ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಳ್ಳನೆಂದು ಶಂಕಿಸಿ ಹತ್ಯೆ- ಇಬ್ಬರ ಬಂಧನ

Twitter
Facebook
LinkedIn
WhatsApp
All about coconut tree 19
ಚಂಡೀಗಢ: ಕಳ್ಳನೆಂದು ಶಂಕಿಸಿ ಥಳಿಸಿ ವ್ಯಕ್ತಿಯೊಬ್ಬನ ಹತ್ಯೆಗೆ ಕಾರಣರಾದ ತೋಟದ ಮಾಲೀಕ (Owner)  ಹಾಗೂ ಆತನ ಸಹಾಯಕನನ್ನು (Servant) ಗುರುಗ್ರಾಮ್ (Gurugram) ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಘಾಟಾ ಗ್ರಾಮದ ಅಂಕಿತ್ ಹಾಗೂ ಆತನ ಸಹಾಯಕ ಮಧ್ಯಪ್ರದೇಶದ (Madhya Pradesh) ಸಾಗರ್ ಮೂಲದವನು ಎಂದು ತಿಳಿದು ಬಂದಿದೆ. ಆರೋಪಿಗಳ ವಿಚಾರಣೆ ವೇಳೆ, ತೋಟದಲ್ಲಿ ಆಗಾಗ ಕಳ್ಳತನವಾಗುತ್ತಿತ್ತು. ಹಾಗಾಗಿ ನಾನು ಮತ್ತು ನನ್ನ ಸಹಾಯಕ ಕಾವಲು ಆರಂಭಿಸಿದ್ದೆವು ಎಂದು ಅಂಕಿತ್ ಹೇಳಿದ್ದಾನೆ.

ಮಂಗಳವಾರ ತಡರಾತ್ರಿ ತೋಟದ ಬಳಿಗೆ ಬಂದಿದ್ದ ಇಬ್ಬರನ್ನು ಕಳ್ಳರೆಂದು ಶಂಕಿಸಿ ಮನೆಯಲ್ಲಿ ಕೂಡಿ ಹಾಕಿ ಆರೋಪಿಗಳು ಥಳಿಸಿದ್ದರು. ಥಳಿತಕ್ಕೊಳಗಾದ ಒಬ್ಬ ಬುಧವಾರ ಬೆಳಗ್ಗೆ ಮೃತಪಟ್ಟಿದ್ದ. ಮೃತಪಟ್ಟ ವ್ಯಕ್ತಿಯನ್ನು ಬಂಗಾಳ ಮೂಲದ ರಫಿಗುಲ್ ಹಾಗೂ ಗಾಯಗೊಂಡಿರುವ ಮತ್ತೊಬ್ಬನನ್ನು ಇಸ್ರುದ್ದೀನ್ ಎಂದು ಗುರುತಿಸಲಾಗಿದೆ.

ಈ ಸಂಬಂಧ ಕೊಲೆ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಗಳನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ