ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುಕ್ಕುಟೋದ್ಯಮಕ್ಕೆ ಮಳೆ ಕಂಟಕ; ಕೋಳಿ ಉತ್ಪಾದನೆ ಕುಸಿತ. ಕೋಳಿ ಪ್ರಿಯರಿಗೆ ಬೆಲೆ ಏರಿಕೆಯ ಶಾಕ್!!

Twitter
Facebook
LinkedIn
WhatsApp
ಕುಕ್ಕುಟೋದ್ಯಮಕ್ಕೆ ಮಳೆ ಕಂಟಕ; ಕೋಳಿ ಉತ್ಪಾದನೆ ಕುಸಿತ. ಕೋಳಿ ಪ್ರಿಯರಿಗೆ ಬೆಲೆ ಏರಿಕೆಯ ಶಾಕ್!!

ಬೆಂಗಳೂರು: ಬೆಂಗಳೂರು ಗ್ರಾ,ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ವ್ಯಾಪಕವಾಗಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುತ್ತಿದೆ. ಇದ್ದರಿಂದ ಕೃಷಿಕ್ಷೇತ್ರಕ್ಕೆ ಬಾರಿ ಹೊಡೆತ ನೀಡಿದೆ. ಜತೆಗೆ ಕುಕ್ಕುಟೋದ್ಯಮಕ್ಕೆ ಮಳೆಯ ಸಂಕಷ್ಟ ತಂದಿದೆ. ಮಳೆಯ ಆರ್ಭಟದಿಂದ ಬೆಂಗಳೂರು ಗ್ರಾಮಾಂತರ ಸುತ್ತಮುತ್ತಲಿನ ಜಿಲ್ಲೆಗಳು ಸೇರಿ 4ರಿಂದ 5 ಲಕ್ಷಕ್ಕೂ ಹೆಚ್ಚಿನ ಕೋಳಿಗಳು ಸಾವನ್ನಪ್ಪಿದೆ. ತೇವಾಂಶದಿಂದ ಉಷ್ಣಾಂಶದ ಕೊರತೆಯಾಗಿ ಕೋಳಿಗಳ ಉತ್ಪಾದನೆ ಶೇ.30ರಷ್ಟು ಕುಸಿತಕಂಡಿದೆ. ಇದ್ದರಿಂದ ಕೋಳಿ ಸಾಕಾಣಿಕೆದಾರರಿಗೆ ಮತ್ತೆ ನಷ್ಟ ಎದುರಾಗಿದೆ.

ಕೊರೊನಾ ಹೊಡೆತದಿಂದ ಕುಕ್ಕುಟೋದ್ಯಮ ಕೊಂಚ ಮಟ್ಟಿಗೆ ಸುಧಾರಿಸಿಕೊಳ್ಳುತ್ತಿದೆ. ಆದರೆ ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಇದರಿಂದ ಕೆಲವೆಡೆ ಕೋಳಿ ಫಾರಂಗಳಿಗೆ ಮಳೆ ನೀರು ನುಗ್ಗಿ ಲಕ್ಷಾಂತರ ಪ್ರಮಾಣದ ಕೋಳಿಗಳು ಸಾವನ್ನಪ್ಪಿದ್ದರೆ, ಇನ್ನೂ ಕೆಲವೆಡೆ ಕೋಳಿ ಫಾರಂಗಳಿಗೆ ಹೊಡೆತ ಬಿದ್ದಿದೆ. ಜತೆಗೆ ಕೋಳಿಯ ಉತ್ಪಾದನೆ ಪ್ರಮಾಣಕ್ಕೂ ಮಳೆಎಫೆಕ್ಟ್ ತಟ್ಟಿದ್ದು ಕೋಳಿ ಸಾಕಾಣಿಕೆದಾರರು ಆತಂಕಕ್ಕೆ ಸಿಲುಕಿದ್ದಾರೆ. ಈವರೆಗೆ ಬಯಲುಸೀಮೆ ಜಿಲ್ಲೆಗಳಲ್ಲಿ ಕೋಳಿ ಉತ್ಪಾದನೆಗೆ ಮಳೆಯಿಂದ 7.50 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗುತ್ತಿದೆ.

ರಾಜ್ಯದಲ್ಲಿಯೇ ಹೆಚ್ಚಿನ ಪ್ರಮಾಣದ ಕೋಳಿ ಉತ್ಪಾದನೆಯನ್ನು ಬಯಲುಸೀಮೆ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,ಆನೇಕಲ್‌, ಕೋಲಾರ ಸೇರಿ ಇತರೆ ಭಾಗಗಳಲ್ಲಿ ಮಾಡಲಾಗುತ್ತಿದೆ. ಕಳೆದ ಕೆಲ ತಿಂಗಳಿಂದ” ಕೋಳಿ ಉತ್ಪಾದನೆ ದುಬಾರಿಯಾಗುತ್ತಿದೆ.

ಕುಕ್ಕುಟೋದ್ಯಮದ ಕಚ್ಚಾವಸ್ತುಗಳ ಬೆಲೆಏರಿಕೆಯಾಗುತ್ತಿದೆ. ಕೋಳಿ ಮರಿಗಳ ದರದ ಜತೆಗೆ ಕೋಳಿಗಳಿಗೆ ನೀಡಲಾಗುವ ಆಹಾರವಾದ ಆಹಾರವಾದ ಸೋಯಾ ದರ 90ರ ಗಡಿದಾಟಿದೆ. ಮೆಕ್ಕೆಜೋಳದ ದರ ಕೆಜಿಗೆ 25 ರೂಪಾಯಿಗೂ ಹೆಚ್ಚಿದೆ. ಈ ಮೂಲಕ ದರ ಸತತವಾಗಿ ಏರಿಕೆ ಕಾಣುತ್ತಿದೆ. ಕೋಳಿ ಸಾಕಾಣಿಕೆದಾರರಿಗೆ ನಿರ್ವಹಣೆ ವೆಚ್ಚ, ಕಾರ್ಮಿಕರ ಕೂಲಿ, ವಾಹನಗಳ ಬಾಡಿಗೆ ಹೊರೆಯಾಗಿ ಪರಿಣಮಿಸಿದೆ. ಪ್ರತಿ ಕೆಜಿ ಕೋಳಿ ದರ ಹೋಲ್‌ ಸೇಲ್‌ ನಲ್ಲಿ 77-80 ರೂಪಾಯಿ ಇದ್ದು ಪ್ರತಿ ಕೆಜಿ ಉತ್ಪಾದನಾ ವೆಚ್ಚ 100-110ರೂಪಾಯಿ ಖರ್ಚಾಗುತ್ತಿದೆ. ಈ ಬಾರಿ ವ್ಯಾಪಕ ಮಳೆಯಾದ ಹಿನ್ನೆಲೆ ಕೋಳಿ ಆಹಾರವಾದ ಮೆಕ್ಕೆಜೋಳ, ಸೋಯಾ ಬೆಳೆಗಳಿಗೆ ಹಾನಿಯಾಗಿದೆ. ಇದ್ದರಿಂದ ಇವುಗಳ ಬೆಲೆಗಳಲ್ಲಿ ಹೆಚ್ಚಳವಾಗುವ ಸಾಧ್ಯತೆಯ ಜತೆಗೆ ಕೊರತೆಯಾಗುವ ಸಾಧ್ಯತೆ ಹೆಚ್ಚಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ