ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಿಂಗ್ ಕೊಹ್ಲಿ ಶತಕ ಬಾರಿಸಿದರೂ ಕೈಕೊಟ್ಟ ಬೌಲರ್ಸ್ ; RCB ಫ್ಯಾನ್ಸ್ ಕಪ್ ಕನಸು ಛಿದ್ರ!

Twitter
Facebook
LinkedIn
WhatsApp
WhatsApp Image 2023 05 22 at 8.01.35 AM

IPL 2023: ಐಪಿಎಲ್​ ಸೀಸನ್​ 16 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಯಾನ ಅಂತ್ಯವಾಗಿದೆ. ಗುಜರಾತ್ ಟೈಟಾನ್ಸ್​ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸೋಲುವ ಮೂಲಕ ಆರ್​ಸಿಬಿ ಪ್ಲೇಆಫ್ ಅವಕಾಶವನ್ನು ಕೈಚೆಲ್ಲಿಕೊಂಡಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿಗೆ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಉತ್ತಮ ಆರಂಭ ಒದಗಿಸಿದ್ದರು.

ಇದಾದ ಬಳಿಕ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕ ದಿಢೀರ್ ಕುಸಿತಕ್ಕೊಳಗಾದರೂ ವಿರಾಟ್ ಕೊಹ್ಲಿ ಏಕಾಂಗಿಯಾಗಿ ಇನಿಂಗ್ಸ್​ ಕಟ್ಟುವ ಜವಾಬ್ದಾರಿ ಹೆಗಲೇರಿಸಿಕೊಂಡರು. ಅದರಂತೆ ಏಕಾಂಗಿಯಾಗಿ ಹೋರಾಟ ಮುಂದುವರೆಸಿದ ಕಿಂಗ್ ಕೊಹ್ಲಿ 60 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು.

ವಿರಾಟ್ ಕೊಹ್ಲಿಯ ಈ ಅಜೇಯ ಶತಕದ ನೆರವಿನಿಂದ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 197 ರನ್​ ಕಲೆಹಾಕಿತು.

ಇತ್ತ ಬೃಹತ್ ಪೇರಿಸಿ ಗೆಲ್ಲುವ ವಿಶ್ವಾಸದೊಂದಿಗೆ ಕಣಕ್ಕಿಳಿದಿದ್ದ ಆರ್​ಸಿಬಿಗೆ ಮತ್ತೊಮ್ಮೆ ಪವರ್​ಪ್ಲೇನಲ್ಲೇ ಯಶಸ್ಸು ತಂದುಕೊಡುವಲ್ಲಿ ಮೊಹಮ್ಮದ್ ಸಿರಾಜ್ ಯಶಸ್ವಿಯಾದರು. ಆದರೆ ಬಳಿಕ ಜೊತೆಯಾದ ಶುಭ್​ಮನ್ ಗಿಲ್ ಹಾಗೂ ವಿಜಯ್ ಶಂಕರ್ 123 ರನ್​ಗಳ ಜೊತೆಯಾಟವಾಡಿದರು.

ವಿಕೆಟ್ ಪಡೆಯುವಲ್ಲಿ ವಿಫಲರಾದ ಆರ್​ಸಿಬಿ ಬೌಲರ್​ಗಳು ದುಬಾರಿಯಾಗಿ ಪರಿಣಮಿಸಿದರು. ಇದಾಗ್ಯೂ ಅಂತಿಮ ಹಂತದಲ್ಲಿ ಸತತ ವಿಕೆಟ್ ಕಬಳಿಸುವ ಮೂಲಕ ಕಂಬ್ಯಾಕ್ ಮಾಡಿದರೂ ಅದಾಗಲೇ ಗುಜರಾತ್ ಟೈಟಾನ್ಸ್​ ತಂಡವು ಗೆಲುವಿನತ್ತ ದಾಪುಗಾಲಿಟ್ಟಿತು.

ಕೊನೆಯ 2 ಓವರ್​ಗಳಲ್ಲಿ ಗುಜರಾತ್ ಟೈಟಾನ್ಸ್ ತಂಡವು 19 ರನ್​ಗಳ ಟಾರ್ಗೆಟ್ ಪಡೆಯಿತು. ಈ ಹಂತದಲ್ಲಿ ಹರ್ಷಲ್ ಪಟೇಲ್ ಎಸೆತದಲ್ಲಿ ಗಿಲ್ ಭರ್ಜರಿ ಸಿಕ್ಸ್ ಸಿಡಿಸಿದರು. ಅಲ್ಲದೆ ಅಂತಿಮ ಓವರ್​ಗೆ ಕೇವಲ 8 ರನ್​ಗಳ ಗುರಿಗೆ ತಂದು ನಿಲ್ಲಿಸಿದರು.

ಕೊನೆಯ ಓವರ್​ನಲ್ಲಿ ವೇಯ್ನ್ ಪಾರ್ನೆಲ್​ಗೆ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಶುಭ್​ಮನ್ ಗಿಲ್ 52 ಎಸೆತಗಳಲ್ಲಿ ಶತಕ ಪೂರೈಸುವುದರ ಜೊತೆಗೆ ಗುಜರಾತ್ ಟೈಟಾನ್ಸ್​ಗೆ 6 ವಿಕೆಟ್​ಗಳ ಅಮೋಘ ಗೆಲುವು ತಂದುಕೊಟ್ಟರು.

ಆರ್​ಸಿಬಿ ಪರ ವಿಜಯ್ ಕುಮಾರ್ ವೈಶಾಖ್ 4 ಓವರ್​ಗಳಲ್ಲಿ 40 ರನ್​ ನೀಡಿ 1 ವಿಕೆಟ್ ಪಡೆದರೆ, ಹೊಸ ಆಟಗಾರ ಹಿಮಾಂಶು ಶರ್ಮಾ 3 ಓವರ್​ಗಳಲ್ಲಿ 28 ರನ್ ನೀಡಿದರು. ಇನ್ನು ಹರ್ಷಲ್ ಪಟೇಲ್ 4 ಓವರ್​ಗಳಲ್ಲಿ 29 ರನ್ ನೀಡಿ 1 ವಿಕೆಟ್ ಉರುಳಿಸಿದರೆ, ವೇಯ್ನ್ ಪಾರ್ನೆಲ್ 3.1 ಓವರ್​ಗಳಲ್ಲಿ 42 ರನ್ ನೀಡಿದರು. ಹಾಗೆಯೇ ಸಿರಾಜ್ 4 ಓವರ್​ಗಳಲ್ಲಿ 32 ರನ್ ನೀಡಿ 2 ವಿಕೆಟ್ ಕಬಳಿಸಿದರು. ಅಂದರೆ ಬೌಲರ್​ಗಳ ಕಳಪೆ ಪ್ರದರ್ಶನದಿಂದಾಗಿ ಆರ್​ಸಿಬಿ ತಂಡವು 6 ವಿಕೆಟ್​ಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು.

ಇದರೊಂದಿಗೆ ಆಡಿರುವ 14 ಪಂದ್ಯಗಳಲ್ಲಿ 7 ಜಯ ಹಾಗೂ 7 ಸೋಲಿನೊಂದಿಗೆ ಆರ್​ಸಿಬಿ ತಂಡವು 16ನೇ ಸೀಸನ್ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದೆ.

ಇತ್ತ ಆರ್​ಸಿಬಿ ಸೋಲಿನೊಂದಿಗೆ ಅತ್ತ 16 ಪಾಯಿಂಟ್ಸ್ ಕಲೆಹಾಕಿದ್ದ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಿ ಪ್ಲೇಆಫ್ ಪ್ರವೇಶಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist