲಿ ಸಿಸಿಟಿವಿ ಕಂಟ್ರೋಲ್ ರೂಮ್ ಸ್ಥಾಪನೆ..!

Twitter
Facebook
LinkedIn
WhatsApp
ಕರ್ನಾಟಕದಲ್ಲಿ ಮೊದಲ ಬಾರಿಗೆ ಬೆಂಗ್ಳೂರಲ್ಲಿ ಸಿಸಿಟಿವಿ ಕಂಟ್ರೋಲ್ ರೂಮ್ ಸ್ಥಾಪನೆ..!

ಬೆಂಗಳೂರು: ಹೆಚ್ಚಾಗುತ್ತಿರುವ ಅಪರಾಧ ತಡೆಗಟ್ಟಲು ಹಾಗೂ ಜನರಲ್ಲಿ ಅಪರಾಧ ತಡೆ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯದಲ್ಲೇ ಮೊದಲ ಬಾರಿಗೆ 20 ಕೋಟಿ ವೆಚ್ಚದಲ್ಲಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಸಿಸಿಟಿವಿ ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದ್ದು ನಿನ್ನೆ(ಗುರುವಾರ) ಗೃಹ ಸಚಿವ ಆರಗ ಜ್ಞಾನೇಂದ್ರ ಚಾಲನೆ ನೀಡಿದ್ದಾರೆ.

ಸ್ಮಾರ್ಟ್ ಸಿಟಿ ಯೋಜನೆ ಹಾಗೂ ಶಾಸಕ ಮುನಿರತ್ನ ಅವರ ಕೇತ್ರನುದಾನದಡಿ ಯಶವಂತಪುರ ಠಾಣೆಯಲ್ಲಿ ಸಿಸಿಟಿವಿ ನಿಯಂತ್ರಣ ಕೇಂದ್ರವನ್ನು ಸಚಿವರಾದ ಆರಗ ಜ್ಞಾನೇಂದ್ರ ಹಾಗೂ ಸ್ಥಳೀಯ ಶಾಸಕ ಹಾಗೂ ಸಂಸದ ಮುನಿರತ್ನ ಅವರು ಉದ್ಘಾಟಿಸಿದರು. ನಗರದಲ್ಲಿ  ದಿನೇ ದಿನೆ ಹೆಚ್ಚಾಗುತ್ತಿರುವ ಅಪರಾಧ ತಡೆಗಟ್ಟಲು ಹಾಗೂ ಅರಿವು ಮೂಡಿಸಲು ನೂತನ ಕಂಟ್ರೋಲ್ ರೂಮ್ ಸಹಕಾರಿಯಾಗಲಿದೆ.

ನಿಯಂತ್ರಣ ಕೇಂದ್ರದಲ್ಲಿ ಠಾಣಾ ವ್ಯಾಪ್ತಿಯ ರೈಲು-ಬಸ್ ನಿಲ್ದಾಣಗಳು, ಧಾರ್ಮಿಕ ಕೇಂದ್ರಗಳು ಹಾಗೂ ಜನಸಂದಣಿ ಪ್ರದೇಶ ಸೇರಿದಂತೆ 24 ಆಯಕಟ್ಟಿನ ಜಾಗಗಳಲ್ಲಿ 63 ಕ್ಯಾಮರ ಅಳವಡಿಸಲಾಗಿದೆ. ಇದಕ್ಕೆ ಕೇಬಲ್ ಗಳನ್ನ ನೆಲದಡಿ ಹಾಕಲಾಗಿದೆ.

ಕ್ಯಾಮರ ಅಳವಡಿಸಲಾದ ಜಾಗಗಳಲ್ಲಿ ಧ್ವನಿವರ್ಧಕ ಹಾಕಲಾಗಿದೆ. ಕೇಂದ್ರ ಕಚೇರಿಯಿಂದಲೇ ಪೊಲೀಸ್ ಸಿಬ್ಬಂದಿ ನಿರ್ದೇಶನ ನೀಡಿದರೆ ಎಲ್ಲಾ ಕಡೆಗಳಲ್ಲಿ ಏಕಕಾಲದಲ್ಲಿ ಬರಲಿದೆ. ವಿವಿಧ ಅಪರಾಧ ಕೃತ್ಯವೆಸಗಿ ಆರೋಪಿಗಳು ಪರಾರಿಯಾದರೆ ಅಥವಾ ಅನುಮಾನಸ್ಪಾದವಾಗಿ ವ್ಯಕ್ತಿ ಹಾಗೂ ವಸ್ತು ಕಂಡುಬಂದರೆ ಕೂಡಲೇ ಸಿಬ್ಬಂದಿ ನಿರ್ದೇಶನ ನೀಡಬಹುದಾಗಿದೆ. ಹಬ್ಬ-ಹರಿದಿನ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಅಪರಾಧ ನಡೆಯದ ಹಾಗೇ ಮುಂಜಾಗ್ರತ ಕ್ರಮಗಳ ಕುರಿತು ಅರಿವು ಮೂಡಿಸಲು ನೆರವಾಗಿದೆ. ಪ್ರಾಯೋಗಿಕವಾಗಿ ಯಶವಂತಪುರ ಠಾಣೆಯಲ್ಲಿ ಸಿಸಿಟಿವಿ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಯಶಸ್ವಿಯಾದರೆ ಅಗತ್ಯನುಗುಣವಾಗಿ ನಗರದ ವಿವಿಧ ಠಾಣೆಗಳಲ್ಲಿ ನಿಯಂತ್ರಣ ಕಚೇರಿ ಸ್ಥಾಪನೆ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದರು.

ಪಿಎಫ್ಐ ಮುಖಂಡರು ರಾಮಮಂದಿರ ಸ್ಫೋಟಿಸಲು ಸಂಚು ಆರೋಪ ಸಂಬಂಧ ಪ್ರತಿಕ್ರಿಯಿಸಿದ ಆರಗ ಜ್ಞಾನೇಂದ್ರ ಅವರು,. ವಿಚಾರಣೆ ವೇಳೆ ಅನೇಕ ಸಂಗತಿ ಹೊರಬರುತ್ತಿವೆ. ಶಾಂತಿಕದಡುವ ಮತ್ತು ರಕ್ತಪಾತ ನಡೆಸಲು ಸಂಚು ರೂಪಿಸಲಾಗಿತ್ತು. ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಖ್ಯೆಯಲ್ಲಿ ಬಂಧನವಾಗಬಹುದು. ಪ್ರಕರಣ ಕುರಿತಂತೆ ಗೃಹ ಸಚಿವನಾಗಿ ಏನು ಹೇಳುವುದಿಲ್ಲ. ತನಿಖಾ ಹಂತದಲ್ಲಿರುವುದರಿಂದ ಈ ಬಗ್ಗೆ ಏನು ಹೇಳುವುದಿಲ್ಲ ಎಂದರು.

ಇನ್ನೂ ಸಹಶಿಕ್ಷಕರ ಅಕ್ರಮ ನೇಮಕ ಸಂಬಂಧ ಮಾತನಾಡಿದ ಸಚಿವರು ಪ್ರಕರಣ ಸಂಬಂಧ 59 ಶಿಕ್ಷಕರನ್ನು ಬಂಧಿಸಲಾಗಿದೆ. ಕಾಂಗ್ರೆಸ್ ಕಾಲದಲ್ಲಿ ಅಕ್ರಮ ನಡೆದಿತ್ತು. ಅದನ್ನು ಮುಚ್ಚಿಡಲಾಗಿತ್ತು. ಇದಕ್ಕೆ ಸಾಕ್ಷ್ಯಾಧಾರ ಲಭ್ಯವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿ ಬಂಧನವಾಗಲಿದ್ದಾರೆ. ಪಿಎಸ್ಐ ಕೇಸ್ ನಲ್ಲಿ ಐಪಿಎಸ್ ಅಧಿಕಾರಿ ಸೇರಿ 102 ಮಂದಿಯನ್ನ ಬಂಧಿಸಲಾಗಿದೆ. ವಸ್ತುಗಳ ಹಾಗೇ ಸರ್ಕಾರಿ ಉದ್ಯೋಗವನ್ನು ಹಣ ನೀಡಿ ಪಡೆಯುವುದು ಎಷ್ಟು ಸರಿ ? ಕಷ್ಟಪಟ್ಟು ಓದಿದ ಅಭ್ಯರ್ಥಿಗಳು ಎಲ್ಲಿಗೆ ಹೋಗಬೇಕು ಎಂದು ಕಳವಳ ವ್ಯಕ್ತಪಡಿಸಿದರು.

ಕಾಂತಾರ ಸಿನಿಮಾ ಬಗ್ಗೆ ನಟ ಚೇತನ್ ಟ್ವೀಟ್ ಗೆ ಕುರಿತಂತೆ ಪ್ರತಿಕ್ರಿಯಿಸಿ ಸಿನಿಮಾದ ಬಗ್ಗೆ ವಿಮರ್ಶೆ ಮಾಡಲಿ. ಅದು ಬಿಟ್ಟು ಧರ್ಮದ ಬಗ್ಗೆ ಮಾತನಾಡುವುದು ಸರಿಯಲ್ಲ. ಯಾರಿಗೂ ಶೋಭೆ ತರುವುದಿಲ್ಲ. ಚೇತನ್ ವಿರುದ್ಧ ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ