ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಖಗೋಳದಲ್ಲಿ ಅಪರೂಪದ ವಿದ್ಯಮಾನ: ಒಂದೇ ರೇಖೆಯಲ್ಲಿ ಶುಕ್ರ, ಗುರು, ಚಂದ್ರ ದರ್ಶನ!

Twitter
Facebook
LinkedIn
WhatsApp
ms 230223 policecom 3

ನವದೆಹಲಿ: ಸೌರಮಂಡಲದಲ್ಲಿ ಪ್ರಕಾಶಮಾನವಾದ ಗ್ರಹಗಳು ಎಂದೇ ಕರೆಸಿಕೊಳ್ಳುವ ಶುಕ್ರ ಹಾಗೂ ಗುರುಗ್ರಹಗಳು, ಭೂಮಿಯ ಏಕೈಕ ಉಪಗ್ರಹವಾದ ಚಂದ್ರನ ಸಮೀಪದಲ್ಲಿ ಒಂದೇ ರೇಖೆಯಲ್ಲಿ ಕಾಣಿಸಿಕೊಂಡಿವೆ. ಖಗೋಳದಲ್ಲಿ ಇದೊಂದು ವಿಶೇಷ ವಿದ್ಯಮಾನ ಎನಿಸಿಕೊಂಡಿದೆ.

ಸುಮಾರು 29 ಡಿಗ್ರಿಗಳ ಅಂತರವನ್ನು ಹೊಂದಿರುವ ಗ್ರಹಗಳು ಇತ್ತೀಚಿಗೆ ನಿಧಾನವಾಗಿ ಹತ್ತಿರಕ್ಕೆ ಸರಿಯುತ್ತಿದ್ದು, ಗುರುವಾರ ಕೇವಲ 9 ಡಿಗ್ರಿಯಷ್ಟುಅಂತರಕ್ಕೆ ತಲುಪಿವೆ. ಫೆ.27ರಂದು ಇವುಗಳ ನಡುವಿನ ಅಂತರ 2.3 ಡಿಗ್ರಿಗೆ ತಲುಪಬಹುದು ಎಂದು ಖಗೋಳಶಾಸ್ತ್ರಜ್ಞರು ಅಂದಾಜಿಸಿದ್ದಾರೆ. 2 ಎರಡು ಗ್ರಹಗಳು ಸಮೀಪಕ್ಕೆ ಬಂದಿರುವ ಸಮಯದಲ್ಲೇ ಚಂದ್ರನೂ ಸಹ ಅವುಗಳ ಜೊತೆಗೆ ಕಾಣಿಸಿಕೊಂಡಿರುವುದು ಮತ್ತಷ್ಟು ವಿಶೇಷವಾಗಿದೆ. ಮಾ.1ರಂದು ಈ ಗ್ರಹಗಳು ಒಂದರ ಹಿಂದೊಂದು ಕಾಣಿಸಿಕೊಳ್ಳುವ ಮೂಲಕ ಮತ್ತೊಂದು ವಿಶೇಷ ವಿದ್ಯಮಾನ ಸೃಷ್ಟಿಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.

ಸೂರ್ಯನಿಗೆ ಬಣ್ಣದುಂಗುರ, ಶಿವಮೊಗ್ಗದ ಖಗೋಳ ವಿಸ್ಮಯಕ್ಕೆ ಕಾರಣವೇನು?

ಶಿವಮೊಗ್ಗದಲ್ಲಿ 2018ರ ಸೆಪ್ಟೆಂಬರ್‌ನಲ್ಲಿ ಸೂರ್ಯನೇ ಬಣ್ಣದ ಛತ್ರಿ ಹಿಡಿದು ನಿಂತಿದ್ದ ವಿಸ್ಮಯವೊಂದು ನಡೆದಿತ್ತು. ಸೂರ್ಯಂಗೆ ಟಾರ್ಚಾ! ಎಂದು ಮಾತಿನಲ್ಲಿ ಬಳಸುವುದುಂಟು. ಇಲ್ಲಿ ಸೂರ್ಯಂಗೆ  ಉಂಗುರಾನಾ?  ಎಂದು ಕೇಳುವಂತಾಗಿತ್ತು. ವೈಜ್ಞಾನಿಕವಾಗಿ ಇದನ್ನು  ಸೋಲಾರ್ ಹ್ಯಾಲೋ (Solar Halo, To be precise, 22° Halo) ಎಂದು ಕರೆಯಲಾಗುತ್ತದೆ. ಸೂರ್ಯ ಕಿರಣಗಳು ಭೂಮಿಗೆ ಮೋಡಗಳನ್ನು ಹಾದು ಬರುವ ಮುನ್ನ ಈ ರೀತಿಯ ಏಳು ಬಣ್ಣದ ವೃತ್ತಾಕಾರದ ಉಂಗುರ ನಿರ್ಮಾಣವಾಗಬಲ್ಲದು.

ಭೂಮಿಯಿಂದ 20 ಸಾವಿರ ಅಡಿ ಎತ್ತರದ ವಾತಾವರಣದಲ್ಲಿ (ಟ್ರೊಫೋಸ್ಫಿಯರ್) ಮೋಡದಲ್ಲಿನ ನೀರಿನ ಹನಿಗಳು ಸಾಂದ್ರಗೊಂಡು ಶೈತ್ತೀಕರಣವಾಗಿ ಮಂಜಿನ ಹರಳುಗಳಾಗಿರುತ್ತವೆ. ಈ ಗೋಳಾಕಾರದ ಮಂಜಿನ ಹರಳಿನ ಮೂಲಕ ಸೂರ್ಯನ ಬಿಳಿ ಬೆಳಕು ಹಲವು ಸಾರಿ ಪ್ರತಿಫಲಿಸಿ ವಕ್ರೀಭವನ ಮತ್ತು ಚದುರುವಿಕೆ ಉಂಟಾಗುತ್ತದೆ. ಇದರ ಪರಿಣಾಮ ಸೂರ್ಯನ ಸುತ್ತ22 ಡಿಗ್ರಿ ವೃತ್ತಾಕಾರದಲ್ಲಿ ಈ ಬಗೆಯ ಕಾಮನ ಬಿಲ್ಲುಗಳು ಉಂಟಾಗುತ್ತವೆ ಎಂದು ಖಗೋಳ ವಿಜ್ಞಾನಿ ಹರೋನಹಳ್ಳಿ ಸ್ವಾಮಿ ಹೇಳುತ್ತಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist