ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕುರ್ಚಿಗಾಗಿ ಸಿಎಂ ಬೊಮ್ಮಾಯಿ ಆರ್‌ಎಸ್‍ಎಸ್‍ನ ಕೈಗೊಂಬೆಯಾಗಿದ್ದಾರೆ: ಪ್ರಿಯಾಂಕ್ ಖರ್ಗೆ

Twitter
Facebook
LinkedIn
WhatsApp
ಕುರ್ಚಿಗಾಗಿ ಸಿಎಂ ಬೊಮ್ಮಾಯಿ ಆರ್‌ಎಸ್‍ಎಸ್‍ನ ಕೈಗೊಂಬೆಯಾಗಿದ್ದಾರೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಕುರ್ಚಿಗಾಗಿ ಆರ್‌ಎಸ್‍ಎಸ್‍ನ ಕೈಗೊಂಬೆಯಾಗಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ್ ಬೊಮ್ಮಾಯಿ ಕುರ್ಚಿಗಾಗಿ ಆರ್‍ಎಸ್‍ಎಸ್ ಕೈಗೊಂಬೆಯಾಗಿದ್ದಾರೆ. ಅವರ ತಂದೆ ಎಸ್.ಆರ್ ಬೊಮ್ಮಾಯಿ ಹೀಗಿರಲಿಲ್ಲ. ಅವರು ವಿಶಾಲ ಮನಸ್ಥಿತಿ ಹೊಂದಿದ್ದರು. ಆದರೆ, ಸಿಎಂ ಆರ್‌ಎಸ್‍ಎಸ್ ತಾಳಕ್ಕೆ ಕುಣಿಯುತ್ತಿದ್ದಾರೆ. ಕಳೆದ ಹತ್ತು ದಿನಗಳಲ್ಲಿ ಮೂವರ ಹತ್ಯೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಗೃಹ ಸಚಿವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಖಾಕಿ ಬಗ್ಗೆ ಭಯನೂ ಇಲ್ಲ, ಗೌರವವೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಗುರುವಾರ ಸಿಎಂ ಪ್ರವೀಣ್ ಸಂತಾಪಕ್ಕೆ ತೆರಳಿದ್ದರು. ನಂತರ ಕೆಲವೇ ಗಂಟೆಗಳಲ್ಲಿ ಮತ್ತೊಂದು ಕೊಲೆಯಾಗುತ್ತದೆ ಅಂದರೆ ಇದರಲ್ಲಿ ಗುಪ್ತಚರ ಸಂಪೂರ್ಣ ವಿಫಲವಾಗಿದೆ. ಖಾಕಿ ಬಗ್ಗೆ ಭಯ ಇದೆ ಅಂತಾ ಹೇಳಲು ಆಗುತ್ತಿದೆಯಾ? ಎಸ್‍ಡಿಪಿಐ, ಪಿಎಫ್‍ಐರನ್ನು ಬೆಳೆಸುತ್ತಿರುವುದು ಬಿಜೆಪಿಯೇ. ಇದನ್ನು ಸ್ವತಃ ಆರ್‌ಎಸ್‍ಎಸ್‍ನ ಪ್ರಮುಖರು ಹೇಳುತ್ತಿದ್ದಾರೆ. ಇವರು ಕಾಂಗ್ರೆಸ್‍ಗೆ ಉತ್ತರ ಕೊಡುವುದು ಬೇಡ. ಅವರದೇ ಪಕ್ಷದ ಕಾರ್ಯಕರಿಗೆ ಉತ್ತರಿಸಲಿ ಎಂದಿದ್ದಾರೆ

ಸರ್ಕಾರದಿಂದ ಪರಿಹಾರ ನೀಡಿಕೆಗೆ ವಿಚಾರವಾಗಿ ಮಾತನಾಡಿದ ಅವರು, ಸರ್ಕಾರದಿಂದ ಈಗ 25 ಲಕ್ಷ ಪರಿಹಾರ ಕೊಡುತ್ತಿದ್ದಾರೆ. ಪರಿಹಾರ ಕೊಡುವುದಿದ್ದರೆ ಎಲ್ಲರಿಗೂ ಕೊಡಲಿ. ಇದರಲ್ಲಿ ತಾರತಮ್ಯ ಏಕೆ? ಅಷ್ಟಕ್ಕೂ ಇದನ್ನು ಯಾವುದರಿಂದ ಕೊಡುತ್ತಿದ್ದಾರೆ.

ಕೊರೊನಾ ಫಂಡ್‍ನಿಂದ ಪರಿಹಾರ ಕೊಡುತ್ತಿದೆ. ಕೊರೊನಾದಿಂದ ಮೃತರಾದವರಿಗೆ ಕೊಡುವ ಹಣದಿಂದ ಕೊಡುತ್ತಿದ್ದೀರಾ? ಹಾಗಾದರೆ ಮುಖ್ಯಮಂತ್ರಿಗಳ ಪರಿಹಾರ ನಿಧಿ ಏನಾಯಿತು? ಹರ್ಷ ಕುಟುಂಬಕ್ಕೆ ಕೊರೊನಾ ಫಂಡ್‍ನಿಂದ ಪರಿಹಾರ ನೀಡಿದ್ದರು. ನಿನ್ನೆ ಪ್ರವೀಣ್ ಕುಟುಂಬಕ್ಕೆ ಯಾವ ಫಂಡ್‍ನಿಂದ ಕೊಟ್ಟರೋ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‍ನ್ನ ಸೋಲಿಸಲಿ ಪಿಎಫ್‍ಐ, ಎಸ್‍ಡಿಪಿಐಗೆ ಫಂಡ್ ಮಾಡುತ್ತಾರೆಂದು ಆರ್‌ಎಸ್‍ಎಸ್‍ನವರೇ ಹೇಳುತ್ತಿದ್ದಾರೆ. ಯಾರು ಯಾರನ್ನು ಸಾಕುತ್ತಿದ್ದಾರೆ ಎಂಬುದಕ್ಕೆ ಮೊದಲು ಅವರೇ ಉತ್ತರ ಕೊಡಲಿ. ಯಾವಾಗ ಬೇಕೋ ಆಗ ಬಳಸಿಕೊಳ್ಳುತ್ತಿದ್ದಾರೆ. ಇದು ನಾವು ಸಾಕಿದ ಗಿಣಿಯೇ ಪ್ರಶ್ನಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist