ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುತೂಹಲ ಕೆರಳಿಸಿದ ಡಿ.ಕೆ ಸುರೇಶ್- ವಿ.ಸೋಮಣ್ಣ ಮಾತುಕತೆ!

Twitter
Facebook
LinkedIn
WhatsApp
woman smoking 1

ರಾಮನಗರ: ಸಂಸದ ಡಿ.ಕೆ.ಸುರೇಶ್ (D. K. Suresh) ಹಾಗೂ ಸಚಿವ ಸೋಮಣ್ಣನವರು (V.Somanna) ಗುಪ್ತ ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿದ್ದಾರೆ.

ಕನಕಪುರ (Kanakapura) ತಾಲೂಕಿನ ರಾಯಸಂದ್ರದಲ್ಲಿ ಕುವೆಂಪು ಸಂಯುಕ್ತ ವಸತಿ ಬಡಾವಣೆಯ ಮುಖ್ಯದ್ವಾರ ಉದ್ಘಾಟನೆಗೆಂದು ವಿ.ಸೋಮಣ್ಣ ಹಾಗೂ ಡಿ.ಕೆ.ಸುರೇಶ್ ಆಗಮಿಸಿದ್ದರು. ಈ ವೇಳೆ ಮಾಧ್ಯಮ ಹಾಗೂ ಆಪ್ತರನ್ನು ದೂರವಿಟ್ಟು ಯಾವುದೋ ಪತ್ರವನ್ನು ಕೈಯಲ್ಲಿ ಹಿಡಿದುಕೊಂಡು ಡಿ.ಕೆ.ಸುರೇಶ್ ಅವರು ಸಚಿವ ಸೋಮಣ್ಣನವರೊಂದಿಗೆ ಮಾತುಕತೆಯನ್ನು ನಡೆಸಿದ್ದಾರೆ.

ಮಾಧ್ಯಮ ಹಾಗೂ ಆಪ್ತರಿಂದ ದೂರ ನಿಂತು ಈ ಇಬ್ಬರು ನಾಯಕರು ಆಪ್ತ ಮಾತುಕತೆ ನಡೆಸಿದ್ದು ವಿಶೇಷವಾಗಿತ್ತು. ಸೋಮಣ್ಣ ಮತ್ತು ಬಿಜೆಪಿ ನಾಯಕರ ಮಧ್ಯೆ ಸಂಬಂಧ ಹಳಸಿದ್ದು ಅವರು ಪಕ್ಷ ತೊರೆಯಲಿದ್ದಾರೆ ಎಂಬ ಸುದ್ದಿ ಬರುತ್ತಿದೆ. ಈ ಮಧ್ಯೆ ಸುರೇಶ್ ಅವರನ್ನು ಭೇಟಿ ಮಾಡಿ ಕುತೂಹಲ ಮೂಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ