ಮಂಗಳವಾರ, ಏಪ್ರಿಲ್ 23, 2024
ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇರಳದಲ್ಲಿ ಕೊರೊನಾ ಜತೆ ನಿಫಾ ಆತಂಕ!

Twitter
Facebook
LinkedIn
WhatsApp
ಕೇರಳದಲ್ಲಿ ಕೊರೊನಾ ಜತೆ ನಿಫಾ ಆತಂಕ!

ಕೋಳಿಕ್ಕೋಡ್‌: ಕೇರಳದಲ್ಲಿ ಪ್ರತಿ ನಿತ್ಯ 30 ಸಾವಿರದ ಆಸುಪಾಸಿನಲ್ಲಿ ಕೊರೊನಾ ಸೋಂಕಿತರು ವರದಿಯಾಗುತ್ತಿರುವ ಬೆನ್ನಿಗೇ ನಿಫಾ ವೈರಾಣು ಸೋಂಕು ಸಹ ಮತ್ತೊಮ್ಮೆ ಅಬ್ಬರಿಸಲು ಆರಂಭಿಸಿದೆ. ನಿಫಾದಿಂದ ಭಾನುವಾರ 12 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ.
ನಾಲ್ಕು ದಿನಗಳ ಮುನ್ನ ಬಾಲಕನಲ್ಲಿ ವಿಪರೀತ ಜ್ವರ ಕಾಣಿಸಿಕೊಂಡಿತ್ತು. ಆತನ ರಕ್ತದ ಮಾದರಿಯನ್ನು ಪುಣೆಯ ಎನ್‌ಐವಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಬಾಲಕನಿಗೆ ನಿಫಾ ಸೋಂಕು ತಗುಲಿರುವುದು ವರದಿಯಲ್ಲಿ ದೃಢಪಟ್ಟಿದೆ. 2018ರ ಮೇ 19ರಂದು ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ನಿಫಾ ಸೋಂಕು ಕೇರಳದಲ್ಲಿ ಪತ್ತೆಯಾಗಿತ್ತು. ಸುಮಾರು 17 ಸೋಂಕಿತರು ತೀವ್ರ ಜ್ವರದಿಂದಾಗಿ ಮೃತಪಟ್ಟಿದ್ದಾರೆ.

”ಶನಿವಾರ ತಡರಾತ್ರಿಯಿಂದ ಬಾಲಕನ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಮುಂಜಾನೆ 5 ಗಂಟೆಗೆ ಮೃತಪಟ್ಟಿದ್ದಾನೆ. ಬಾಲಕನೊಂದಿಗೆ ಸಂಪರ್ಕಕ್ಕೆ ಬಂದವರನ್ನು ಹುಡುಕಿ, ಅವರನ್ನು ಕೂಲಂಕಷ ತಪಾಸಣೆಗೆ ಒಳಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ಬಾಲಕನ ಜತೆಗಿದ್ದ ಪೋಷಕರನ್ನು ಕ್ವಾರಂಟೈನ್‌ನಲ್ಲಿ ಇರಿಸಿದ್ದೇವೆ,” ಎಂದು ಕೇರಳ ಆರೋಗ್ಯ ಸಚಿವೆ ವೀನಾ ಜಾರ್ಜ್‌ ತಿಳಿಸಿದ್ದಾರೆ.
ರಾಜ್ಯದಲ್ಲಿ ಹಲವು ವೈರಾಣುಗಳ ಸೋಂಕು ಹೆಚ್ಚಳವಾಗುವ ಅಪಾಯವನ್ನು ಗ್ರಹಿಸಿರುವ ಕೇಂದ್ರ ಸರಕಾರವು, ರಾಜ್ಯ ಸರಕಾರಕ್ಕೆ ಸೋಂಕು ನಿಯಂತ್ರಣದಲ್ಲಿ ಮಾರ್ಗದರ್ಶನ ಮಾಡುವ ಸಲುವಾಗಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ (ಎನ್‌ಸಿಡಿಸಿ) ತಜ್ಞರ ತಂಡವನ್ನು ಕಳುಹಿಸಿಕೊಟ್ಟಿದೆ.

”ಬಾಲಕನೊಂದಿಗೆ ಸಂಪರ್ಕಕ್ಕೆ ಬಂದಿರುವಂತಹ 188 ಜನರನ್ನು ಗುರುತಿಸಿದ್ದೇವೆ. ಆ ಪೈಕಿ 20 ಮಂದಿಯಲ್ಲಿ ನಿಫಾ ಲಕ್ಷಣಗಳು ಕಂಡುಬಂದಿವೆ” ಎಂದು ಸ್ಥಳೀಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಕೋಳಿಕ್ಕೋಡ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಟತ್ರೆಯಲ್ಲಿ ನಿಫಾ ವಾರ್ಡ್‌ ರಚಿಸಲಾಗಿದೆ. ಆಸ್ಪತ್ರೆಯಲ್ಲಿನ ಒಬ್ಬ ಸಿಬ್ಬಂದಿ ಹಾಗೂ ಮತ್ತೊಂದು ಖಾಸಗಿ ಆಸ್ಪತ್ರೆಯ ಸಿಬ್ಬಂದಿಯನ್ನು ವಾರ್ಡ್‌ಗೆ ದಾಖಲಿಸಲಾಗಿದೆ. ಅವರ ರಕ್ತದ ಮಾದರಿಗಳನ್ನು ಪುಣೆಯ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಜನರು ಎಚ್ಚರಿಕೆ ವಹಿಸಬೇಕು, ಆದರೆ ಗಾಬರಿ ಬೇಡ. ಕಣ್ಣೂರು, ಮಲಪ್ಪುರಂ ಜಿಲ್ಲೆಗಳಲ್ಲಿನ ಜನರು ನಿಫಾ ಬಗ್ಗೆ ಜಾಗ್ರತೆ ವಹಿಸಬೇಕು. ಬಾಲಕನ ಮನೆಯ ಸುತ್ತಲಿನ 3 ಕಿ.ಮೀ. ಪ್ರದೇಶವನ್ನು ಪೊಲೀಸರು ಸೀಲ್‌ಡೌನ್‌ ಮಾಡಿದ್ದಾರೆ. 12 ದಿನಗಳ ಮುನ್ನ ಬಾಲಕನ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಹುಡುಕುತ್ತಿದ್ದೇವೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು