ಶನಿವಾರ, ಏಪ್ರಿಲ್ 20, 2024
Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಕಳ: ತಾಯಿ ನಿಧನದ ಸುದ್ದಿ ತಿಳಿದು ಪುತ್ರಿ ಆತ್ಮಹತ್ಯೆ

Twitter
Facebook
LinkedIn
WhatsApp
dead body

ಕಾರ್ಕಳ: ತಾಯಿಯ ಅಕಾಲಿಕ ನಿಧನದ ಸುದ್ದಿ ತಿಳಿದು ಮಗಳು ಮನೆ ಸಮೀಪದ ಕೆರೆ ಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಈದು ನೂರಾಲ್ ಬೆಟ್ಟು ಕಜೆ ಎಂಬಲ್ಲಿ ಸಂಭವಿಸಿದೆ.

ಅನಾರೋಗ್ಯಕ್ಕೆ ತುತ್ತಾಗಿದ್ದ ಭಾಗಿ(65) ಎಂಬವರು ಮಂಗಳವಾರ ಬೆಳಿಗ್ಗೆ ಸುಮಾರು 10 ವೇಳೆಯಲ್ಲಿ ಮನೆಯಲ್ಲಿ ಮೃತಪಟ್ಟಿದ್ದರು.

ಈ ನಡುವೆ ಭಾಗಿಯ ಮಗಳು ರೇಖಾ(25) ಎಂಬಾಕೆ ಎಂದಿನಂತೆ ನಾರಾವಿಯ ಫ್ಯಾನ್ಸಿ ಅಂಗಡಿಯ ಕೆಲಸಕ್ಕೆಂದು ಹೊರಟು ಹೋಗಿದ್ದ ಆಕೆಗೆ ಪರಿಚಯಸ್ಥರೊಬ್ಬರ ಕರೆ ಮಾಡಿ ತಾಯಿಗೆ ಸೌಖ್ಯವಿಲ್ಲ ಮನೆಗೆ ಬಾ ಎಂದು ಎಂದಿದ್ದರು.

ಅಸೌಖ್ಯದಲ್ಲಿ ಇರುವ ತಾಯಿಗೆ ಏನಾಯಿತ್ತೆಂಬ ಪ್ರಶ್ನೆ ಆಕೆಯಲ್ಲಿ ಕಾಡುತ್ತಿರುವ ನಡುವೆ ತಾಯಿ ಮೃತಪಟ್ಟಿರಬೇಕೆಂಬ ಅನುಮಾನದ ಹಿನ್ನಲೆಯಲ್ಲಿ ಕೆಲಸದಿಂದ ಹಿಂತಿರುಗಿದ್ದ ರೇಖಾ ಮನೆಗೆ ಹೋಗುವ ಮುನ್ನವೇ ಪರಿಸರದ ಕೆರೆಗೆ ಹಾರಿ ಆತ್ಮಹತ್ಯೆಗೈದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಾಂತರ ಠಾಣಾಧಿಕಾರಿ ಹಾಗೂ ಸಿಬ್ಬಂದಿಯರು ಘಟನಾ ಸ್ಥಳಕ್ಕೆ ತೆರಳಿ ಅಗತ್ಯ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ