ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖಲಿಸ್ತಾನಿ ಉಗ್ರ ಅಮೃತ್‌ಪಾಲ್‌ ಸಿಂಗ್ ನೇಪಾಳಕ್ಕೆ ಎಸ್ಕೇಪ್‌: ಹೈ ಅಲರ್ಟ್‌ ಘೋಷಣೆ

Twitter
Facebook
LinkedIn
WhatsApp
WhatsApp Image 2023 03 28 at 8.54.08 AM

ಕಾಠ್ಮಂಡು (ಮಾರ್ಚ್‌ 28, 2023): ಪಂಜಾಬ್‌ ಪೊಲೀಸರ ನಿಗಾದಿಂದ ತಪ್ಪಿಸಿಕೊಳ್ಳಲು ಯಶಸ್ವಿಯಾಗಿರುವ ಖಲಿಸ್ತಾನಿ ಪ್ರತ್ಯೇಕ ದೇಶದ ಪರ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಈಗಾಗಲೇ ಭಾರತದಿಂದ ಪರಾರಿಯಾಗಿ ನೇಪಾಳದಲ್ಲಿ ಅಡಗಿದ್ದಾನೆ ಎಂಬ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಯಾವುದೇ ಕಾರಣಕ್ಕೂ ದೇಶ ಬಿಡಲು ಅವಕಾಶ ನೀಡದಂತೆ ನೇಪಾಳ ಸರ್ಕಾರಕ್ಕೆ ಭಾರತ ಮನವಿ ಮಾಡಿದೆ.

‘ಮಾರ್ಚ್‌ 18ರಂದು ಪೊಲೀಸ್‌ ದಾಳಿ ವೇಳೆ ತಪ್ಪಿಸಿಕೊಂಡ ಅಮೃತ್‌ಪಾಲ್‌ ಸಿಂಗ್ (Amritpal Singh) ಸದ್ಯ ನೇಪಾಳದಲ್ಲಿ (Nepal) ತಲೆಮರೆಸಿಕೊಂಡಿರುವ ಶಂಕೆ ಇದೆ. ಈತನ ಬಳಿ ಭಾರತ (India) ಮತ್ತು ಇತರೆ ನಕಲಿ ಪಾಸ್‌ಪೋರ್ಟ್‌ ಇದೆ. ಇದನ್ನು ಬಳಸಿಕೊಂಡು ಆತ ಯಾವುದೇ ದೇಶಕ್ಕೆ ಪರಾರಿಯಾಗಲು ಯತ್ನಿಸುವ ಸಾಧ್ಯತೆ ಇದೆ. ಹೀಗಾಗಿ ಆತ ಎಲ್ಲೇ ಪತ್ತೆಯಾದರೂ ಆತನನ್ನು ಬಂಧಿಸಬೇಕು. ಮತ್ತೊಂದು ವಿದೇಶಕ್ಕೆ ತೆರಳಲು ಅವಕಾಶ ನೀಡಬಾರದು’ ಎಂದು ನೇಪಾಳದಲ್ಲಿನ ಭಾರತೀಯ ರಾಯಭಾರ ಕಚೇರಿ (Indian Embassy Office) ನೇಪಾಳ ಸರ್ಕಾರಕ್ಕೆ (Nepal Government) ಮನವಿ ಮಾಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಕಾಠ್ಮಂಡು ಪೋಸ್ಟ್‌ ಪತ್ರಿಕೆ ವರದಿ ಮಾಡಿದೆ.

ಈ ಮಾಹಿತಿ ಮತ್ತು ಅಮೃತ್‌ಪಾಲ್‌ ಸಿಂಗ್‌ನ ವೈಯಕ್ತಿಕ ದಾಖಲೆಗಳನ್ನು ಸಂಬಂಧಿತ ಸಂಸ್ಥೆಗಳು, ಹೋಟೆಲ್‌ಗಳು, ವಿಮಾನಯಾನ ಸಂಸ್ಥೆಗಳಿಗೆ ರವಾನಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ