ಮಂಗಳವಾರ, ಮೇ 14, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕ್ರಿಕೆಟಿಗನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಸಪ್ನಾ ಗಿಲ್

Twitter
Facebook
LinkedIn
WhatsApp
ಕ್ರಿಕೆಟಿಗನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಸಪ್ನಾ ಗಿಲ್

ಸಾಮಾಜಿಕ ಮಾಧ್ಯಮದ ಪ್ರಭಾವಿ ಸಪ್ನಾ ಗಿಲ್ ಅವರು ಕ್ರಿಕೆಟಿಗ ಪೃಥ್ವಿ ಶಾ ಮತ್ತು ಅವರ ಸ್ನೇಹಿತ ಆಶಿಶ್ ಸುರೇಂದ್ರ ಯಾದವ್ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿದ್ದಾರೆ.

ಕ್ರಿಕೆಟಿಗ ಪೃಥ್ವಿ ಶಾ ಮತ್ತವರ ಗೆಳೆಯ ಸುರೇಂದರ್‌ ಯಾದವ್‌ ವಿರುದ್ಧ ಭೋಜಪುರಿ ನಟಿ ಸಪ್ನಾ ಗಿಲ್‌ ನೀಡಿರುವ ಕ್ರಿಮಿನಲ್‌ ದೂರನ್ನು ಮುಂಬೈನ ಅಂಧೇರಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿದೆ.

ಲೈಂಗಿಕ ಕಿರುಕುಳ, ಹಲ್ಲೆ ಸೇರಿದಂತೆ ಹಲವು ಆರೋಪಗಳನ್ನು ಸಪ್ನಾ ಮಾಡಿದ್ದಾರೆ. ಹಾಗೆಯೇ ಕ್ರಿಕೆಟಿಗನ ವಿರುದ್ಧ ಎಫ್ಐಆರ್‌ ದಾಖಲಿಸಲು ಸಹಕರಿಸದ ಪೊಲೀಸ್‌ ಅಧಿಕಾರಿಗಳಾದ ಸತೀಶ್‌ ಕವಂಕರ್‌, ಭಾಗವತ್‌ ಗರಾಂಡೆ ವಿರುದ್ಧವೂ ಕ್ರಿಮಿನಲ್‌ ದೂರನ್ನು ದಾಖಲಿಸಲಾಗಿದೆ. ಏ.17ರಂದು ಇದರ ವಿಚಾರಣೆ ನಡೆಯಲಿದೆ. ಫೆ.15ರಂದು ಮುಂಬೈನ ದೇಶೀಯ ವಿಮಾನ ನಿಲ್ದಾಣದ ಸಮೀಪದ ಪಂಚತಾರಾ ಹೋಟೆಲೊಂದರಲ್ಲಿ ಕ್ರಿಕೆಟಿಗ ಪೃಥ್ವಿ ಶಾ ಮತ್ತವರ ಗೆಳೆಯ ಸುರೇಂದರ್‌ ಯಾದವ್‌ ಮೇಲೆ ಹಲ್ಲೆಯಾಗಿತ್ತು.

ಭೋಜಪುರಿ ನಟಿ ಸಪ್ನಾ ಗಿಲ್‌ ಮತ್ತವರ ಗೆಳೆಯರು ಸೆಲ್ಫಿ ಕೇಳಿ ಗಲಾಟೆಯೆಬ್ಬಿಸಿದರು. ಬೇಸ್‌ಬಾಲ್‌ ಬ್ಯಾಟ್‌ನಲ್ಲಿ ಹಲ್ಲೆ ಮಾಡಿದರು ಎಂದು ದೂರು ಸಲ್ಲಿಸಲಾಗಿತ್ತು. ಫೆ.16ರಂದು ಸಪ್ನಾ ಗಿಲ್‌ರನ್ನು ಬಂಧಿಸಲಾಗಿತ್ತು. ಆಮೇಲೆ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಅವರೇ ಪೃಥ್ವಿ ಶಾರನ್ನು ತಪ್ಪಿತಸ್ಥ ಎಂದು ಆರೋಪಿಸಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಪೃಥ್ವಿ ಶಾ ಪ್ರಸ್ತುತ ಐಪಿಎಲ್ 16 ನೇ ಸೀಸನ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿದ್ದಾರೆ. ಈ ವರ್ಷದ ಐಪಿಎಲ್ ಸೀಸನ್‌ನಲ್ಲಿ ಪೃಥ್ವಿ ಶಾ ಫಾರ್ಮ್ ಉತ್ತಮವಾಗಿಲ್ಲ. ಇದುವರೆಗೆ ಮೊದಲೆರಡು ಪಂದ್ಯಗಳಲ್ಲಿ ಆಡುವ ಅವಕಾಶ ಸಿಕ್ಕಿದ್ದರೂ ಒಂದು ಪಂದ್ಯದಲ್ಲೂ ವಿಶೇಷತೆ ತೋರಲು ಸಾಧ್ಯವಾಗಿಲ್ಲ. ಹೀಗಾಗಿ ಪೃಥ್ವಿ ಶಾಗೆ ಮೈದಾನದ ಒಳಗೆ ಹಾಗೂ ಹೊರಗೆ ಕೆಟ್ಟ ವಾತಾವರಣ ನಿರ್ಮಾಣವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ