ಬೈಲೂರು: ಕಾರ್ಕಳ ತಾಲೂಕಿನ ನೀರೆ ಗ್ರಾಮದಲ್ಲಿ ಕಾಡುಕೋಣವೊಂದು ಮನೆಯಂಗಳಕ್ಕೆ ನುಗ್ಗಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಕಾಡಿನಿಂದ ಏಕಾಏಕಿಯಾಗಿ ಮನೆಯಂಗಳಕ್ಕೆ ಕಾಡುಕೋಣ ಬಂದಿದ್ದು, ಇದರಿಂದ ಮನೆಯವರು ಆತಂಕಕ್ಕೊಳಗಾದರು. ಬಳಿಕ ಮನೆಮಂದಿ ಸೇರಿ ಕಾಡುಕೋಣವನ್ನು ಓಡಿಸಿದರು.
ಆದರೆ ಕಾಡುಕೋಣವು ಗ್ರಾಮದ ಏಕೈಕ ಸಂರ್ಪಕ ರಸ್ತೆಯಲ್ಲಿ ಅಡ್ಡವಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿದ್ದು, ಇದರಿಂದ ಗ್ರಾಮಸ್ಥರ ಒಡಾಟಕ್ಕೆ ಅಡಚಣೆಯಾಯಿತು.
ಆ ನಂತರ ಗ್ರಾಮಸ್ಥರು ಹರಸಾಹಸಪಟ್ಟು ಕೋಣವನ್ನು ಕಾಡಿಗೆ ಅಟ್ಟಿದರು. ಈ ಭಾಗದಲ್ಲಿ ಆಗಾಗ್ಗೆ ಕಾಡುಕೋಣ ಕಾಣಿಸಿಕೊಳ್ಳುತ್ತಿದ್ದು, ಇದರಿಂದ ಜನರು ಭೀತಿಗೊಂಡಿದ್ದಾರೆ.
ಕೆಲ ದಿನಗಳ ಹಿಂದೆ ನೀರೆ ಗ್ರಾಮದ ಹತ್ತಿರ ಪಂಚನಬೆಟ್ಟು ಎಂಬಲ್ಲಿ ಕಾಡುಕೋಣವೊಂದು ಪಾಳುಬಾವಿಗೆ ಬಿದ್ದಿದ್ದು, ಅದನ್ನು ಬಳಿಕ ಅರಣ್ಯ ಇಲಾಖೆಯವರು ರಕ್ಷಣೆ ಮಾಡಿದ್ದರು.
ಬೊಮ್ಮಾರಬೆಟ್ಟು, ನಿರೇ ಗ್ರಾಮ ಸಹಿತ ವಿವಿಧ ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚುತ್ತಿದ್ದು, ಕಾಡು ಬಿಟ್ಟು ನಾಡಿಗೆ ಬರಲು ಆರಂಭಿಸಿವೆ.
ಇದರಿಂದ ಜನರು ಆತಂಕದಿಂದಲೇ ದಿನ ಕಳೆಯುವಂತಾಗಿದೆ. ಹಾಗಾಗಿ ಅರಣ್ಯ ಇಲಾಖೆಯವರು ಕೂಡಲೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?