ಬುಧವಾರ, ಮೇ 8, 2024
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂತಾರ: ಬಾಲಿವುಡ್ ನಲ್ಲಿ ಧೂಳ್, ತಮಿಳಿನ ಟ್ರೇಲರ್ ಗೂ ಸಖತ್ ರೆಸ್ಪಾನ್ಸ್

Twitter
Facebook
LinkedIn
WhatsApp
ಕಾಂತಾರ: ಬಾಲಿವುಡ್ ನಲ್ಲಿ ಧೂಳ್, ತಮಿಳಿನ ಟ್ರೇಲರ್ ಗೂ ಸಖತ್ ರೆಸ್ಪಾನ್ಸ್

ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ (Kantara) ಸಿನಿಮಾ ಇಂದಿನಿಂದ ಹಿಂದಿಯಲ್ಲಿ (Hindi) ರಿಲೀಸ್ ಆಗಿದೆ. ನಾಳೆ ತೆಲುಗು ಮತ್ತು ತಮಿಳಿನಲ್ಲೂ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ತಮಿಳಿನಲ್ಲಿ ಟ್ರೇಲರ್ ರಿಲೀಸ್ ಆಗಿದ್ದು, ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಹಿಂದಿಯಲ್ಲಿ 2500ಕ್ಕೂ ಹೆಚ್ಚು ಥಿಯೇಟರ್ ನಲ್ಲಿ ಕಾಂತಾರ ಪ್ರದರ್ಶನ ಕಾಣುತ್ತಿದ್ದು, ತೆಲುಗು ಮತ್ತು ತಮಿಳಿನಲ್ಲೂ ನೂರಾರು ಚಿತ್ರಮಂದಿರಗಳು ಕಾಂತಾರಗಾಗಿ ಕಾಯುತ್ತಿವೆ.

ಕೆಜಿಎಫ್ ನಂತರ ಕನ್ನಡ ಮತ್ತೊಂದು ಸಿನಿಮಾ ಈ ಪ್ರಮಾಣದ ಸಂಖ್ಯೆಯಲ್ಲಿ ರಿಲೀಸ್ ಆಗುತ್ತಿರುವುದು ಸಹಜವಾಗಿಯೇ ಬಿಟೌನ್ ನಿದ್ದೆ ಕೆಡಿಸಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಬಾಲಿವುಡ್ (Bollywood), ದಕ್ಷಿಣದ ಸಿನಿಮಾಗಳ ಆರ್ಭಟಕ್ಕೆ ಸುಸ್ತಾಗಿದೆ. ಈಗಾಗಲೇ ಕೆಜಿಎಫ್ ಸಿನಿಮಾದ ಮೂಲಕ ಗೆಲುವಿನ ರುಚಿಕಂಡಿರುವ ಹೊಂಬಾಳೆ ಫಿಲ್ಮಸ್, ಕಾಂತಾರದ ಮೂಲಕ ಮತ್ತೊಂದು ಗೆಲುವಿಗೆ ಸಿದ್ಧತೆ ಮಾಡಿಕೊಂಡಿದೆ. 

ಕನ್ನಡದಲ್ಲಿ ಕಾಂತಾರ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆಯುತ್ತಿದ್ದರೂ, ಇವತ್ತಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯದಲ್ಲೇ ನೂರು ಕೋಟಿ ಕ್ಲಬ್ ಸೇರುವ ಸಿನಿಮಾವಾಗಿಯೂ ಹೊರ ಹೊಮ್ಮಲಿದೆ. ಈ ಹೊತ್ತಿನಲ್ಲಿ ಇಂದು ಹಿಂದಿಯಲ್ಲಿ, ನಾಳೆ ತಮಿಳು ಮತ್ತು ತೆಲುಗಿನಲ್ಲಿ ಈ ಸಿನಿಮಾ ರಿಲೀಸ್ (Release) ಆಗುತ್ತಿದೆ. ತಮಿಳು ಮತ್ತು ತೆಲುಗಿಗಿಂತ ಹಿಂದಿಯಲ್ಲೇ ಅಧಿಕ ಸಂಖ್ಯೆಯಲ್ಲಿ ಚಿತ್ರಮಂದಿರಗಳು ಸಿಕ್ಕಿವೆ.

ತನ್ನ ಇಡೀ ಟೀಮ್ ಕಟ್ಟಿಕೊಂಡು ರಿಷಬ್ ಶೆಟ್ಟಿ ಬಾಲಿವುಡ್ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಭಾರತೀಯ ಸಿನಿಮಾ ರಂಗದ ಬಹುತೇಕ ನಟರು ಕಾಂತಾರದ ಬಗ್ಗೆ ಮಾತನಾಡುತ್ತಿರುವುದರಿಂದ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಗೆಲ್ಲಲಿದೆ ಎನ್ನುವುದು ಸದ್ಯಕ್ಕಿರುವ ಲೆಕ್ಕಾಚಾರ. ಅದರಲ್ಲೂ ಮಲಯಾಳಂನಲ್ಲಿ ದೈವಾರಾಧನೆ, ಭೂತಕೋಲ ಸೇರಿದಂತೆ ಇತರ ಆಚರಣೆಗಳು ಇರುವುದರಿಂದ ಅಲ್ಲಿಗೆ ಈ ಸಿನಿಮಾ ಇನ್ನೂ ಹತ್ತಿರವಾಗಲಿದೆ.

ನಿರ್ಮಾಪಕ ವಿಜಯ್ ಕಿರಗಂದೂರು ಕನ್ನಡ, ತೆಲುಗು (Telugu), ತಮಿಳು (Tamil) ಮತ್ತು ಮಲಯಾಳಂನಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಿಂದಿಯಲ್ಲೂ ಚಿತ್ರ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. ಈ ಎಲ್ಲ ಸಿನಿಮಾಗಳಿಗೆ ಕೆಜಿಎಫ್ ಯಶಸ್ಸು ಮುನ್ನುಡಿ ಬರೆದಿತ್ತು. ಕಾಂತಾರದ ಮೂಲಕ ಆ ನಂಬಿಕೆ ಇನ್ನಷ್ಟು ಗಟ್ಟಿಯಾಗಲಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ Twitter Facebook LinkedIn WhatsApp ಪುತ್ತೂರು: ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ|

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ