ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಎಂಡ್ರೀಲಾ ಶರ್ಮಾ: ಇತ್ತೀಚೆಗೆ ಅನೇಕರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಚಿತ್ರರಂಗದ ಅನೇಕರು ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಬೆಂಗಾಲಿಯ ಧಾರಾವಾಹಿ ನಟಿ ಎಂಡ್ರೀಲಾ ಶರ್ಮಾ (Aindrila Sharma) ಅವರಿಗೆ ಮಂಗಳವಾರ ಒಂದೇ ದಿನ ಹಲವು ಭಾರಿ ಹೃದಯಾಘಾತವಾಗಿದೆ ಎಂದು ವರದಿ ಆಗಿದೆ. ಸದ್ಯ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರನ್ನು ವೆಂಟಿಲೇಟರ್ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ ಎಂಡ್ರೀಲಾ ಶರ್ಮಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಎಂಡ್ರೀಲಾ ಶರ್ಮಾಗೆ ಮಿದುಳು ಸ್ಟ್ರೋಕ್ ಉಂಟಾಗಿದೆ. ನ. 1 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೆ ವೇಳೆ ಅವರ ಮೆದುಳಲ್ಲಿ ರಕ್ತಸ್ರಾವ ಕೂಡ ಉಂಟಾಗಿದೆ. ಹಾಗಾಗಿ ವೈದ್ಯರು ಕೆಲ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಸಿಟಿ ಸ್ಕ್ಯಾನ್ ವರದಿ ಪ್ರಕಾರ ನಟಿಯ ಮೆದುಳಿನ ಎದುರು ಭಾಗದಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡುಬಂದಿದೆ. ಈ ರಕ್ತ ಹೆಪ್ಪುಗಟ್ಟುವಿಕೆ ತಡೆಯಲು ವೈದ್ಯರು ಔಷಧಗಳನ್ನು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ. ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ.
ಎಂಡ್ರೀಲಾ ಶರ್ಮಾ ಪ್ರಿಯಕರ, ನಟ ಸಬ್ಯಸಾಚಿ ಚೌಧರಿ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ‘ಎಂಡ್ರೀಲಾ ಶರ್ಮಾಗಾಗಿ ದೇವರಲ್ಲಿ ಪಾರ್ಥಿಸಿ’ ಎಂದು ಫ್ಯಾನ್ಸ್ ಬಳಿ ವಿನಂತಿಸಿದ್ದಾರೆ. ‘ಈ ರೀತಿ ಬರೆಯಬೇಕಾಗಬಹುದು ಎಂದು ಊಹಿಸಿರಲಿಲ್ಲ. ಆದಾಗ್ಯೂ ಆ ದಿನ ಬಂದಿದೆ. ಪವಾಡಸದೃಶ್ಯವಾಗಿ ಎಂಡ್ರೀಲಾ ಬದುಕಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸಿ. ಅವಳು ವಿಲಕ್ಷಣ ಕಾಯಿಲೆಯ ವಿರುದ್ದ ಹೋರಾಡುತ್ತಿದ್ದಾಳೆ’ ಎಂದು ಅವರು ಬರೆದುಕೊಂಡಿದ್ದಾರೆ. ಬೆಂಗಾಲಿ ನಟ, ನಟಿಯರು ಹಾಗೂ ಅಭಿಮಾನಿಗಳು ಎಂಡ್ರೀಲಾ ಶರ್ಮಾ ಬದುಕಿ ಬರಲೆಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.
ಎಂಡ್ರೀಲಾ ಶರ್ಮಾ ಅವರಿಗೆ ಈ ಮೊದಲು ಕ್ಯಾನ್ಸರ್ ಉಂಟಾಗಿತ್ತು. ಅದನ್ನು ಅವರು ಜಯಿಸಿ ಬಂದಿದ್ದರು. ಈಗ ಅವರಿಗೆ ಬ್ರೈನ್ ಸ್ಟ್ರೋಕ್ ಆಗಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಎಂಡ್ರೀಲಾ ಶರ್ಮಾ ‘ಜುಮುರ್’ ಧಾರಾವಾಹಿ ಮೂಲಕ ಕಿರುತೆಗೆ ಎಂಟ್ರಿ ಕೊಟ್ಟರು. ‘ಜಿಬೊನ್ ಜೋತ್ಯಿ’, ‘ಜಿಯೋನ್ ಕಥಿ’ ಎಂಬ ಧಾರಾವಾಹಿಗಳ ಮೂಲಕ ಮನೆಮಾತಾಗಿದ್ದರು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?