ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರ್ನಾಟಕದ ಅತಿದೊಡ್ಡ ಸೈಬರ್ ವಂಚಕ ಬಂಧನ

Twitter
Facebook
LinkedIn
WhatsApp
c t ravi 3

ಬೆಂಗಳೂರು: ಕರ್ನಾಟಕದ ಅತಿದೊಡ್ಡ ಸೈಬರ್ ವಂಚಕನನ್ನು (Cyber Crime) ಸಿಐಡಿ (CID) ಪೊಲೀಸರು ಬಂಧಿಸಿದ್ದಾರೆ. ದಿಲೀಪ್ ರಾಜೇಗೌಡ ಬಂಧಿತ ಆರೋಪಿ. ಇನ್ನು ಆರೋಪಿಯನ್ನು ಸೆರೆ ಹಿಡಿಯಲು ಸಿಐಡಿ ಎಸ್​ಪಿ ಎಂ.ಡಿ ಶರತ್ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿತ್ತು. ಆದಾಯ ತೆರಿಗೆ ಇಲಾಖೆಯ (Income Tax Department) ವೆಬ್​ಸೈಟ್​ನಲ್ಲಿನ ಲೋಪವನ್ನು ತಿಳಿದುಕೊಂಡ ಆರೋಪಿ, ಆ ಲೋಪದ ಮೂಲಕ ತೆರಿಗೆ ಕಟ್ಟಿದ್ದವರಿಗೆ ಸಲ್ಲಬೇಕಿದ್ದ ರೀ ಫಂಡ್ಸ್​ ಹಣವನ್ನು​ ತನ್ನ ಖಾತೆಗೆ ಜಾಮಾ ಮಾಡಿಕೊಳ್ಳುತ್ತಿದ್ದನು. ಹೀಗೆ ಆದಾಯ ತೆರಿಗೆ ಇಲಾಖೆಗೆ ಬರೋಬ್ಬರಿ 1,41,84,360 ರೂ. ಹಣವನ್ನು ವಂಚಿಸಿರುವುದು ಬೆಳಕಿಗೆ ಬಂದಿದೆ.

ಆರೋಪಿ ಹಣ ದೋಚುತ್ತಿದ್ದದ್ದು ಹೇಗೆ?

ಆದಾಯ ತೆರಿಗೆ ಇಲಾಖೆಗೆ ತೆರಿಗೆ ಕಟ್ಟಿದವರ, ರಿಫಂಡ್ ಖಾತೆಗಳನ್ನು ಹ್ಯಾಕ್​ ಮಾಡುತ್ತಿದ್ದನು. ನಂತರ ತೆರಿಗೆದಾರರ ಹೆಸರಲ್ಲಿ ಬೇರೆ ಬ್ಯಾಂಕ್ ಖಾತೆ ತೆರೆದು ನಕಲಿ ದಾಖಲೆಗಳ ಸಹಿತ, ಕೆವೈಸಿ ಕೂಡ ಸೃಷ್ಟಿ ಮಾಡುತ್ತಿದ್ದನು. ನಂತರ ಆದಾಯ ತೆರಿಗೆ ಇಲಾಖೆ ರಿಫಂಡ್ ಮಾಡಿದ ಹಣವನ್ನು ಆರೋಪಿ ತನ್ನ ಖಾತೆಗೆ ವರ್ಗಾಯಿಸಿಕೊಳ್ಳುತ್ತಿದ್ದನು. ಹೀಗೆ ಕೋಟಿ ಕೋಟಿ ಹಣ ವಂಚನೆ ಮಾಡಿರುವುದು ವಿಚಾರಣೆ ವೇಳೆ ಬಹಿರಂಗವಾಗಿದೆ.

ವಿಚಾರಣೆ ವೇಳೆ ಮತ್ತಷ್ಟು ಸೈಬರ್ ವಂಚನೆ ಮಾಡಿರುವುದು ಬೆಳಕಿಗೆ…

ಅರೋಪಿ ಈ ಹಿಂದೆ ಇದೇ ರೀತಿ ಮಾಡಿ 3 ಕೋಟಿ 60 ಲಕ್ಷ ರೂ. ಹಣವನ್ನು ತನ್ನ ಖಾತೆಗೆ ಜಮಾ ಮಾಡಿಕೊಂಡಿದ್ದನು. ಹಾಗೇ ಬಾಜಾಜ್ ಕಾರ್ ಲೋನ್ ಕಂಪನಿಗೆ ನಕಲಿ ದಾಖಲೆ ನೀಡಿ ಸಾಲ ಪಡೆದು ವಂಚಿಸಿದ್ದಾನೆ.

ಅಲ್ಲದೇ ಈತ ಸರ್ಕಾರದ ವೈಬ್​​ ಪೋರ್ಟಲ್​​​ಗೂ ಲಗ್ಗೆ ಇಟ್ಟಿದ್ದು, ಕರ್ನಾಟಕ ಸರ್ಕಾರದ ಕಾವೇರಿ ಆನ್ಲೈನ್ ಪೋರ್ಟಲ್​ನಲ್ಲಿ (ಆಸ್ತಿಗಳನ್ನು ರಿಜಿಸ್ಟರ್ ಮಾಡಲು ಬಳಸುವ ವೆಬ್ ಪೋರ್ಟಲ್) ಅನ್ನು ಕೂಡ ಹ್ಯಾಕ್​ ಮಾಡಲು ಯತ್ನಿಸಿದ್ದಾನೆ. ಸದ್ಯ ಅರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಅಷ್ಟಕ್ಕೂ ಯಾರು ಈ ದಿಲೀಪ್ ರಾಜೆಗೌಡ

ಹಾಸನದ ಹಿರಿಸೇವೆಯಲ್ಲಿ ಹುಟ್ಟಿ ಬೆಳೆದಿದ್ದ ದಿಲೀಪ್ ರಾಜೆಗೌಡ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದನು. ಬಳಿಕ ಧಾರವಾಡದಲ್ಲಿ ನಲೆಸಿದ್ದ ಆರೋಪಿ, ಇಲ್ಲಿಂದಲೇ ಕೃತ್ಯ ಎಸಗುತಿದ್ದನು.

ಈ ಹಿಂದೆ ದಾಖಲಾಗಿದ್ದ ಶ್ರೀಕೃಷ್ಣ ಅಲಿಯಾಸ್ ಹ್ಯಾಕರ್ ಶ್ರೀಕಿ ಕೂಡ ಕಾವೇರಿ ವೆಬ್ ಪೋರ್ಟಲ್​ನಿಂದ ಕೋಟ್ಯಾಂತರ ರೂ. ಸರ್ಕಾರದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಅರೋಪ ಕೇಳಿ ಬಂದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist