ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ರಸ್ತೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರು ಸಾವನ್ನಪ್ಪಿದ ರೀತಿಯಲ್ಲಿ ಬೆಳಗಾವಿ ಮೂಲದ ಯುವಕ ಸಾವನ್ನಪ್ಪಿದ್ದಾನೆ. ಪ್ರಕಾಶ್ ಅರಳೀಕಟ್ಟೆ(28) ಎಂಬ ಯುವಕ ಹೊನ್ನಾಳಿ ಹರಿಹರದ ಮಧ್ಯೆ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಬಳಿ ಕಾರು ಹಳ್ಳಕ್ಕೆ ಬಿದ್ದು ಬಸವನಕುಡಚಿ ಗ್ರಾಮದ ASI ಪುತ್ರ ಪ್ರಕಾಶ್ ಅರಳೀಕಟ್ಟೆ ಮೃತಪಟ್ಟಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳಗಾವಿಯಿಂದ ಶಿವಮೊಗ್ಗಕ್ಕೆ ತನ್ನ ಸ್ನೇಹಿತರನ್ನು ಬಿಟ್ಟುಬರಲು ಹೋಗಿದ್ದ ಪ್ರಕಾಶ್ ಕಾರು ಹಳ್ಳಕ್ಕೆ ಬಿದ್ದು ಅಪಘಾತ ಸಂಭವಿಸಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?