ಮಂಗಳವಾರ, ಏಪ್ರಿಲ್ 30, 2024
ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಖ್ಯಾತ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ..!

Twitter
Facebook
LinkedIn
WhatsApp
ಖ್ಯಾತ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ..!

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಕಬಡ್ಡಿ ಆಟಗಾರ ಉದಯ ಚೌಟ ಅನಾರೋಗ್ಯದಿಂದಾಗಿ ಶನಿವಾರ ನಿಧನರಾಗಿದ್ದಾರೆ.

ದೇಶದ ಪ್ರಮುಖ ಕಬಡ್ಡಿ ಆಟಗಾರರಲ್ಲಿ ಒಬ್ಬರಾದ ಉದಯ ಚೌಟರವರು ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆ ನಿವಾಸಿ. 2007ರ ದ್ವಿತೀಯ ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಗೆಲುವು ಸಾಧಿಸಿರುವ ತಂಡದಲ್ಲಿ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಪಡೆದಿದ್ದರು.
ಪ್ರಸಕ್ತ ಬ್ಯಾಂಕ್ ಆಫ್ ಬರೋಡದ ಸುರತ್ಕಲ್ ಕಚೇರಿಯಲ್ಲಿ ಉಪ ಪ್ರಬಂಧಕರಾಗಿರುವ ಉದಯ ಚೌಟ, ಕ್ರೀಡಾ ಕೋಟದಲ್ಲಿ 8 ತಿಂಗಳ ಕಾಲ ಏರ್ ಇಂಡಿಯಾ ಮತ್ತು 10 ತಿಂಗಳ ಕಾಲ ಕೆಪಿಟಿಸಿಎಲ್ ಉದ್ಯೋಗದಲ್ಲಿದ್ದರು.
ಮಾಣಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಪುತ್ತೂರು ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ, ಪುತ್ತೂರು ಸಂತ ಫಿಲೋಮಿನ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿರುವ ಇವರು ವಿದ್ಯಾರ್ಥಿ ದೆಸೆಯಿಂದಲೂ ಕ್ರೀಡಾಕ್ಷೇತ್ರದಲ್ಲಿ ಅಪಾರ ಆಸಕ್ತಿಯನ್ನು ಹೊಂದಿದ್ದರು. ಪಿಯುಸಿಯಲ್ಲಿ ವಾಲಿಬಾಲ್, ಕಬಡ್ಡಿಯಲ್ಲಿ ಆಸಕ್ತಿ ಹೊಂದಿದ್ದರು.
ವಿದ್ಯಾಭ್ಯಾಸ ಮಾಡುತ್ತಿದ್ದಾಗಲೇ ನಾಲ್ಕು ವರ್ಷ ಅಂತರ್ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಜಯಗಳಿಸಿದ್ದ ಉದಯ್ ಚೌಟರವರು ಅಂತರ್ ವಿಶ್ವವಿದ್ಯಾನಿಲಯಕ್ಕೆ ಸೌತ್‌ರೆನ್‌ಗೆ ಮಂಗಳೂರು ವಿವಿಯನ್ನು ಮೂರು ವರ್ಷ ಪ್ರತಿನಿಧಿಸಿದ್ದರು. 1993ರಲ್ಲಿ ಜೂನಿಯರ್ ನ್ಯಾಷನಲ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಇವರು 2000ದಿಂದ 2008ರವರೆಗೆ ರಾಷ್ಟ್ರೀಯ ತಂಡದಲ್ಲಿದ್ದರು. ಬ್ಯಾಂಕ್ ಒಲಿಂಪಿಯಾಡ್ ತಂಡದ ನಾಯಕನಾಗಿ, ಬ್ಯಾಂಕ್ ಸ್ಪೋರ್ಟ್ಸ್ ಬೋರ್ಡ್ ತಂಡದ ನಾಯಕನಾಗಿ ಕಾರ್ಯನಿರ್ವಹಿಸಿದ ಇವರು ಇದರಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ದ.ಕ ಜಿಲ್ಲೆಯ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಶನ್‌ನ ಸಂಘಟನಾ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಏಕಲವ್ಯ ಪ್ರಶಸ್ತಿ ಪಡೆದ ಜಿಲ್ಲೆಯ ಪ್ರಥಮ ಕಬಡ್ಡಿ ಆಟಗಾರ:
2004ರಲ್ಲಿ ಭಾರತ-ಬಾಂಗ್ಲಾ ಟೆಸ್ಟ್ ಕಬಡ್ಡಿ ಪಂದ್ಯಾಟದಲ್ಲಿ 5 ಪಂದ್ಯಗಳನ್ನು ಜಯಿಸಿ ಚಿನ್ನದ ಪದಕವನ್ನು ಪಡೆದಿದ್ದರು. ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆಗೆ ಕರ್ನಾಟಕ ಸರಕಾರ ನೀಡುವ ಏಕಲವ್ಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ಪಡೆದ ಹೆಗ್ಗಳಿಕೆ ಇವರದ್ದು. 20 ವರ್ಷಗಳ ಕಾಲ ಕಬಡ್ಡಿ ಜೀವನದಲ್ಲಿ ಅಖಿಲ ಭಾರತ ಮಟ್ಟದಲ್ಲಿ 100ಕ್ಕೂ ಅಧಿಕ, ರಾಜ್ಯಮಟ್ಟದಲ್ಲಿ 300 ಕ್ಕೂ ಅಧಿಕ ಪಂದ್ಯಾಟಗಳನ್ನು ಆಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ