ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಂತಾರ 1 ಕೋಟಿ ಟಿಕೆಟ್ಸ್ ಮಾರಾಟ: ದಾಖಲೆಗಳು ಪುಡಿಪುಡಿ

Twitter
Facebook
LinkedIn
WhatsApp
ಕಾಂತಾರ 1 ಕೋಟಿ ಟಿಕೆಟ್ಸ್ ಮಾರಾಟ: ದಾಖಲೆಗಳು ಪುಡಿಪುಡಿ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾ ಕರ್ನಾಟಕದಲ್ಲಿರುವ ಬಹುತೇಕ ದಾಖಲೆಗಳನ್ನು ಬ್ರೇಕ್ ಮಾಡುತ್ತಾ ಮುಂದೆ ಸಾಗುತ್ತಿದೆ. ಈಗಾಗಲೇ ಗಳಿಕೆಯ ಲೆಕ್ಕದಲ್ಲಿ ಕೆಜಿಎಫ್ 2 ಸಿನಿಮಾವನ್ನೂ ಹಿಂದಿಕ್ಕೆ ಮುಂದೆ ಸಾಗುತ್ತಿದೆ. ಇದೀಗ ಸಿಕ್ಕಿರುವ ಮತ್ತೊಂದು ಮಾಹಿತಿ ಅಂದರೆ, ಈವರೆಗೂ ಕರ್ನಾಟಕದಲ್ಲಿ ಈ ಸಿನಿಮಾದ ಟಿಕೆಟ್ಸ್ (Tickets) ಬರೋಬ್ಬರು ಒಂದು ಕೋಟಿ ಮಾರಾಟವಾಗಿವೆಯಂತೆ. ಈ ಮೂಲಕ ಬಹುತೇಕ ದಾಖಲೆಗಳನ್ನು ಕಾಂತಾರ ಪುಡಿಪುಡಿ ಮಾಡಿ ಮುನ್ನುಗ್ಗುತ್ತಿದೆ.

ಕಾಂತಾರ ಸಿನಿಮಾದ ಯಶಸ್ಸು ರಿಷಬ್ ಶೆಟ್ಟಿಯನ್ನು ಮತ್ತಷ್ಟು ಎತ್ತರಕ್ಕೆ ಕರೆದುಕೊಂಡು ಹೋಗಿದೆ. ಕೇವಲ ಕನ್ನಡ ಸಿನಿಮಾ ರಂಗದಲ್ಲಿ ನಟ ಹಾಗೂ ನಿರ್ದೇಶಕರಾಗಿ ಹೆಸರು ಮಾಡಿದ್ದವರು, ಇಂದು ಜಾಗತಿಕ ಮಟ್ಟದಲ್ಲಿ ತಮ್ಮದೇ ಆದ ಹವಾ ಸೃಷ್ಟಿಸಿದ್ದಾರೆ. ಹಾಗಾಗಿ ನಾನಾ ಸಿನಿಮಾ ರಂಗದಿಂದ ಅವರಿಗೆ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಮೊನ್ನೆಯಷ್ಟೇ ತೆಲುಗಿನಲ್ಲಿ ಸಿನಿಮಾ ಮಾಡುವಂತೆ ಅಲ್ಲು ಅರ್ಜುನ್ ತಂದೆ ಕೇಳಿಕೊಂಡಿದ್ದರು. ಇದೀಗ ಬಾಲಿವುಡ್ ನಿಂದಲೂ ಅವಕಾಶ ಬಂದಿದೆ.

ಈ ಕುರಿತು ಮಾತನಾಡಿರುವ ರಿಷಬ್ ಶೆಟ್ಟಿ (Rishabh Shetty), ‘ನನಗೆ ಬಾಲಿವುಡ್ ಮತ್ತು ತೆಲುಗು ಸಿನಿಮಾ ರಂಗದಿಂದ ಆಫರ್ ಬಂದಿದ್ದು ನಿಜ. ಆದರೆ, ಸದ್ಯಕ್ಕೆ ನಾನು ಎಲ್ಲಿಯೂ ಹೋಗುತ್ತಿಲ್ಲ. ಕನ್ನಡದಲ್ಲೇ ಮಾಡುವುದಕ್ಕೆ ತುಂಬಾ ಕೆಲಸಗಳಿವೆ. ಹಾಗಾಗಿ ಇಲ್ಲಿಯೇ ಇದ್ದುಕೊಂಡು ಸಿನಿಮಾ ಮಾಡುತ್ತೇನೆ. ಆ ಸಿನಿಮಾವನ್ನೇ ವಿವಿಧ ಸಿನಿಮಾ ರಂಗದ ಪ್ರೇಕ್ಷಕರು ನೋಡಲಿ ಎನ್ನುವುದು ನನ್ನಾಸೆ ಅಂದಿದ್ದಾರೆ.

ಹಿಂದಿ ಸಿನಿಮಾ ರಂಗದ ಬಗ್ಗೆಯೂ ಮಾತನಾಡಿರುವ ಅವರು, ತಾವು ಯಾವಾಗಲೂ ಅಮಿತಾಭ್ ಬಚ್ಚನ್ ಅವರನ್ನು ಕೊಂಡಾಡುವುದಾಗಿಯೂ ತಿಳಿಸಿದ್ದಾರೆ. ಈ ಹೊತ್ತಿನ ನಟರಾದ ಶಾಹಿದ್ ಕಪೂರ್ ಮತ್ತು ಈಗಾಗಲೇ ಸಿನಿಮಾ ರಂಗಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ ಶಾರುಖ್ ಖಾನ್ ಕುರಿತಾಗಿಯೂ ಅವರು ಮಾತನಾಡಿದ್ದಾರೆ. ಎಲ್ಲ ಸಿನಿಮಾ ರಂಗದ ಬಗ್ಗೆಯೂ ತಮಗೆ ಅಭಿಮಾನವಿದ್ದು, ಕನ್ನಡದಲ್ಲೇ ಸಿನಿಮಾ ಮಾಡುವ ಮೂಲಕ ಇತರ ಚಿತ್ರರಂಗವನ್ನೂ ಗೌರವಿಸುವುದಾಗಿ ಅವರು ತಿಳಿಸಿದ್ದಾರೆ.

ಕಾಂತಾರ ಸಿನಿಮಾ ಬಾಲಿವುಡ್ ನಲ್ಲೂ ಸಖತ್ ಸದ್ದು ಮಾಡುತ್ತಿದೆ. ಈವರೆಗೂ 65 ಕೋಟಿಗೂ ಅಧಿಕ ಹಣವನ್ನು ಗಳಿಕೆ ಮಾಡಿದೆ. ಇನ್ನೂ ಹಲವು ಕಡೆ ಹೌಸ್ ಫುಲ್ ಪ್ರದರ್ಶನ ಕಂಡಿದೆ. ದೇಶದಾದ್ಯಂತ ಒಟ್ಟು 300 ಕೋಟಿಗೂ ಅಧಿಕ ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ. ಹೀಗಾಗಿಯೇ ರಿಷಬ್ ಶೆಟ್ಟಿ ಅವರಿಗೆ ಡಿಮಾಂಡ್ ಕ್ರಿಯೇಟ್ ಆಗಿದೆ. ವಿವಿಧ ಸಿನಿಮಾ ರಂಗದಿಂದ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ