ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕ್ಯಾನ್ಸರ್​​ ಗೆದ್ದ ಖ್ಯಾತ ನಟಿಗೆ ಒಂದೇ ದಿನ ಹಲವು ಭಾರಿ ಹೃದಯಾಘಾತ: ಆರೋಗ್ಯ ಸ್ಥಿತಿ ಗಂಭೀರ

Twitter
Facebook
LinkedIn
WhatsApp
ಕ್ಯಾನ್ಸರ್​​ ಗೆದ್ದ ಖ್ಯಾತ ನಟಿಗೆ ಒಂದೇ ದಿನ ಹಲವು ಭಾರಿ ಹೃದಯಾಘಾತ: ಆರೋಗ್ಯ ಸ್ಥಿತಿ ಗಂಭೀರ

ಎಂಡ್ರೀಲಾ ಶರ್ಮಾ: ಇತ್ತೀಚೆಗೆ ಅನೇಕರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಚಿತ್ರರಂಗದ ಅನೇಕರು ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಬೆಂಗಾಲಿಯ ಧಾರಾವಾಹಿ ನಟಿ ಎಂಡ್ರೀಲಾ ಶರ್ಮಾ (Aindrila Sharma) ಅವರಿಗೆ ಮಂಗಳವಾರ ಒಂದೇ ದಿನ ಹಲವು ಭಾರಿ ಹೃದಯಾಘಾತವಾಗಿದೆ ಎಂದು ವರದಿ ಆಗಿದೆ. ಸದ್ಯ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರನ್ನು ವೆಂಟಿಲೇಟರ್​ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ ಎಂಡ್ರೀಲಾ ಶರ್ಮಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಕ್ಯಾನ್ಸರ್​​ ಗೆದ್ದ ಖ್ಯಾತ ನಟಿಗೆ ಒಂದೇ ದಿನ ಹಲವು ಭಾರಿ ಹೃದಯಾಘಾತ: ಆರೋಗ್ಯ ಸ್ಥಿತಿ ಗಂಭೀರ

ಎಂಡ್ರೀಲಾ ಶರ್ಮಾಗೆ ಮಿದುಳು ಸ್ಟ್ರೋಕ್ ಉಂಟಾಗಿದೆ. ನ. 1 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೆ ವೇಳೆ ಅವರ ಮೆದುಳಲ್ಲಿ ರಕ್ತಸ್ರಾವ ಕೂಡ ಉಂಟಾಗಿದೆ. ಹಾಗಾಗಿ ವೈದ್ಯರು ಕೆಲ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಸಿಟಿ ಸ್ಕ್ಯಾನ್​​ ವರದಿ ಪ್ರಕಾರ ನಟಿಯ ಮೆದುಳಿನ ಎದುರು ಭಾಗದಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡುಬಂದಿದೆ. ಈ ರಕ್ತ ಹೆಪ್ಪುಗಟ್ಟುವಿಕೆ ತಡೆಯಲು ವೈದ್ಯರು ಔಷಧಗಳನ್ನು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ. ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ.

ಎಂಡ್ರೀಲಾ ಶರ್ಮಾ ಪ್ರಿಯಕರ, ನಟ ಸಬ್ಯಸಾಚಿ ಚೌಧರಿ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ‘ಎಂಡ್ರೀಲಾ ಶರ್ಮಾಗಾಗಿ ದೇವರಲ್ಲಿ ಪಾರ್ಥಿಸಿ’ ಎಂದು ಫ್ಯಾನ್ಸ್​​ ಬಳಿ ವಿನಂತಿಸಿದ್ದಾರೆ. ‘ಈ ರೀತಿ ಬರೆಯಬೇಕಾಗಬಹುದು ಎಂದು ಊಹಿಸಿರಲಿಲ್ಲ. ಆದಾಗ್ಯೂ ಆ ದಿನ ಬಂದಿದೆ. ಪವಾಡಸದೃಶ್ಯವಾಗಿ ಎಂಡ್ರೀಲಾ ಬದುಕಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸಿ. ಅವಳು ವಿಲಕ್ಷಣ ಕಾಯಿಲೆಯ ವಿರುದ್ದ ಹೋರಾಡುತ್ತಿದ್ದಾಳೆ’ ಎಂದು ಅವರು ಬರೆದುಕೊಂಡಿದ್ದಾರೆ. ಬೆಂಗಾಲಿ ನಟ, ನಟಿಯರು ಹಾಗೂ ಅಭಿಮಾನಿಗಳು ಎಂಡ್ರೀಲಾ ಶರ್ಮಾ ಬದುಕಿ ಬರಲೆಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

ಎಂಡ್ರೀಲಾ ಶರ್ಮಾ ಅವರಿಗೆ ಈ ಮೊದಲು ಕ್ಯಾನ್ಸರ್ ಉಂಟಾಗಿತ್ತು. ಅದನ್ನು ಅವರು ಜಯಿಸಿ ಬಂದಿದ್ದರು. ಈಗ ಅವರಿಗೆ ಬ್ರೈನ್​​ ಸ್ಟ್ರೋಕ್ ಆಗಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಎಂಡ್ರೀಲಾ ಶರ್ಮಾ ‘ಜುಮುರ್’​ ಧಾರಾವಾಹಿ ಮೂಲಕ ಕಿರುತೆಗೆ ಎಂಟ್ರಿ ಕೊಟ್ಟರು. ‘ಜಿಬೊನ್ ಜೋತ್ಯಿ’, ‘ಜಿಯೋನ್​ ಕಥಿ’ ಎಂಬ ಧಾರಾವಾಹಿಗಳ ಮೂಲಕ ಮನೆಮಾತಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ