ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ – ಏರ್ ಇಂಡಿಯಾ, ನೇಪಾಳ ಏರ್‌ಲೈನ್ಸ್ ಡಿಕ್ಕಿ ಜಸ್ಟ್ ಮಿಸ್

Twitter
Facebook
LinkedIn
WhatsApp
Scholarship Application on a t 2

ಕಠ್ಮಂಡು: ಏರ್ ಇಂಡಿಯಾ (Air India) ಹಾಗೂ ನೇಪಾಳ ಏರ್‌ಲೈನ್ಸ್ (Nepal Airlines) ವಿಮಾನಗಳ (Flight) ನಡುವೆ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿರುವ ಘಟನೆ ತಡವಾಗಿ ವರದಿಯಾಗಿದೆ. ಎರಡೂ ವಿಮಾನಗಳ ನಡುವೆ ಡಿಕ್ಕಿ ಸಂಭವಿಸುವ ಸಾಧ್ಯತೆಯಿದ್ದು, ವಿಮಾನದ ಎಚ್ಚರಿಕೆ ವ್ಯವಸ್ಥೆ ಪೈಲಟ್‌ಗಳಿಗೆ ಅಪಾಯದ ಸೂಚನೆಯನ್ನು ನೀಡಿದ್ದರಿಂದ ದೊಡ್ಡ ಅನಾಹುತವನ್ನು ತಪ್ಪಿಸಲಾಗಿದೆ.

ವರದಿಗಳ ಪ್ರಕಾರ ಮಲೇಷ್ಯಾದ ಕೌಲಾಲಂಪುರದಿಂದ ಕಠ್ಮಂಡುಗೆ (Kathmandu) ತೆರಳುತ್ತಿದ್ದ ನೇಪಾಳ ಏರ್‌ಲೈನ್ಸ್ ವಿಮಾನ ಹಾಗೂ ದೆಹಲಿಯಿಂದ ಕಠ್ಮಂಡುಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಶುಕ್ರವಾರ ಪರಸ್ಪರ ಡಿಕ್ಕಿ ಹೊಡೆಯಲು ಅತ್ಯಂತ ಹತ್ತಿರದಲ್ಲಿತ್ತು ಎನ್ನಲಾಗಿದೆ.

ಏರ್ ಇಂಡಿಯಾ ವಿಮಾನ ಭೂಮಿಯಿಂದ 19,000 ಅಡಿ ಎತ್ತರದಿಂದ ಕೆಳಗಿಳಿಯುತ್ತಿದ್ದರೆ, ನೇಪಾಳ ಏರ್‌ಲೈನ್ಸ್ ವಿಮಾನ ಅದೇ ಸ್ಥಳದಲ್ಲಿ 15,000 ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿತ್ತು. ಎರಡು ವಿಮಾನಗಳು ಅತ್ಯಂತ ಸಮೀಪದಲ್ಲಿದೆ ಎಂದು ರಾಡಾರ್‌ನಲ್ಲಿ ತೋರಿಸಿದ್ದರಿಂದ ನೇಪಾಳ ಏರ್‌ಲೈನ್ಸ್ ವಿಮಾನ 7,000 ಅಡಿಗಳಿಗೆ ಇಳಿದಿದೆ ಎಂದು ನೇಪಾಳದ ನಾಗರಿಕ ವಿಮಾನಯಾನ ಪ್ರಾಧಿಕಾರ (ಸಿಎಎಎನ್) ವಕ್ತಾರರು ತಿಳಿಸಿದ್ದಾರೆ.

ಸದ್ಯ ಎರಡು ವಿಮಾನಗಳ ನಡುವೆ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದೆ. ನಾಗರಿಕ ವಿಮಾನಯಾನ ಪ್ರಾಧಿಕಾರ ಅಜಾಗರೂಕತೆ ವಹಿಸಿದ ಹಿನ್ನೆಲೆ ಏರ್ ಟ್ರಾಫಿಕ್ ಕಂಟ್ರೋಲ್ ವಿಭಾಗದ ಮೂವರು ಉದ್ಯೋಗಿಗಳನ್ನು ಅಮಾನತುಗೊಳಿಸಿದೆ. ಘಟನೆಯ ತನಿಖೆಗಾಗಿ 3 ಸದಸ್ಯರ ಸಮಿತಿಯನ್ನು ರಚಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ