ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗಂಡ ಅಮೆರಿಕದಲ್ಲಿ ಸಾವನ್ನಪ್ಪಿದ ನೋವನ್ನು ತಾಳಲಾರದೆ ಹೆಂಡತಿ ಆತ್ಮಹತ್ಯೆ!

Twitter
Facebook
LinkedIn
WhatsApp
Ravi Bopara 3 8

ಹೈದರಾಬಾದ್​: ಗಂಡನ ಸಾವಿನ ನೋವಿನಿಂದ ಹೊರಬರಲಾಗದೇ ಮಹಿಳೆಯೊಬ್ಬಳು ಸಾವಿನ ಹಾದಿ ಹಿಡಿದಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್​ನ ಅಂಬರಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

ಸಾಹಿತಿ (29) ಮೃತ ಮಹಿಳೆ. ಈಕೆ ಅಂಬರಪೇಟೆಯ ಡಿಡಿ ಕಾಲನಿ ನಿವಾಸಿ. ಒಂದೂವರೆ ವರ್ಷದ ಹಿಂದೆ ವನಸ್ಥಳಿಪುರಂ ಮೂಲದ ಸಾಫ್ಟ್​ವೇರ್​ ಇಂಜಿನಿಯರ್​ ಮನೋಜ್​ (31) ಎಂಬುವರನ್ನು ಮದುವೆ ಆಗಿದ್ದರು. ಮದುವೆ ಬಳಿಕ ಇಬ್ಬರು ಅಮೆರಿಕದ ದಲ್ಲಾಸ್​ನಲ್ಲಿ ನೆಲೆಸಿದ್ದರು.

ಈ ತಿಂಗಳ 2ರಂದು ಸಾಹಿತಿ ತನ್ನ ಪಾಲಕರನ್ನು ನೋಡಲೆಂದು ಅಮೆರಿಕದಿಂದ ಮರಳಿದ್ದಳು. ಆದರೆ, ಮನೋಜ್​ ಮಾತ್ರ ಅಮೆರಿಕದಲ್ಲೇ ಉಳಿದಿದ್ದ. ಇದೇ ತಿಂಗಳು 20ರಂದು ಮನೋಜ್​ ಹೃದಯಾಘಾತದಿಂದ ಮೃತಪಟ್ಟರು. ಮೇ 23ರಂದು ಆತನ ಮೃತದೇಹವನ್ನು ಅಮೆರಿಕದಿಂದ ವನಸ್ಥಳಿಪುರಂಗೆ ತರಿಸಿಕೊಳ್ಳಲಾಯಿತು. ಮೇ 24ರಂದು ಗಂಡನ ಅಂತ್ಯಕ್ರಿಯೆ ಮುಗಿಸಿ, ಅದೇ ದಿನ ರಾತ್ರಿ ತನ್ನ ಪಾಲಕರ ಮನೆಗೆ ಸಾಹಿತಿ ಹಿಂತಿರುಗಿದ್ದಳು.

ಸಾಹಿತಿಯು ಸಹೋದರಿ ಸಂಜನಾ ಜತೆ ಕೋಣೆಯಲ್ಲಿ ಮಲಗಿದ್ದಳು. ಸಂಜನಾ ಗುರುವಾರ ಬೆಳಗ್ಗೆ ಎದ್ದು ವಾಶ್​ರೂಮ್​ಗೆ ತೆರಳಿದಳು. ಇದೇ ಸಮಯಕ್ಕೆ ಎದ್ದ ಸಾಹಿತಿ ರೂಮಿನ ಬಾಗಿಲನ್ನು ಒಳಗಡೆಯಿಂದ ಲಾಕ್​ ಮಾಡಿ, ಫ್ಯಾನಿಗೆ ಸೀರೆ ಕಟ್ಟಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ. ಈ ವಿಚಾರ ಗೊತ್ತಾದ ಬಳಿಕ ರೂಮಿನ ಬಾಗಿಲು ಒಡೆದು ತಕ್ಷಣ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಸಾಹಿತಿಯನ್ನು ಪರೀಕ್ಷಿಸಿದ ವೈದ್ಯರು ಆಕೆ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ಖಚಿತಪಡಿಸಿದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ