ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ನವದೆಹಲಿ (ಆ.24): ಬಿಜೆಪಿ ನಾಯಕಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಸೋನಾಲಿ ಪೋಗಟ್ ಸಾವಿನ ಪ್ರಕರಣ ಇನ್ನಷ್ಟು ತಿರುವು ಪಡೆದುಕೊಂಡಿದೆ. ಸಾವಿಗೂ ಮುನ್ನ ಆಕೆಯನ್ನು ರೇಪ್ ಹಾಗೂ ಬ್ಲ್ಯಾಕ್ಮೇಲ್ ಮಾಡಲಾಗಿದೆ ಎಂದು ಅವರ ಕಿರಿಯ ಸಹೋದರ ರಿಂಕು ಢಾಕಾ ಆರೋಪ ಮಾಡಿದ್ದಾರೆ. ಫತೇಹಾಬಾದ್ನ ಭೂತಂಕಲನ್ ಗ್ರಾಮದ ನಿವಾಸಿಯಾಗಿರುವ ರಿಂಕು, ಸೋನಾಲಿ ಪೋಗಟ್ ಅವರ ಆಪ್ತ ಸಹಾಯಕ ಸುಧೀರ್ ಸಂಗ್ವಾನ್ ಹಾಗೂ ಆತನ ಸ್ನೇಹಿತ ಸುಖ್ವಿಂದರ್, ಸೋನಾಲಿ ಅವರು ಸೇವನೆ ಮಾಡಿದ ಆಹಾರದಲ್ಲಿ ಅಮಲು ಪದಾರ್ಥ ಬೆರೆಸಿ ನೀಡಿದ್ದಾರೆ. ಬಳಿಕ ಆಕೆಯನ್ನು ರೇಪ್ ಮಾಡಿದ್ದಲ್ಲದೆ, ಅದನ್ನು ವಿಡಿಯೋ ಮಾಡಿ, ಬ್ಲ್ಯಾಕ್ಮೇಲ್ ಕೂಡ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇದರೊಂದಿಗೆ ರಾಜಕೀಯ ಷಡ್ಯಂತ್ರ ರೂಪಿಸುವ ಭರದಲ್ಲಿ ಸೋನಾಲಿಯ ಆಸ್ತಿ ಕಬಳಿಸಿ ಹತ್ಯೆ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ. ಈ ಬಗ್ಗೆ ರಿಂಕು ಗೋವಾ ಪೊಲೀಸರಿಗೆ ಲಿಖಿತ ದೂರು ನೀಡಿದ್ದು, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ರಿಂಕು ಢಾಕಾ ಅವರು ತಮ್ಮ ಸಹೋದರಿ ಸೋನಾಲಿ ಫೋಗಟ್, ಹಿಸಾರ್ನಲ್ಲಿ ಮದುವೆಯಾಗಿದ್ದರು. ಆದರೆ, ಕೆಲವು ವರ್ಷಗಳ ಹಿಂದೆ ಸೋದರ ಮಾವ ಸಂಜಯ್ ಪೋಗಟ್ ನಿಧನರಾದರು. ಇದಾದ ನಂತರ ಸೋನಾಲಿ ಬಿಜೆಪಿ ಸೇರಿದ್ದಲ್ಲದೆ, ರಾಜಕೀಯದಲ್ಲಿ ತಮ್ಮ ವೃತ್ತಿಜೀವನವನ್ನು ಕಂಡುಕೊಂಡಿದ್ದರು. 2019 ರ ಚುನಾವಣೆಯ ಸಮಯದಲ್ಲಿ, ರೋಹ್ಟಕ್ ನಿವಾಸಿ ಸುಧೀರ್ ಸಾಂಗ್ವಾನ್ ಮತ್ತು ಭಿವಾನಿ ನಿವಾಸಿ ಸುಖ್ವಿಂದರ್, ಸೋನಾಲಿ ಅವರ ಬಳಿ ಕೆಲಸಗಾರರಾಗಿ ಸೇರಿಕೊಂಡಿದ್ದರು.
ಸುಧೀರ್ ಹಾಗೂ ಸುಖ್ವಿಂದರ್ ಇಬ್ಬರೂ ಕೂಡ ಸೋನಾಲಿಯ ವಿಶ್ವಾಸವನ್ನು ಗಳಿಸಿಕೊಂಡಿದ್ದರು. ಇದರಲ್ಲಿ ಸುಧೀರ್, ಸೋನಾಲಿ ಅವರ ಪಿಎ ಆಗಿ ಕೆಲಸ ಮಾಡುತ್ತಿದ್ದರು. ರಿಂಕು ಅವರು ನೀಡಿದ ದೂರಿನ ಅಧಾರದಲ್ಲಿ ಹೇಳುವುದಾದರೆ, 2021ರಲ್ಲಿ ಕೂಡ ಸೋನಾಲಿ ಅವರ ಮನೆಯಲ್ಲಿ ಕಳ್ಳತನವಾಗಿತ್ತು. ಸುಧೀರ್ ಅವರ ಮುಂದಾಳತ್ವದಲ್ಲಿಯೇ ಈ ಕಳ್ಳತನ ನಡೆದಿತ್ತು. ಆದರೆ, ಅದಾದ ಬಳಿಕ, ಮನೆ ಕೆಲಸದವರು ಹಾಗೂ ಇತರ ಸಿಬ್ಬಂದಿಯನ್ನ ತೆಗೆದುಹಾಕಲಾಗಿತ್ತು. ಅಂದಿನಿಂದ ಸೋನಾಲಿ ಅವರ ಆಹಾರದ ಬಗ್ಗೆ ಸುಧೀರ್ ಗಮನ ನೀಡುತ್ತಿದ್ದ. ಕೆಲವೊಮ್ಮೆ ಸೋನಾಲಿ ಅವರೇ, ಸುಧೀರ್ ಅವರು ನನಗೆ ಖೀರ್ ತಿನಿಸಿದ ಬಳಿಕ ನನ್ನ ಕೈ ಕಾಲುಗಳು ಮರಗಟ್ಟಿ ಹೋದಂತಾಗುತ್ತಿದೆ ಎಂದು ಅವರು ಹಿಂದೊಮ್ಮೆ ಹೇಳಿದ್ದರು ಎಂದು ದೂರಿದ್ದಾರೆ.
ಸುಧೀರ್ ಎಲ್ಲಾ ವಹಿವಾಟು ಮತ್ತು ಕಾಗದ ಪತ್ರಗಳ ಕೆಲಸ ಮಾಡುತ್ತಿದ್ದ ಎಂದು ರಿಂಕು ಹೇಳಿದ್ದಾರೆ. ಆಗಸ್ಟ್ 22 ರಂದು, ಸೋನಾಲಿ ತನ್ನ ಕಿರಿಯ ಅಳಿಯ ಅಮನ್ಗೆ ಕರೆ ಮಾಡಿ, ಸುಧೀರ್ ತನಗೆ ಆಹಾರದಲ್ಲಿ ಏನೋ ಹಾಕಿದ್ದಾನೆ. ಇದರಿಂದ ನಾನು ವಿಚಲಿತಳಾಗಿದ್ದೇನೆ ಹೇಳಿದ್ದಳು. ಮೂರು ವರ್ಷಗಳ ಹಿಂದೆ ಹಿಸಾರ್ನಲ್ಲಿನ ಮನೆಯಲ್ಲಿ ಅಮಲು ಪದಾರ್ಥ ಬೆರೆಸಿದ ಆಹಾರವನ್ನು ಸೋನಾಲಿಗೆ ನೀಡಿದ್ದ. ಆಕೆಗೆ ಪ್ರಜ್ಞೆ ತಪ್ಪಿದಾಗ ಅವಳ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಕೂಡ ಮಾಡಿದ್ದ. ಈ ವಿಡಿಯೋವನ್ನು ತೋರಿಸಿ ಆಕೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆತ, ಆ ಬಳಿಕವೂ ಹಲವು ಬಾರಿ ಅತ್ಯಾಚಾರ ಮಾಡಿದ್ದ ಎಂದಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?