ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೊಡಗು: ಅಧಿಕಾರ ದುರುಪಯೋಗ ಪಡಿಸಿಕೊಂಡ ಬಿಜೆಪಿ ನಗರಸಭಾ ಸದಸ್ಯನ ಸದಸ್ಯತ್ವ ರದ್ದುಗೊಳಿಸುವಂತೆ ಜಿಲ್ಲಾಧಿಕಾರಿಗೆ ಎಸ್.ಡಿ.ಪಿ. ಐ ಮನವಿ

Twitter
Facebook
LinkedIn
WhatsApp
ಕೊಡಗು: ಅಧಿಕಾರ ದುರುಪಯೋಗ ಪಡಿಸಿಕೊಂಡ ಬಿಜೆಪಿ ನಗರಸಭಾ ಸದಸ್ಯನ ಸದಸ್ಯತ್ವ ರದ್ದುಗೊಳಿಸುವಂತೆ ಜಿಲ್ಲಾಧಿಕಾರಿಗೆ ಎಸ್.ಡಿ.ಪಿ. ಐ ಮನವಿ

ಮಡಿಕೇರಿ: ನಿಯಮ ಬಾಹಿರವಾಗಿ ಮಡಿಕೇರಿ ನಗರಸಭೆಯ ಬಿಜೆಪಿಯ ಚುನಾಯಿತ ಸದಸ್ಯ ಕೆ.ಎಂ ಅಪ್ಪಣ್ಣ ನಗರಸಭೆಯ ಕೆಲಸಗಳನ್ನು ಅಧಿಕಾರ ದುರುಪಯೋಗ ಪಡಿಸಿಕೊಂಡು ಲಾಭದಾಯಕ ವ್ಯವಹಾರ ಮಾಡಿರುವ ಬಗ್ಗೆ ಪರಿಶೀಲಿಸಿ, ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಎಸ್.ಡಿ.ಪಿ.ಐ ಪಕ್ಷದ ನಗರಸಭಾ ಸದಸ್ಯರು ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಮಡಿಕೇರಿ ನಗರಸಭೆಯ ವಾರ್ಡ್ 19 ರ ಚುನಾಯಿತ ಸದಸ್ಯ ಕೆ.ಎಂ ಅಪ್ಪಣ್ಣ ತಮ್ಮ ಮಾಲಿಕತ್ವದಲ್ಲಿರುವ ಪ್ಲಾಂಟರ್ಸ್ ವಲ್ಡ್ ಎಂಬ ವಾಣಿಜ್ಯ ವ್ಯವಹಾರದ ಸಂಸ್ಥೆಯ ಮುಖಾಂತರ, ಮಡಿಕೇರಿ ನಗರಸಭೆಯ ನೈರ್ಮಲ್ಯ ವಿಭಾಗದ ಕಾಡು ಕಡಿಯುವ ಯಂತ್ರದ ದುರಸ್ತಿ ಕೆಲಸ ಕಾರ್ಯಗಳನ್ನು ತನ್ನ ಅಧಿಕಾರವನ್ನು ದುರುಪಯೋಗಪಡಿಸಿ ಮಡಿಕೇರಿ ನಗರಸಭೆಯಲ್ಲಿ ಲಾಭದಾಯಕ ಕೆಲಸವನ್ನು ಮಾಡಿರುವುದಾಗಿ ಎಸ್.ಡಿ.ಪಿ.ಐ ಸದಸ್ಯರು ದಾಖಲೆ ಮೂಲಕ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಮಡಿಕೇರಿ ನಗರಸಭೆಯಿಂದ ದಿನಾಂಕ 29.10.2021 ರಿಂದ ಇಂದಿನ ವರೆಗೆ ಕಾಡುಕಡಿಯುವ ಯಂತ್ರಗಳನ್ನು ದುರಸ್ತಿ ಮಾಡುವ ಕೆಲಸವನ್ನು ಮಾಡಿ ಹಣವನ್ನು ಪಡೆದು ಕೊಂಡಿರುವುದು ದೃಢವಾಗಿದೆ. ಇವರು ನಗರಸಭೆಗೆ ಸಲ್ಲಿಸಿದ ಜಿ.ಎಸ್.ಟಿ ಟ್ಯಾಕ್ಸ್ ಬಿಲ್ ನಲ್ಲಿ ನಮೂದಿಸಿರುವ ಜಿ.ಎಸ್.ಟಿ ಸಂಖ್ಯೆ ಹಾಗೂ ಪಾನ್ ಸಂಖ್ಯೆ ಇವರ ಹೆಸರಿನಲ್ಲಿ ಸಂಬಂಧಪಟ್ಟ ಇಲಾಖೆಗಳಲ್ಲಿ ನೊಂದಾವಣೆಗೊಂಡಿದೆ. ಇವರದ್ದೇ ಪಾನ್ ಸಂಖ್ಯೆಯಲ್ಲಿ ಟಿ.ಡಿ.ಎಸ್ ಕೂಡ ಬಿಲ್ಲಿನಿಂದ ವಸೂಲಿಮಾಡಿ ಆದಾಯ ತೆರಿಗೆ ಇಲಾಖೆಗೆ ಪಾವತಿಸಲಾಗಿದೆ ಎಂದು ಅಮೀನ್ ಮೊಹಿಸಿನ್ ಆರೋಪಿಸಿದರು.

ಈ ವಿಚಾರವನ್ನು ದಿನಾಂಕ 8.8.2022 ರಂದು ನಡೆದ ನಗರಸಭೆಯ ಮಾಸಿಕ ಸಭೆಯಲ್ಲಿ ಪ್ರಸ್ತಾಪಿಸಿದಾಗ ಆಡಳಿತಪಕ್ಷದ ಸದಸ್ಯರು ವಿನಾಕಾರಣ ಗೊಂದಲವನ್ನು ಉಂಟುಮಾಡಿ ವಿಷಯವನ್ನು ಮರೆಮಾಡುವ ಉದ್ದೇಶದಿಂದ ತನಗೆ ಮಾತಾಡಲು ಅವಕಾಶ ನೀಡದೆ ಗದ್ದಲ ಮಾಡಿರುತ್ತಾರೆ ಎಂದು ಎಸ್.ಡಿ.ಪಿ.ಐ ಸದಸ್ಯ ಅಮೀನ್ ಮೊಹಿಸಿನ್ ಆರೋಪಿಸಿದರು.
ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಪ್ರಕರಣ 16(1)(k) ಯಲ್ಲಿ ನಗರಸಭೆಯ ಯಾವುದೇ ಚುನಾಯಿತ ಸದಸ್ಯ ನಗರಸಭೆಯಲ್ಲಿ ಲಾಭದಾಯಕ ಕೆಲಸಕಾರ್ಯಗಳನ್ನು ಮಾಡಿದರೆ ಅಂತಹ ಸದಸ್ಯರು ತನ್ನ ಸದಸ್ಯತ್ವ ಸ್ಥಾನಕ್ಕೆ ಅನರ್ಹರಾಗಿರುತ್ತಾರೆ. ಆದ್ದರಿಂದ ಈ ವಿಚಾರವಾಗಿ ಮಡಿಕೇರಿ ನಗರಸಭೆಯ ದಾಖಲೆಗಳನ್ನು ಪರಿಶೀಲಿಸಿ ನಿಯಮ ಬಾಹಿರವಾಗಿ ಮಡಿಕೇರಿ ನಗರಸಭೆಯ ಲಾಭದಾಯಕ ಕೆಲಸಕಾರ್ಯಗಳನ್ನು ಮಾಡಿರುವ ಕಾರಣದಿಂದ ಕೆ.ಎಂ ಅಪ್ಪಣ್ಣ ಅವರ ಸದಸ್ಯತ್ವವನ್ನು ಕಾನೂನು ಪ್ರಕಾರ ರದ್ದುಗೊಳಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಈ ಸಂದರ್ಭ ಎಸ್.ಡಿ.ಪಿ.ಐ ನಗರಸಭಾ ಸದಸ್ಯರಾದ ಮನ್ಸೂರ್, ಮೇರಿ ವೇಗಸ್, ನೀಮಾ ಅರ್ಷಾದ್ ಮತ್ತು ಬಶೀರ್ ಅಹಮದ್ ಇದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist