ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾಸರಗೋಡು ಜಿಲ್ಲೆಗೆ ಸಂಚರಿಸುವ ಸರಕಾರಿ ಹಾಗೂ ಖಾಸಗಿ ಬಸ್ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧರಿಸಿದೆ.
ಕೇರಳದಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಳೆದ ಕೆಲವು ದಿನಗಳಿಂದ ಹೆಚ್ಚಾಗುತ್ತಿದ್ದು, ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆತಂಕ ಸೃಷ್ಟಿಸಿದೆ. ಈ ಕಾರಣದಿಂದ ಬಸ್ ಸಂಚಾರವನ್ನು ವಾರಗಳ ಕಾಲ ನಿರ್ಬಂಧಿಸಲು ನಿರ್ಧರಿಸಲಾಗಿದೆ.
ಇದಲ್ಲದೆ ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳಲ್ಲಿ ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಇರಬೇಕು. ಮುಖ್ಯವಾಗಿ ಅಲ್ಲಿನ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ತಾವಿರುವ ವಿದ್ಯಾರ್ಥಿ ನಿಲಯಗಳಲ್ಲಿಯೇ ಒಂದು ವಾರ ಹೋಂ ಕ್ವಾರಂಟೈನ್ ನಲ್ಲಿಯೇ ಇರಬೇಕು. ಪ್ರತಿ ದಿನ ಅವರುಗಳ ಬಗ್ಗೆ ನಿಗಾ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಸಭೆ- ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10 ರವರೆಗೆ ನಡೆಸದಂತೆ ಸೂಚನೆ ನೀಡಲಾಗಿದೆ. ಮದುವೆ ಕಾರ್ಯಕ್ರಮಗಳಿಗೆ ಮತ್ತೆ ಕೇವಲ 50 ಜನರಿಗೆ ಮಾತ್ರ ಸೀಮಿತಗೊಳಿಸಲಾಗಿದೆ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದಲ್ಲಿ ಕಲ್ಯಾಣ ಮಂಟಪಗಳ ಮಾಲೀಕರ ಮೇಲೆ ಎಫ್ ಐಆರ್ ದಾಖಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?