ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಂದಾಪುರ: ಪಿಯುಸಿ ಪರೀಕ್ಷೆಯಲ್ಲಿ ಟಾಪರ್-ಟ್ಯೂಷನ್ ಇಲ್ಲದೆ ಅನಿರೀಕ್ಷಿತ ಸಾಧನೆ

Twitter
Facebook
LinkedIn
WhatsApp
342209727 1587805555027553 6420748993116079768 n 4

 ಕುಂದಾಪುರ, ಏ.21 :ಕುಂದಾಪುರದ ವೆಂಕಟರಮಣ ಆಂಗ್ಲ ಮಾಧ್ಯಮ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನೇಹಾ ಜೆ.ರಾವ್ ಪಿಯುಸಿ ಪರೀಕ್ಷೆಯಲ್ಲಿ 594 ಅಂಕಗಳನ್ನು ಪಡೆದಕೊಂಡಿದ್ದು ಆ ಮೂಲಕ ರಾಜ್ಯಕ್ಕೆ 3ನೇ ಸ್ಥಾನ ಪಡೆದುಕೊಂಡಿದ್ದಾರೆ.

600 ಅಂಕಗಳಲ್ಲಿ 594ಅಂಕಗಳನ್ನು ಪಡೆದುಕೊಂಡಿದ್ದಾರೆ. ಸಂಸ್ಕೃತ, ಕಂಪ್ಯೂಟರ್‌ನಲ್ಲಿ 100, ರಸಾಯನಶಾಸ್ತ್ರ, ಗಣಿತದಲ್ಲಿ 99, ಇಂಗ್ಲಿಷ್, ಭೌತಶಾಸ್ತ್ರದಲ್ಲಿ 98 ಅಂಕಗಳನ್ನು ಗಳಿಸಿದ್ದಾರೆ.

ಕುಂದಾಪುರ ನಗರದ ಮುಖ್ಯ ರಸ್ತೆಯಲ್ಲಿ ಆಶೀರ್ವಾದ ಚಿನ್ನದ ಆಭರಣ ತಯಾರಿಕಾ ಮಳಿಗೆ ಹೊಂದಿರುವ ಕುಂದಾಪುರ ಬಸ್ರೂರು ಮೂರುಕೈ ನಿವಾಸಿ ಜಗದೀಶ್ ರಾವ್ ಎಚ್. ಹಾಗೂ ಸ್ಮೀತಾ ದಂಪತಿಯ ಇಬ್ಬರು ಮಕ್ಕಳಲ್ಲಿ ನೇಹಾ ಮೊದಲನೇಯವರು. ಅವರಿಗೆ ಒಬ್ಬ ಕಿರಿಯ ಸಹೋದರ ಇದ್ದಾರೆ. ಎಲ್.ಕೆ.ಜಿ ಯಿಂದ ಪದವಿ ಪೂರ್ವದವರೆಗಿನ ಶಿಕ್ಷಣವನ್ನು ಅವರು ನಗರದ ಶ್ರೀ ವೆಂಕಟ ರಮಣ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಗಳಲ್ಲಿಯೇ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ನೇಹಾ, ಪರೀಕ್ಷೆ ತುಂಬಾ ಸುಲಭವಾಗಿದ್ದರಿಂದ ಒಳ್ಳೆಯ ಅಂಕಗಳು ಬರುವ ನಿರೀಕ್ಷೆ ಇತ್ತು. ಆದರೆ ರಾಜ್ಯಕ್ಕೆ ರ್ಯಾಂಕ್ ಬರುತ್ತೆ ಎಂದುಕೊಂಡಿರಲಿಲ್ಲ. ಮೂರನೇಯ ರ್ಯಾಂಕ್ ಬಂದಿರುವುದು ತುಂಬಾ ಖುಷಿಯಾಗಿದೆ. ಇದಕ್ಕೆಲ್ಲ ಕಾರಣ ನಮ್ಮ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು. ದಿನನಿತ್ಯ ಬೆಳಿಗ್ಗೆ ಐದು ಗಂಟೆಗೆ ಎದ್ದು ಓದುವ ಪರಿಪಾಠ ಬೆಳೆಸಿಕೊಂಡಿದ್ದೆ. ಮತ್ತೆ ಸಂಜೆ ಮನೆಗೆ ವಾಪಾಸಾಗಿ ದಿನನಿತ್ಯದ ಪಾಠಗಳನ್ನು ಆಯಾಯ ದಿನಗಳಲ್ಲಿ ಓದುತ್ತಿದ್ದೆ. ಪರೀಕ್ಷಾ ಅವಧಿಯಲ್ಲಿ ವೇಳಾಪಟ್ಟಿ ತಯಾರಿಸಿ ಅದರಂತೆಯೇ ಓದುವ ಪರಿಪಾಠವನ್ನು ಬೆಳೆಸಿಕೊಂಡಿದ್ದೆ ಎಂದರು.

‘ಯಾವುದೇ ಟ್ಯೂಷನ್‌ಗೆ ಹೋಗಿರಲಿಲ್ಲ. ಕಾಲೇಜಿನ ಪಾಠ, ಪ್ರವಚನ ಹಾಗೂ ಕೋಚಿಂಗ್ ತರಗತಿಯ ತರಬೇತಿ ನನಗೆ ಅಂಕವನ್ನು ಪಡೆದು ಕೊಳ್ಳಲು ಸಹಾಯವಾಗಿದೆ. ನನಗೆ ಮುಂದೆ ಸಾಫ್ಟ್‌ವೇರ್ ಇಂಜಿನಿಯರ್ ಆಗಬೇಕು ಎಂಬ ಆಸೆ ಇದೆ ಎಂದು ಅವರು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ