ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖಗೋಳದಲ್ಲಿ ಅಪರೂಪದ ವಿದ್ಯಮಾನ: ಒಂದೇ ರೇಖೆಯಲ್ಲಿ ಶುಕ್ರ, ಗುರು, ಚಂದ್ರ ದರ್ಶನ!

Twitter
Facebook
LinkedIn
WhatsApp
ms 230223 policecom 3

ನವದೆಹಲಿ: ಸೌರಮಂಡಲದಲ್ಲಿ ಪ್ರಕಾಶಮಾನವಾದ ಗ್ರಹಗಳು ಎಂದೇ ಕರೆಸಿಕೊಳ್ಳುವ ಶುಕ್ರ ಹಾಗೂ ಗುರುಗ್ರಹಗಳು, ಭೂಮಿಯ ಏಕೈಕ ಉಪಗ್ರಹವಾದ ಚಂದ್ರನ ಸಮೀಪದಲ್ಲಿ ಒಂದೇ ರೇಖೆಯಲ್ಲಿ ಕಾಣಿಸಿಕೊಂಡಿವೆ. ಖಗೋಳದಲ್ಲಿ ಇದೊಂದು ವಿಶೇಷ ವಿದ್ಯಮಾನ ಎನಿಸಿಕೊಂಡಿದೆ.

ಸುಮಾರು 29 ಡಿಗ್ರಿಗಳ ಅಂತರವನ್ನು ಹೊಂದಿರುವ ಗ್ರಹಗಳು ಇತ್ತೀಚಿಗೆ ನಿಧಾನವಾಗಿ ಹತ್ತಿರಕ್ಕೆ ಸರಿಯುತ್ತಿದ್ದು, ಗುರುವಾರ ಕೇವಲ 9 ಡಿಗ್ರಿಯಷ್ಟುಅಂತರಕ್ಕೆ ತಲುಪಿವೆ. ಫೆ.27ರಂದು ಇವುಗಳ ನಡುವಿನ ಅಂತರ 2.3 ಡಿಗ್ರಿಗೆ ತಲುಪಬಹುದು ಎಂದು ಖಗೋಳಶಾಸ್ತ್ರಜ್ಞರು ಅಂದಾಜಿಸಿದ್ದಾರೆ. 2 ಎರಡು ಗ್ರಹಗಳು ಸಮೀಪಕ್ಕೆ ಬಂದಿರುವ ಸಮಯದಲ್ಲೇ ಚಂದ್ರನೂ ಸಹ ಅವುಗಳ ಜೊತೆಗೆ ಕಾಣಿಸಿಕೊಂಡಿರುವುದು ಮತ್ತಷ್ಟು ವಿಶೇಷವಾಗಿದೆ. ಮಾ.1ರಂದು ಈ ಗ್ರಹಗಳು ಒಂದರ ಹಿಂದೊಂದು ಕಾಣಿಸಿಕೊಳ್ಳುವ ಮೂಲಕ ಮತ್ತೊಂದು ವಿಶೇಷ ವಿದ್ಯಮಾನ ಸೃಷ್ಟಿಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ.

ಸೂರ್ಯನಿಗೆ ಬಣ್ಣದುಂಗುರ, ಶಿವಮೊಗ್ಗದ ಖಗೋಳ ವಿಸ್ಮಯಕ್ಕೆ ಕಾರಣವೇನು?

ಶಿವಮೊಗ್ಗದಲ್ಲಿ 2018ರ ಸೆಪ್ಟೆಂಬರ್‌ನಲ್ಲಿ ಸೂರ್ಯನೇ ಬಣ್ಣದ ಛತ್ರಿ ಹಿಡಿದು ನಿಂತಿದ್ದ ವಿಸ್ಮಯವೊಂದು ನಡೆದಿತ್ತು. ಸೂರ್ಯಂಗೆ ಟಾರ್ಚಾ! ಎಂದು ಮಾತಿನಲ್ಲಿ ಬಳಸುವುದುಂಟು. ಇಲ್ಲಿ ಸೂರ್ಯಂಗೆ  ಉಂಗುರಾನಾ?  ಎಂದು ಕೇಳುವಂತಾಗಿತ್ತು. ವೈಜ್ಞಾನಿಕವಾಗಿ ಇದನ್ನು  ಸೋಲಾರ್ ಹ್ಯಾಲೋ (Solar Halo, To be precise, 22° Halo) ಎಂದು ಕರೆಯಲಾಗುತ್ತದೆ. ಸೂರ್ಯ ಕಿರಣಗಳು ಭೂಮಿಗೆ ಮೋಡಗಳನ್ನು ಹಾದು ಬರುವ ಮುನ್ನ ಈ ರೀತಿಯ ಏಳು ಬಣ್ಣದ ವೃತ್ತಾಕಾರದ ಉಂಗುರ ನಿರ್ಮಾಣವಾಗಬಲ್ಲದು.

ಭೂಮಿಯಿಂದ 20 ಸಾವಿರ ಅಡಿ ಎತ್ತರದ ವಾತಾವರಣದಲ್ಲಿ (ಟ್ರೊಫೋಸ್ಫಿಯರ್) ಮೋಡದಲ್ಲಿನ ನೀರಿನ ಹನಿಗಳು ಸಾಂದ್ರಗೊಂಡು ಶೈತ್ತೀಕರಣವಾಗಿ ಮಂಜಿನ ಹರಳುಗಳಾಗಿರುತ್ತವೆ. ಈ ಗೋಳಾಕಾರದ ಮಂಜಿನ ಹರಳಿನ ಮೂಲಕ ಸೂರ್ಯನ ಬಿಳಿ ಬೆಳಕು ಹಲವು ಸಾರಿ ಪ್ರತಿಫಲಿಸಿ ವಕ್ರೀಭವನ ಮತ್ತು ಚದುರುವಿಕೆ ಉಂಟಾಗುತ್ತದೆ. ಇದರ ಪರಿಣಾಮ ಸೂರ್ಯನ ಸುತ್ತ22 ಡಿಗ್ರಿ ವೃತ್ತಾಕಾರದಲ್ಲಿ ಈ ಬಗೆಯ ಕಾಮನ ಬಿಲ್ಲುಗಳು ಉಂಟಾಗುತ್ತವೆ ಎಂದು ಖಗೋಳ ವಿಜ್ಞಾನಿ ಹರೋನಹಳ್ಳಿ ಸ್ವಾಮಿ ಹೇಳುತ್ತಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ