ಕರ್ನಾಟಕ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿಯಿದ್ದು, ಪಕ್ಷಾಂತರ ಪರ್ವ ಪ್ರಾರಂಭವಾಗಿದೆ. ಈ ಬಗ್ಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಯಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಪಟ್ಟಿ ಮಾಡಲು ಪುರುಸೊತ್ತಿಲ್ಲದಷ್ಟು ಸಂಖ್ಯೆಯಲ್ಲಿ ಕಾಂಗ್ರೆಸ್, ಜೆಡಿಎಸ್ನ ಶಾಸಕರು ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಉದ್ಘಾಟಿಸಿ, ಕಾಂಗ್ರೆಸ್ಗೆ ರಾಜ್ಯ ಪದಾಧಿಕಾರಿಗಳ ಘೋಷಣೆಗೆ ಎರಡು ವರ್ಷ ಬೇಕಾಯಿತು. ಒಂದು ಪಕ್ಷ ನಡೆಸಲು ಅಸಾಧ್ಯವಾದ ಮುಖಂಡರಿಗೆ ಮುಂದೆ ಸರಕಾರ ನಡೆಸಲು ಸಾಧ್ಯವೇ. ಕಾಂಗ್ರೆಸ್ ಐಸಿಯುನಲ್ಲಿದ್ದು, ಚುನಾವಣೆಗೆ ಮೊದಲು ಸತ್ತು ಹೋಗಲಿದೆ. ಕಾಂಗ್ರೆಸ್ನ ಒಳಜಗಳದಿಂದ ಬೂತ್ಗೆ ಒಬ್ಬ ಪ್ರಧಾನ ಕಾರ್ಯದರ್ಶಿ ನೇಮಕವಾದರೂ ಅಚ್ಚರಿಯಿಲ್ಲ, ಎಂದು ವ್ಯಂಗ್ಯವಾಡಿದರು.
ಅನ್ಯ ಪಕ್ಷದಲ್ಲಿ ಪರಿವಾರದಿಂದ ಬರಬೇಕು ಇಲ್ಲವೇ ಪರಿವಾರದ ಪರವಿದ್ದು ಮೇಲೆ ಬರಬೇಕೆಂಬ ಪದ್ಧತಿ ಇದೆ. ಆದರೆ, ಚಹಾ ಮಾರಬಲ್ಲ ವ್ಯಕ್ತಿಯೂ ಪ್ರಧಾನಿಯಾಗಬಲ್ಲರು ಎಂದು ಬಿಜೆಪಿ ತೋರಿಸಿಕೊಟ್ಟಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬಿಜೆಪಿ ಮುಂದಿನ ಚುನಾವಣೆ ಎದುರಿಸಲಿದ್ದು, 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist