ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರು: ಕಲಬುರಗಿ ಪಾಲಿಕೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ಮತ್ತು ಬಿಜೆಪಿ ಹರಸಾಹಸ ಮಾಡುತ್ತಿವೆ. 55 ಸದಸ್ಯರಿರುವ ಕಲಬುರಗಿ ಪಾಲಿಕೆಯಲ್ಲಿ ಕೊರತೆಯಿರುವ ಸ್ಥಾನಗಳನ್ನು ತುಂಬಲು ಎರಡು ಪ್ರಮುಖ ಪಕ್ಷಗಳಿಗೆ ಪ್ರತಿಷ್ಟೆಯ ಪ್ರಶ್ನೆಯಾಗಿದ್ದು ಜೆಡಿಎಸ್ ಕೌನ್ಸಿಲರ್ ಗಳಿಗೆ ಕಾಳು ಹಾಕುತ್ತಿದ್ದಾರೆ.
ಇತ್ತ ಜೆಡಿಎಸ್ ಮತ್ತೊಮ್ಮೆ ಕಿಂಗ್ ಮೇಕರ್ ಆಗಿದ್ದು, ಪಕ್ಷವು ತನ್ನ ನಾಲ್ಕು ಕಲಬುರಗಿ ಕೌನ್ಸಿಲರ್ಗಳನ್ನು ಆಪರೇಷನ್ ಕಮಲ ಮತ್ತು ಹಸ್ತದಿಂದ ದೂರವಿಡಲು ಬೆಂಗಳೂರಿನ ಸುರಕ್ಷಿತ ಮನೆಯೊಂದರಲ್ಲಿ ಲಾಕ್ ಮಾಡಿಟ್ಟಿದೆ.
ತಮ್ಮ ಪಕ್ಷದ ನಾಲ್ವರು ಸದಸ್ಯರನ್ನು ಬೆಂಗಳೂರಿಗೆ ಕರೆತರಲಾಗಿದೆ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಖಚಿತಪಡಿಸಿದ್ದಾರೆ. ಸದಸ್ಯರೊಂದಿಗೆ ಸಭೆ ನಡೆಸುತ್ತಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಕೌನ್ಸಿಲರ್ಗಳಾದ ಎನ್ ಅಪ್ಪಾಜಿ ಗೌಡ, ಸಂದೇಶ್ ನಾಗರಾಜ್, ಸಿಆರ್ ಮನೋಹರ್ ಮತ್ತು ಕಾಂತರಾಜ್ ಬಿಎಂಎಲ್ ತಮ್ಮ ಕೌನ್ಸಿಲರ್ ಗಳಿಗೆ ತಲಾ 75 ಲಕ್ಷ ಪಾವತಿಸಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.
ಜೆಡಿಎಸ್ ಯಾವ ಪಕ್ಷವನ್ನು ಬೆಂಬಲಿಸುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಈ ಸಂಬಂಧ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ , ಅದನ್ನು ನಾಲ್ವರು ಕೌನ್ಸಿಲರ್ಗಳಿಗೆ ಬಿಟ್ಟಿರುವುದಾಗಿ ಹೇಳಿದರು. ಜೆಡಿಎಸ್ ಬಿಗಿಪಟ್ಟು ಹಿಡಿದು ಚೌಕಾಶಿ ನಡೆಸುತ್ತಿದೆ, ಜೆಡಿಎಸ್ಗೆ ಮೇಯರ್ ಆಗಿ ಐದು ಅವಧಿಗಳಲ್ಲಿ ಎರಡು ಬಾರಿ ಮತ್ತು ಅವರ ಆಯ್ಕೆಯ ಮೂರು ಸ್ಥಾಯಿ ಸಮಿತಿಗಳನ್ನು ನೀಡಬೇಕು ಎಂದು ಕೌನ್ಸಿಲರ್ಗಳು ಬೇಡಿಕೆಯಿಟ್ಟಿದ್ದಾರೆ.
ಮೇಯರ್ ಮತ್ತು ಉಪ ಮೇಯರ್ ಚುನಾವಣೆ ದಿನಾಂಕಗಳನ್ನು ಘೋಷಿಸಿದ ನಂತರ ನಾವು ಈ ಎಲ್ಲವನ್ನು ನಿರ್ಧರಿಸುತ್ತೇವೆ. ನನ್ನ ಆದ್ಯತೆ ಈ ನಾಗರಿಕ ಚುನಾವಣೆಗಳಲ್ಲ. ಕಲಬುರಗಿ ದಕ್ಷಿಣ ಮತ್ತು ಉತ್ತರ ಎರಡು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ನಾನು ಕೌನ್ಸಿಲರ್ಗಳಿಗೆ ಹೇಳಿದ್ದೇನೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?