ಸೋಮವಾರ, ಮೇ 20, 2024
ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕದ ಬಾರ್ ಆ್ಯಂಡ್ ರೆಸ್ಟೋರೆಂಟ್​ಗಳಲ್ಲಿ ಮದ್ಯಪಾನ ಖಾಲಿ! ಇಂದು ಸಂಜೆಯಿಂದ ಮದ್ಯ ಪ್ರಿಯರಿಗೆ ಇಲ್ಲ ಎಣ್ಣೆ

Twitter
Facebook
LinkedIn
WhatsApp
ಕರ್ನಾಟಕದ ಬಾರ್ ಆ್ಯಂಡ್ ರೆಸ್ಟೋರೆಂಟ್​ಗಳಲ್ಲಿ ಮದ್ಯಪಾನ ಖಾಲಿ! ಇಂದು ಸಂಜೆಯಿಂದ ಮದ್ಯ ಪ್ರಿಯರಿಗೆ ಇಲ್ಲ ಎಣ್ಣೆ

ನಿನ್ನೆಯಿಂದ ರಾಜ್ಯದ ಎಣ್ಣೆ ಅಂಗಡಿಗಳಲ್ಲಿ ಸ್ಟಾಕ್ ಖಾಲಿಯಾಗಿದೆ. ಕೆಲ ಅಂಗಡಿಗಳಲ್ಲಿ ಅಲ್ಪ ಸ್ಪಲ್ಪ ಎಣ್ಣೆ ಇದೆ. ಇಂದು (ಏಪ್ರಿಲ್ 5) ಸಂಜೆ ವೇಳೆಗೆ ರಾಜ್ಯದ ಎಲ್ಲಾ ಅಂಗಡಿಗಳಲ್ಲಿ ಎಣ್ಣೆ ಸಂಪೂರ್ಣ ಖಾಲಿಯಾಗುವ ಸಾಧ್ಯತೆಯಿದೆ.

ಬೆಂಗಳೂರು: ರಾಜ್ಯದ ಬಾರ್ ಆ್ಯಂಡ್ ರೆಸ್ಟೋರೆಂಟ್ಗಳಲ್ಲಿ (Bar And Restaurants) ಮದ್ಯಪಾನ (Alcohol) ಖಾಲಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನೂತನ ಸಾಫ್ಟ್​ವೇರ್​ ಅಪ್​ಡೇಟ್ ಆಗಿರುವ ಹಿನ್ನೆಲೆ ಬಿಲ್ ಮಾಡಲು ಆಗದೆ ಮದ್ಯ ಪೂರೈಕೆ ಆಗುತ್ತಿಲ್ಲ. ಕೆಎಸ್​​ಬಿಸಿಎಲ್​ನಿಂದ​ (KSBCL ) ಬಾರ್​ಗಳಿಗೆ ಮದ್ಯ ಪೂರೈಕೆಯಾಗುತ್ತಿಲ್ಲ ಅಂತ ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆಯಿಂದ ರಾಜ್ಯದ ಎಣ್ಣೆ ಅಂಗಡಿಗಳಲ್ಲಿ ಸ್ಟಾಕ್ ಖಾಲಿಯಾಗಿದೆ. ಕೆಲ ಅಂಗಡಿಗಳಲ್ಲಿ ಅಲ್ಪ ಸ್ಪಲ್ಪ ಎಣ್ಣೆ ಇದೆ. ಇಂದು (ಏಪ್ರಿಲ್ 5) ಸಂಜೆ ವೇಳೆಗೆ ರಾಜ್ಯದ ಎಲ್ಲಾ ಅಂಗಡಿಗಳಲ್ಲಿ ಎಣ್ಣೆ ಸಂಪೂರ್ಣ ಖಾಲಿಯಾಗುವ ಸಾಧ್ಯತೆಯಿದೆ.

ನಿನ್ನೆಯಿಂದ ರಾಜ್ಯದಲ್ಲಿ ಮದ್ಯಪಾನ ಸಿಗುತ್ತಿಲ್ಲ. ನಿನ್ನೆಯಿಂದ ರಾಜ್ಯದ ಯಾವುದೇ CL-9 ಬಾರ್ ಅಂಡ್ ರೆಸ್ಟೋರೆಂಟ್, CL- 2 ವೈನ್ ಸ್ಟೋರ್, CL- 11C ಎಂಎಸ್ಐಎಲ್​ಗೆ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತದಿಂದ ಸಪ್ಲೈ ಆಗುತ್ತಿಲ್ಲ. ಕೆಎಸ್​ಬಿಸಿಎಲ್​ನಿಂದ ನಿಂದ ಪ್ರತಿದಿನ ಪೂರೈಕೆ ಆಗುತ್ತಿತ್ತು. ಆದರೆ ಹೊಸ ಬಿಲ್ಲಿಂಗ್ (web indent) ವ್ಯವಸ್ಥೆಯಿಂದ ಕೆಎಸ್​ಬಿಸಿಎಲ್​​ನಿಂದ ಬಿಲ್ ಆಗುತ್ತಿಲ್ಲ. ಹೀಗಾಗಿ ಮದ್ಯಪಾನ ಎಣ್ಣೆ ಸಿಗುತ್ತಿಲ್ಲ.

ನಾಳೆ ಪ್ರತಿಭಟನೆ:
ನಿನ್ನೆಯಿಂದ Web Indenting ಮೂಲಕ ಮದ್ಯ ಖರೀದಿಸಲು ಎಸ್​ಬಿಸಿಎಲ್​​ ಆದೇಶ ನೀಡಿತ್ತು. ಆದರೆ ಈ ಪದ್ಧತಿಯಿಂದ ಮದ್ಯಪಾನ ಸಿಗುತ್ತಿಲ್ಲ. ಮದ್ಯಪಾನ ಖರೀದಿಸಲು ಸನ್ನದುದಾರರಿಗೆ ತೊಂದರೆಯಾಗುತ್ತಿದೆ. ಒಂದು ತಿಂಗಳವರೆಗೆ ಹೊಸ ಪದ್ಧತಿ ಜೊತೆಗೆ ಹಳೆ ಪದ್ಧತಿ ಚಾಲ್ತಿಯಲ್ಲಿರುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಮದ್ಯಪಾನ ಇಲ್ಲದೆ ಸನ್ನದುದಾರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಒಂದು ತಿಂಗಳ ಮಟ್ಟಿಗಾದರೂ ಹೊಸ ಪದ್ಧತಿಯೊಂದಿಗೆ ಹಳೆ ಪದ್ಧತಿ ಚಾಲ್ತಿಯಲ್ಲಿ ಇರುವಂತೆ ಮಾಡಲು ಒತ್ತಾಯಿಸಿ ಪ್ರತಿಭಟನೆ ನಡೆಸಲು ಬೆಂಗಳೂರು ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ತೀರ್ಮಾನಿಸಿದೆ. ನಾಳೆ ರಾಜ್ಯದ ಎಲ್ಲಾ ಕೆಎಸ್​ಬಿಸಿಎಲ್​ ಡಿಪೋಗಳ ಎದುರು ಧರಣಿ ನಡೆಸಲಿದ್ದಾರೆ.

ಪತ್ರಿಕಾ ಪ್ರಕಟಣೆ :

t24

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ