ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾಸರಗೋಡು: ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Twitter
Facebook
LinkedIn
WhatsApp
allwyn 210123 ksgd

ಕಾಸರಗೋಡು, ಜ 21  ನಾಪತ್ತೆಯಾಗಿದ್ದ ವಿವಿಧ ಧರ್ಮಗಳಿಗೆ ಸೇರಿದ ಜೋಡಿಯೊಂದು ಇಲ್ಲಿನ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತರನ್ನು ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಕೆ.ಎಂ. ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು (36) ಎಂದು ಗುರುತಿಸಲಾಗಿದೆ. ಜನವರಿ 7ರಂದು ಇಬ್ಬರೂ ನಾಪತ್ತೆಯಾಗಿದ್ದರು. ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ರಾಜಾಪುರ ಪೊಲೀಸರು ಜೋಡಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಗುರುವಾಯೂರು ಪಡಿಯಾರ ನಾಡೆಯ ಲಾಡ್ಜ್‌ನ ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ.

ಮೊಹಮ್ಮದ್ ಮತ್ತು ಸಿಂಧು ಬುಧವಾರ ಲಾಡ್ಜ್‌ನಲ್ಲಿ ಕೊಠಡಿಯನ್ನು ಬಾಡಿಗೆಗೆ ತೆಗೆದುಕೊಂಡಿದ್ದರು. ಮಧ್ಯಾಹ್ನದವರೆಗೂ ತಮ್ಮ ಕೊಠಡಿಯ ಬಾಗಿಲು ತೆರೆಯದ ಕಾರಣ ಲಾಡ್ಜ್ ಮ್ಯಾನೇಜರ್ ಡುಪ್ಲಿಕೇಟ್ ಕೀ ಮೂಲಕ ಬಾಗಿಲು ತೆರೆದು ನೋಡಿದಾಗ ಇಬ್ಬರೂ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ