ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಸರಗೋಡಿನ ಯುವತಿ ಸಾವಿಗೆ ಕಾರಣ ಫುಡ್ ಪಾಯ್ಸನ್ ಅಲ್ಲ, ಇಲಿ ಪಾಷಾಣ!

Twitter
Facebook
LinkedIn
WhatsApp
ಕಾಸರಗೋಡಿನ ಯುವತಿ ಸಾವಿಗೆ ಕಾರಣ ಫುಡ್ ಪಾಯ್ಸನ್ ಅಲ್ಲ, ಇಲಿ ಪಾಷಾಣ!

ಕಾಸರಗೋಡು: ಕೇರಳದ ಕಾಸರಗೋಡಿನಲ್ಲಿ ಚಿಕನ್ ಬಿರಿಯಾನಿ ತಿಂದು ಯುವತಿ ಸಾವನ್ನಪ್ಪಿದ ಪ್ರಕರಣದಲ್ಲಿ ಅಂಜುಶ್ರೀ ಪಾರ್ವತಿಯ ಸಾವಿಗೆ ಇಲಿ ಪಾಷಾಣ ಸೇವನೆ ಕಾರಣ ಎಂದು ರಾಸಾಯನಿಕ ತಪಾಸಣಾ ವರದಿಯಿಂದ ತಿಳಿದು ಬಂದಿದೆ. ಜನವರಿ 7ರಂದು ಅಂಜುಶ್ರೀ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಟ್ಟಿದ್ದಳು. ಕೋಝಿಕ್ಕೊಡ್ ನ ಫಾರೆನ್ಸಿಕ್ ಪ್ರಯೋಗಾಲಯದಲ್ಲಿ ನಡೆಸಿದ ತಪಾಸಣೆಯಿಂದ ಇಲಿ ವಿಷ ಸೇವನೆ ಅಂಜುಶ್ರೀ ಸಾವಿಗೆ ಕಾರಣ ಎಂದು ಖಚಿತ ಪಡಿಸಿದೆ. ಈ ಕುರಿತ ವರದಿ ತನಿಖಾ ತಂಡಕ್ಕೆ ಲಭಿಸಿದೆ. ಅಂತಿಮ ಮರಣೋತ್ತರ ಪರೀಕ್ಷಾ ವರದಿಯಲ್ಲೂ ಇದನ್ನು ದೃಢೀಕರಿಸಿತ್ತು.

ಮಂಜೇಶ್ವರ ಗೋವಿಂದ ಪೈ ಕಾಲೇಜಿನ ವಿದ್ಯಾರ್ಥಿನಿ (Student)ಯಾಗಿದ್ದ ಪೆರುಂಬಳ ಬೇನೂರಿನ ಅಂಜುಶ್ರೀ ಪಾರ್ವತಿ ಕಾಸರಗೋಡು ನಗರ ಹೊರ ವಲಯದ ಹೋಟೆಲೊಂದರಿಂದ ಆನ್‌ಲೈನ್‌ನಲ್ಲಿ ಖರೀದಿಸಿದ್ದ ಆಹಾರ (Food) ಸೇವಿಸಿರುವುದು ಸಾವಿಗೆ ಕಾರಣ ಎಂದು ಕುಟುಂಬಸ್ಥರು ಮೇಲ್ಪರಂಬ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಇದರಂತೆ ಹೋಟೆಲ್ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಂಡಿದ್ದರು. ಆದರೆ ಆಹಾರದಿಂದ ಸಾವು (Death) ಸಂಭವಿಸಿಲ್ಲ ಎಂದು ತನಿಖೆಯಿಂದ ದೃಢಪಟ್ಟಿತ್ತು.

ಆರಂಭದಲ್ಲಿ ಫುಡ್​ ಪಾಯಿಸನ್​ನಿಂದ ಕೇರಳದ ಕಾಸರಗೋಡಿನಲ್ಲಿ ಯುವತಿ (Girl)ಯೊಬ್ಬಳು ಮೃತಪಟ್ಟಿರುವುದಾಗಿ ಸುದ್ದಿಯಾಗಿತ್ತು. ಮೃತ ಯುವತಿಯನ್ನು ಕಾಸರಗೋಡಿನ ಥಲಕ್ಲೇ ಮೂಲದ ಅಂಜುಶ್ರೀ ಪಾರ್ವತಿ ಎಂದು ಗುರುತಿಸಲಾಗಿತ್ತು. ಉದುಮದಲ್ಲಿರುವ ಹೋಟೆಲ್​ ಒಂದರಲ್ಲಿ ಆನ್​ಲೈನ್​ ಮೂಲಕ ಚಿಕನ್​ ಆಹಾರ ತರಿಸಿ ಅಂಜುಶ್ರೀ ಸೇವಿಸಿದ್ದಳು. ಇದಾದ ಬಳಿಕ ಆಕೆಯ ಆರೋಗ್ಯ (Health)ದಲ್ಲಿ ಏರುಪೇರು ಕಂಡುಬಂದಿತ್ತು.

ಪರಿಸ್ಥಿತಿ ಗಂಭೀರವಾದ ಬೆನ್ನಲ್ಲೇ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ (Hospital) ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಯುವತಿ ಮೃತಪಟ್ಟಿದ್ದಳು. ಪುಡ್​ ಪಾಯಿಸನ್​ನಿಂದ ಮೃತಪಟ್ಟಿದ್ದಾಳೆ ಎಂದು ಹೇಳಾಗಿತ್ತು. ಆದರೆ ಈಗ ಸಾವು ಫುಡ್ ಪಾಯ್ಸನ್‌ನಿಂದ ಆಗಿಲ್ಲ. ಬದಲಿಗೆ ಅಂಜುಶ್ರೀ ಪಾರ್ವತಿಯ ಸಾವಿಗೆ ಇಲಿ ಪಾಷಾಣ ಸೇವನೆ ಕಾರಣ ಎಂದು ರಾಸಾಯನಿಕ ತಪಾಸಣಾ ವರದಿಯಿಂದ ತಿಳಿದು ಬಂದಿದೆ.

ಘಟನೆ ಬೆಳಕಿಗೆ ಬರ್ತಿದ್ದಂತೆ, ಸಂಬಂಧಪಟ್ಟ ಹೋಟೆಲ್‌ನಲ್ಲಿರುವ ನೀರು ಮತ್ತು ಆಹಾರ (Food)ವನ್ನು ಪರಿಶೀಲಿಸಿದ್ದರು. ಈ ಘಟನೆ ಆರೋಗ್ಯ ಸಚಿವರ ಗಮನಕ್ಕೆ ಬರುತ್ತಿದ್ದಂತೆ ತನಿಖೆಗೆ ಆದೇಶಿಸಲಾಗಿತ್ತು. ದಿ.ಕುಮಾರನ್ ನಾಯರ್ – ಅಂಬಿಕಾ ದಂಪತಿಯ ಪುತ್ರಿಯಾದ ಅಂಜುಶ್ರೀ ಅವರು ತಾಯಿ ಅಲ್ಲದೆ ಸಹೋದರರನ್ನು ಅಗಲಿದ್ದಾರೆ. ಪೊಲೀಸರು ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದರು.

ಕೇರಳ ರಾಜ್ಯದಲ್ಲಿ ಫುಡ್‌ ಪಾರ್ಸೆಲ್‌ಗಳಿಗೆ ಎಕ್ಸ್‌ಪೈರಿ ದಿನಾಂಕ ಕಡ್ಡಾಯ
ತಿರು​ವ​ನಂತ​ಪು​ರ: ಕೇರಳ ರಾಜ್ಯ​ದಲ್ಲಿ ಫುಡ್‌ ಪಾಯ್ಸ​ನಿಂಗ್‌ ಪ್ರಕ​ರ​ಣ​ಗಳು ಹೆಚ್ಚಾದ ಹಿನ್ನೆ​ಲೆ​ಯಲ್ಲಿ ಪಾರ್ಸೆಲ್‌ ಕೊಡುವ ಆಹಾ​ರದ ಪೊಟ್ಟ​ಣ​ಗಳ ಮೇಲೆ ಆಹಾರ ಚೆನ್ನಾ​ಗಿ​ರುವ ಅಂತಿಮ ದಿನಾಂಕ​/ಸಮಯವ​ನ್ನು ಪ್ರಕ​ಟಿ​ಸು​ವು​ದನ್ನು ಕಡ್ಡಾ​ಯ​ಗೊ​ಳಿ​ಸಿದೆ. ಇದನ್ನು ನಮೂ​ದಿ​ಸಿ​ಲ್ಲದ ಆಹಾರ ಪದಾ​ರ್ಥ​ಗ​ಳನ್ನು ನಿಷೇ​ಧಿ​ಸಿದೆ. ಆಹಾ​ರ ತಯಾ​ರಿ​ಸಿದ ದಿನಾಂಕ (Manufacture date) ಮತ್ತು ಸಮಯ, ಪ್ಯಾಕ್‌ ಮಾಡ​ಲಾದ ದಿನಾಂಕ ಮತ್ತು ಸಮಯ, ಆಹಾ​ರ​ವನ್ನು ತಿನ್ನ​ಬ​ಹು​ದಾ​ದ ಅಂತಿಮ ದಿನಾಂಕ (Expiry date)​ವನ್ನು ಪ್ರಕ​ಟಿ​ಸು​ವುದು ಕಡ್ಡಾಯ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿ​ದ್ದಾರೆ.

‘ಆ​ಹಾರ ಸುರ​ಕ್ಷತಾ ಮಾನ​ದಂಡದ ನಿಯ​ಮ​ಗಳ ಪ್ರಕಾರ, ಬಿಸಿ ಆಹಾ​ರ​ಗಳನ್ನು ತಯಾ​ರಿ​ಸಿದ 2 ಗಂಟೆ​ಗಳ ಒಳಗೆ ತಿನ್ನ​ಬೇಕು. ಇಂತಹ ಆಹಾ​ರ​ಗ​ಳನ್ನು ಸಾಗಿ​ಸು​ವಾಗ 60 ಡಿಗ್ರಿ ಉಷ್ಣಾಂಶ ಇರು​ವಂತೆ ನೋಡಿ​ಕೊ​ಳ್ಳ​ಬೇಕು. 2 ಗಂಟೆ​ಗ​ಳಿಗೂ ಹೆಚ್ಚು ಕಾಲ ಸಾಮಾನ್ಯ ತಾಪ​ಮಾ​ನಕ್ಕೆ ತೆರೆ​ದಿಟ್ಟಆಹಾರ ಪದಾ​ರ್ಥ​ವನ್ನು ಸೇವಿ​ಸು​ವುದು ಆರೋ​ಗ್ಯಕ್ಕೆ (Health) ಒಳ್ಳೆ​ಯ​ದಲ್ಲ. ಹಾಗಾಗಿ ಸುರ​ಕ್ಷತಾ ಚೀಟಿ​ಗಳು ಮತ್ತು ಎಕ್ಸ್‌​ಪೈರಿ ದಿನಾಂಕ​ಗ​ಳಿ​ಲ್ಲದ ಆಹಾರ ಪದಾ​ರ್ಥ​ಗಳ ಪೊಟ್ಟ​ಣ​ಗ​ಳನ್ನು ನಿಷೇ​ಧಿ​ಸ​ಲಾ​ಗಿದೆ’ ಎಂದು ಅವರು ಹೇಳಿ​ದ್ದಾರೆ. ಇತ್ತೀಚೆಗೆ ಆನ್‌ಲೈನ್‌ನಲ್ಲಿ ಬಿರಿಯಾನಿ ತರಿಸಿಕೊಂಡಿದ್ದ ಕಾಸರಗೋಡಿನ ಮಹಿಳೆ (Woman)ಯೊಬ್ಬರು ಸಾವನ್ನಪ್ಪಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist