ಶಿವಮೊಗ್ಗ: ಗುತ್ತಿಗೆದಾರರ ಬಳಿ ಸರ್ಕಾರ ಕಮಿಷನ್ ಪಡೆಯುತ್ತಿರುವ ಕುರಿತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಪ್ರತಿಕ್ರಿಯಿಸಿದರು. ಗುತ್ತಿಗೆದಾರರ ಬಳಿ ಹಲವರು ಪರ್ಸೆಂಟೇಟ್ ಪಡೆಯುತ್ತಿದ್ದಾರೆ. ಕಾಮಗಾರಿಗಳಿಗೆ ಮಂಜೂರಾಗುವ ಶೇ 65ರಷ್ಟು ಅನುದಾನ ಮಧ್ಯವರ್ತಿಗಳ ಪಾಲಾಗುತ್ತಿದೆ. ಇಂಥ ಸನ್ನಿವೇಶದಲ್ಲಿ ಗುತ್ತಿಗೆದಾರರು ಯಾಕೆ ಕೆಲಸ ಮಾಡಬೇಕು? ಯಾಕೆ ಅವರಿವರ ಮನೆಬಾಗಿಲಿಗೆ ಹೋಗಿ ದುಂಬಾಲು ಬೀಳಬೇಕು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೂ ಈ ವ್ಯವಹಾರ ನಡೆದಿದೆ. ಕಾಂಗ್ರೆಸ್ನವರು ಅಪ್ಪಟ ಚಿನ್ನ ಏನಲ್ಲ. ಈ ಹಿಂದೆಯೂ ನಾನು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದೆ. ಆಗ ಸಿದ್ದರಾಮಯ್ಯ ಅವರ 80 ಶಾಸಕರು ಮನೆಯಲ್ಲಿ ಮಲಗಿದ್ದರು. ಅವರಿಗೆಲ್ಲಾ ಈಗ ಪರ್ಸೆಂಟೇಜ್ ವಿರುದ್ಧ ಹೋರಾಟ ನೆನಪಾಗಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಪಿಎಸ್ಐ ಅಕ್ರಮ ಪರೀಕ್ಷೆ ಕುರಿತು ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?