ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಂಗೊಳ್ಳಿ: ಸುಣ್ಣವೆಂದು ಇಲಿ ಪಾಷಾಣ ಬೆರೆಸಿ ವೀಳ್ಯದೆಲೆ ಸೇವಿಸಿದ್ದ ವೃದ್ದೆ ಮೃತ್ಯು

Twitter
Facebook
LinkedIn
WhatsApp
ಗಂಗೊಳ್ಳಿ: ಸುಣ್ಣವೆಂದು ಇಲಿ ಪಾಷಾಣ ಬೆರೆಸಿ ವೀಳ್ಯದೆಲೆ ಸೇವಿಸಿದ್ದ ವೃದ್ದೆ ಮೃತ್ಯು

ಗಂಗೊಳ್ಳಿ, ಫೆ 14 : ವೀಳ್ಯದೆಲೆಗೆ ಸುಣ್ಣವೆಂದು ತಿಳಿದು ಇಲಿ ಪಾಷಾಣ ಬೆರೆಸಿ ತಿಂದು ಅಸ್ವಸ್ಥಗೊಂಡಿದ್ದ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ಸಾಧು ಪೂಜಾರ್ತಿ(71) ಎಂದು ಗುರುತಿಸಲಾಗಿದೆ.

ಇವರು ಫೆ.6ರಂದು ಬೆಳಗ್ಗೆ ವೀಳ್ಯದೆಲೆಗೆ ಸುಣ್ಣವೆಂದು ತಿಳಿದು ಇಲಿ ಪಾಷಾಣವನ್ನು ಸೇರಿಸಿ ತಿಂದಿದ್ದು, ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಗೆ ದಾಖಲಿಸಿದ್ದರೂ ಫೆ.12ರಂದು ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರ ಮಗಳು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ