ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟಿ ಪತಿ ಆತ್ಮಹತ್ಯೆಗೆ ಶರಣು

Twitter
Facebook
LinkedIn
WhatsApp
ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟಿ ಪತಿ ಆತ್ಮಹತ್ಯೆಗೆ ಶರಣು

ಬೆಳಗಾವಿ (ಫೆ.13): ಇವನು ಪ್ರಥಮ ದರ್ಜೆ ಸಹಾಯಕ. ಜೊತೆಗೆ, ಜಿಮ್‌ ಮಾಡಿಕೊಂಡು ದೇಹವನ್ನು ಕಟ್ಟುಮಸ್ತಾಗಿ ಬೆಳೆಸಿಕೊಂಡು ಹತ್ತು ಜನರು ಬಂದರೂ ಬಗ್ಗುಬಡಿಯುವ ಸಿನಿಮಾ ಹೀರೋ ರೀತಿ ಕಾಣುತ್ತಿದ್ದ. ಇಷ್ಟಲ್ಲದೇ ಇವನಿಗೆ ಕರ್ನಾಟಕ ಆಡಳಿತ ಸೇವೆ (ಕೆಎಎಸ್‌) ಅಧಿಕಾರಿಯಾಗಿರುವ ಮುದ್ದಾದ ಹೆಂಡತಿಯೂ ಇದ್ದಳು. ಆದರೆ, ಜೀವನದಲ್ಲಿ ಏನು ಕಡಿಮೆಯಾಗಿತ್ತೋ ಗೊತ್ತಿಲ್ಲ. ಇಂದು ಮಧ್ಯಾಹ್ನ ಈತನ ಮೃತದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬೆಳಗಾವಿ ನಗರದಲ್ಲಿ ಜಿಮ್‌ ಮಾಡುತ್ತಾ ದೇಹವನ್ನು ಹುರಿಗೊಳಿಸಿಕೊಂಡು ದಷ್ಟಪುಷ್ಟವಾಗಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೈತುಂಬಾ ಸಂಬಳ ಬರುವಂತೆ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಆಗಿ ಕೆಲಸವನ್ನೂ ಮಾಡುತ್ತಿದ್ದನು. ಅದಕ್ಕಿಂತಲೂ ಮಿಗಿಲಾಗಿ ಈತನ ಹೆಂಡತಿಯೂ ಕೂಡ ಕರ್ನಾಟಕ ಆಡಳಿತ ಸೇವೆ (ಕೆಎಎಸ್‌) ಅಧಕಾರಿಯಾಗಿ ಕೆಲಸ ಮಾಡುತ್ತಿದ್ದಾಳೆ. ಇಬ್ಬರದ್ದೂ ಮುದ್ದಾದ ಜೋಡಿಯಾಗಿದೆ.

ಈ ಜೋಡಿಯನ್ನು ನೋಡಿದರೆ ದೃಷ್ಟಿ ಆಗುತ್ತದೆ ಎನ್ನುವಂತೆ ಇತ್ತು. ಆದರೆ, ಜೀವನದಲ್ಲಿ ಇಬ್ಬರ ನಡುವೆ ವೈಮನಸ್ಸು ಇತ್ತೋ ಅಥವಾ ಬೇರೆ ವ್ಯಕ್ತಿಗಳಿಂದ ಸಮಸ್ಯೆ ಎದುರಾಗಿತ್ತೋ ಅಥವಾ ಆರೋಗ್ಯದಲ್ಲಿ ಯಾವುದಾದರೂ ಸಮಸ್ಯೆ ಇತ್ತೋ ಗೊತ್ತಿಲ್ಲ. ಇಂದು ಇದ್ದಕ್ಕಿದ್ದಂತೆ ಅಜಾನುಬಾಹು ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. 

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ: ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಎಫ್‌ಡಿಎ ಜಾಫರ್ ಫೀರ್ಜಾದೆ (39) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಜಾಫರ್ ಫೀರ್ಜಾದೆ ಮೃತದೇಹ ಸ್ಥಳಾಂತರ ಮಾಡಲಾಗಿದೆ. ಡಿಟಿಐ‌ನಲ್ಲಿ ಎಫ್‌ಡಿಎ ತರಬೇತಿಯಲ್ಲಿದ್ದನು. ಎಫ್‌ಡಿಎ ಜಾಫರ್ ಫಿರ್ಜಾದೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಬೆಂಗಳೂರಿಗೆ ತೆರಳಿದ್ದ ಪತ್ನಿ:  ಇನ್ನು ಕೆಎಎಸ್‌ ಅಧಿಕಾರಿಯಾಗಿರುವ ಪತ್ನಿ ರೇಷ್ಮಾ ತಾಳಿಕೋಟೆ ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರೇಷ್ಮಾ ತಾಳಿಕೋಟೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಮನೆಯಲ್ಲಿ ಇವರ ಪತಿ ಜಾಫರ್‌ ಪಿರ್ಜಾದೆ ಸಾವನ್ನಪ್ಪಿದ್ದು, ರೇಷ್ಮಾ ತಾಳಿಕೋಟಿ ಆಗಮನಕ್ಕಾಗಿ ಕುಟುಂಬಸ್ಥರು ಕಾಯುತ್ತಿದ್ದಾರೆ. ಈ ಘಟನೆ ಕುರಿತಂತೆ ಬೆಳಗಾವಿ ನಗರದ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist