ಬೆಂಗಳೂರು: ಹಿಜಾಬ್ ವಿವಾದ ನ್ಯಾಯಾಲಯದ ಮೆಟ್ಟಿಲೇರುವ ಹಿಂದೆ ಕಾಂಗ್ರೆಸ್ ಪಕ್ಷದ ಶ್ರಮವಿದ್ದು, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳೇ ಹಿಜಾಬ್ ಪರವಾಗಿ ನ್ಯಾಯಾಲಯಕ್ಕೆ ಅರ್ಜಿಯ ಮೇಲೆ ಅರ್ಜಿ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಹಿಜಾಬ್ ಪರವಾಗಿ ಇರುವುದಕ್ಕಿಂತ ಹೆಚ್ಚಾಗಿ ಕುಂಕುಮ, ಬಳೆ, ಹೂವು ಮುಡಿಯುವುದರ ವಿರುದ್ದವಿದೆ ಎಂದು ಬಿಜೆಪಿ ಆರೋಪಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಹಿಜಾಬ್ ಪರವಾಗಿರುವ ಕಾಂಗ್ರೆಸ್, ಶೈಕ್ಷಣಿಕ ವಾತವಾರಣದಲ್ಲಿ ಹಿಜಾಬ್ ಧರಿಸಲು ಅವಕಾಶ ನಿರಾಕರಿಸುವುದೇ ಆದಲ್ಲಿ, ಹಿಂದೂಗಳು ಕುಂಕುಮ ಇಡಬಾರದು, ಬಳೆ, ಹೂವು ಮುಡಿಯಬಾರದು ಎನ್ನುವ ಅಸಮಂಜಸ ವಾದವನ್ನು ಸಮಾಜದ ಮುಂದಿಡುತ್ತಿದೆ. ಹಿಂದೂ ಸಂಸ್ಕೃತಿ, ಹಿಂದೂಗಳ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೇಕೆ ಇಷ್ಟೊಂದು ಅಸಹನೆ? ಎಂದು ಪ್ರಶ್ನಿಸಿದೆ.
ಇನ್ನು ರಾಷ್ಟ್ರ ಧ್ವಜವೇ ಇರದಿದ್ದ ಸ್ಥಂಭದಲ್ಲಿ, ರಾಷ್ಟ್ರ ಧ್ವಜವನ್ನು ಇಳಿಸಿ ಕೇಸರಿ ಧ್ವಜ ಹಾರಿಸಲಾಗಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದು ತಿರಂಗಕ್ಕೆ ಮಾಡಿದ ಅವಮಾನವಲ್ಲವೇ? ತಿರಂಗಕ್ಕೆ ಅವಮಾನ ಮಾಡಿ, ಸದನದಲ್ಲಿ ರಾಜಕೀಯ ಕಾರಣಕ್ಕಾಗಿ ತಿರಂಗ ಬಳಸಿದ್ದು ದೇಶದ್ರೋಹವಲ್ಲದೆ ಮತ್ತೇನು? ಎಂದು ವಾಗ್ದಾಳಿ ನಡೆಸಿದೆ.
ಹಿಜಾಬ್ ವಿವಾದ ನ್ಯಾಯಾಲಯದ ಮೆಟ್ಟಿಲೇರುವ ಹಿಂದೆ ಕಾಂಗ್ರೆಸ್ ಪಕ್ಷದ ಶ್ರಮವಿದೆ.
ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳೇ ಹಿಜಾಬ್ ಪರವಾಗಿ ನ್ಯಾಯಾಲಯಕ್ಕೆ ಅರ್ಜಿಯ ಮೇಲೆ ಅರ್ಜಿ ಸಲ್ಲಿಸುತ್ತಿದ್ದಾರೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?