ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಿಚ್ಚ ಸುದೀಪ್‌ಗೆ ಬ್ಯಾಟ್ ಗಿಫ್ಟ್ ಕೊಟ್ಟ ಜೋಸ್ ಬಟ್ಲರ್

Twitter
Facebook
LinkedIn
WhatsApp
ಕಿಚ್ಚ ಸುದೀಪ್‌ಗೆ ಬ್ಯಾಟ್ ಗಿಫ್ಟ್ ಕೊಟ್ಟ ಜೋಸ್ ಬಟ್ಲರ್

ಮುಂಬೈ: ಇಂಗ್ಲೆಂಡ್ ತಂಡದ ಕ್ರಿಕೆಟಿಗ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಬ್ಯಾಟ್‌ವೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

2022ರ 15ನೇ ಆವೃತ್ತಿ ಐಪಿಎಲ್‌ನಲ್ಲಿ ತಾವು ಆಡಿದ್ದ ಬ್ಯಾಟ್ ಮೇಲೆ ಸಹಿ ಮಾಡಿ ಅದನ್ನು ಕಿಚ್ಚ ಸುದೀಪ್‌ಗೆ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಸುದೀಪ್ ಕರ್ನಾಟಕ ಪ್ರೀಮಿಯರ್ ಲೀಗ್‌ನಲ್ಲಿ ಆಟವಾಡಿದ ಫೋಟೋವೊಂದನ್ನು ರಾಜಾಸ್ಥಾನ್ ರಾಯಲ್ಸ್ ತಂಡವು ಟ್ವೀಟ್‌ನಲ್ಲಿ ಹಂಚಿಕೊಂಡಿದೆ. ಇದನ್ನೂ ಓದಿ: ಮುಂಬೈಗೆ 725 ರನ್‍ಗಳ ದಾಖಲೆಯ ಜಯ – ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ 129 ವರ್ಷಗಳ ಬಳಿಕ ರೆಕಾರ್ಡ್ ಬ್ರೇಕ್
 
ಇದಕ್ಕೆ ಉತ್ಸಾಹದಿಂದಲೇ ಪ್ರತಿಕ್ರಿಯೆ ನೀಡಿರುವ ಕಿಚ್ಚ ಸುದೀಪ್ ವಿಶೇಷ ವೀಡಿಯೋವೊಂದನ್ನು ಮಾಡಿದ್ದು, ಜೋಸ್ ಬಟ್ಲರ್‌ಗೆ ಧನ್ಯವಾದ ಹೇಳಿದ್ದಾರೆ. ಈ ವೀಡಿಯೋವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸಂಭ್ರಮ ಹಂಚಿಕೊಂಡಿದ್ದಾರೆ. ಅದರೊಂದಿಗೆ ಬ್ಯಾಟ್ ಸಿಗಲು ಸಹಾಯ ಮಾಡಿದ ರಾಜಸ್ಥಾನ ರಾಯಲ್ಸ್ ತಂಡದ ಆಟಗಾರ ಕನ್ನಡಿಗ ಕೆ.ಸಿ.ಕಾರ್ಯಪ್ಪ ಹಾಗೂ ರಾಜಸ್ಥಾನ ರಾಯಲ್ಸ್ ತಂಡಕ್ಕೂ ಧನ್ಯವಾದ ಸಲ್ಲಿಸಿದ್ದಾರೆ.

ನಿಜಕ್ಕೂ ನನಗೆ ಬಹಳ ಅಚ್ಚರಿಯಾಯಿತು. ನಾನು ಇದನ್ನು ನಿರೀಕ್ಷೆ ಸಹ ಮಾಡಿರಲಿಲ್ಲ. ಮೊದಲಿಗೆ ನಾನು ರಾಜಸ್ಥಾನ ರಾಯಲ್ಸ್ ತಂಡಕ್ಕೆ ಧನ್ಯವಾದ ಹೇಳಲು ಇಷ್ಟಪಡುತ್ತೇನೆ. ಇದನ್ನು ಸಾಧ್ಯವಾಗಿಸಿದ ನನ್ನ ಸ್ನೇಹಿತ ಕೆಸಿ ಕಾರ್ಯಪ್ಪಗೂ ಥ್ಯಾಂಕ್ಸ್ ಹೇಳುತ್ತೇನೆ. ವಿಶೇಷವಾಗಿ ಜೋಸ್ ಬಟ್ಲರ್ ಸಲುವಾಗಿ ಈ ವೀಡಿಯೋ ಮಾಡಿದ್ದೇನೆ. ವೈಯಕ್ತಿಕವಾಗಿ ನೀವು ಸಹಿ ಮಾಡಿದಂಥ ಬ್ಯಾಟ್ ಅನ್ನು ನನಗೆ ನೀಡಿದ್ದಕ್ಕೆ ಬಹಳ ಧನ್ಯವಾದ.

ಇದನ್ನು ನಾನು ಸ್ವೀಕರಿಸಿದ್ದೇನೆ. ನನಗೆ ಬಹಳ ಸಂತೋಷವಾಗಿದೆ ಎಂದು ಕೃತಜ್ಞತಾ ವೀಡಿಯೋವನ್ನು ಸುದೀಪ್ ಹಂಚಿಕೊಂಡಿದ್ದಾರೆ. ಈ ಬಾರಿ ಐಪಿಎಲ್ ಸೀಜನ್‌ನಲ್ಲೂ ಜೋಸ್ ಬಟ್ಲರ್ ಭರ್ಜರಿ ಪ್ರದರ್ಶನ ನೀಡಿದ್ದಾರೆ ಎಂದಿರುವ ಸುದೀಪ್ ಖಂಡಿತವಾಗಿ ನಾನು ಇದನ್ನು ಜೋಪಾನವಾಗಿ ಕಾಯ್ದಿಟ್ಟುಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ.

15ನೇ ಆವೃತ್ತಿ ಐಪಿಎಲ್‌ನಲ್ಲಿ ಜೋಸ್ ಬಟ್ಲರ್ ಏಕಾಂಗಿ ಹೋರಾಟದ ಮೂಲಕ ರಾಜಾಸ್ಥಾನ್ ರಾಯಲ್ಸ್ ತಂಡವನ್ನು ಫೈನಲ್ ಪಂದ್ಯದ ವೆರೆಗೆ ಮುನ್ನಡೆಸಿದ್ದರು. ಒಟ್ಟು 15 ಪಂದ್ಯಗಳಲ್ಲಿ 718 ರನ್‌ಗಳನ್ನು ಗಳಿಸುವ ಮೂಲಕ ಆರೆಂಜ್ ಕ್ಯಾಪ್ ಗಳಿಸಿಕೊಂಡರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ