ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗಡಿನಾಡ ಕನ್ನಡಿಗರಿಗೆ ಶೀಘ್ರ 100 ಕೋಟಿ ಬಿಡುಗಡೆ: ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
download 1

ಬೆಂಗಳೂರು (ಫೆ.03): ಗಡಿಭಾಗದ ಕನ್ನಡಿಗರ ಸಮಸ್ಯೆ ನಿವಾರಣೆಗೆ ಅನುಕೂಲವಾಗುವಂತೆ ಮತ್ತು ಶಿಕ್ಷಣ, ಕೈಗಾರಿಕೆ, ಮೂಲಸೌಕರ್ಯ ಸೇರಿದಂತೆ ಕನ್ನಡ ಅಭಿವೃದ್ಧಿಗೆ ಪೂರಕವಾಗುವಂತೆ 2023 ಮಾರ್ಚ್‌ 31ರೊಳಗೆ ನೂರು ಕೋಟಿ ರು.ಗಳನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದರು. ಗುರುವಾರ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕುಮಾರಕೃಪಾ ರಸ್ತೆಯಲ್ಲಿರುವ ಗಾಂಧಿ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ‘ಗಡಿನಾಡ ಚೇತನ’ ಪ್ರಶಸ್ತಿ ಪ್ರದಾನ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತರ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ನಮ್ಮ ಗಡಿಯಲ್ಲಿರುವ ಕನ್ನಡಿಗರ ಅಭಿವೃದ್ಧಿಗೆ ಹೆಚ್ಚಿನ ಗಮನ ಕೊಡಬೇಕು. ಗಡಿಭಾಗದಲ್ಲಿ ಇದ್ದಾರೆಂಬ ಕಾರಣಕ್ಕೆ ಮನಸ್ಸಿನಿಂದ ದೂರ ಮಾಡುವುದು ಸರಿಯಲ್ಲ. ಕರ್ನಾಟಕದ ಮುಖ್ಯಮಂತ್ರಿಯಾಗಿ ನಮ್ಮ ಗಡಿಯಲ್ಲಿರುವ ಜನರಿಗೆ ಎಲ್ಲ ಸೌಕರ್ಯಗಳು, ಅವಕಾಶಗಳನ್ನು ಕೊಡುವ ಕೆಲಸವನ್ನು ಮಾಡುತ್ತಿದ್ದೇನೆ. ಗಡಿಭಾಗದ ಜನರ ಅಭಿವೃದ್ಧಿಗೆಂದು ಈಗಾಗಲೇ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 25 ಕೋಟಿ ರು.ಗಳನ್ನು ಕೊಟ್ಟಿದ್ದೇವೆ. ಈಗ 100 ಕೋಟಿ ರು.ಗಳನ್ನು ಇದೇ ವರ್ಷ ಮಾರ್ಚ್‌ 31ರೊಳಗೆ ಕೊಡುತ್ತೇನೆ. ಅದಕ್ಕೆ ಬೇಕಾದ ಕ್ರಿಯಾಯೋಜನೆಯನ್ನು ಗಡಿ ಅಭಿವೃದ್ಧಿ ಪ್ರಾಧಿಕಾರದವರು ರೂಪಿಸುವಂತೆ ಸೂಚಿಸಿದ್ದೇನೆ. ಮುಂದಿನ ವರ್ಷವೂ ಕೂಡ 100 ಕೋಟಿ ರು.ಗಳನ್ನು ಕೊಡುತ್ತೇನೆ. ದುಡ್ಡು ಕೊಡುವುದು ಮುಖ್ಯವಲ್ಲ. ಅದು ಸದುಪಯೋಗವಾಗಬೇಕು ಎಂದು ಹೇಳಿದರು.

ಗಡಿಭಾಗದ ಜನರ ಸಮಸ್ಯೆಗಳನ್ನು ಮಾತ್ರ ಇತ್ಯರ್ಥ ಪಡಿಸುವುದಲ್ಲ. ಜೊತೆಗೆ ಗಡಿಯಾಚೆ ಇರುವ ಕನ್ನಡಿಗರೂ ಕೂಡ ನಮ್ಮವರು. ಅವರಿಗೆ ಏನು ಸವಲತ್ತು ಕೊಡಬೇಕೋ ಅದನ್ನು ಕೊಡಲು ನಾವು ಎಲ್ಲ ರೀತಿಯಲ್ಲೂ ಸಿದ್ಧರಿದ್ದೇವೆ. ನಾವೆಲ್ಲ ರೀತಿಯಲ್ಲಿ ಸಿದ್ಧರಿದ್ದೇವೆ. ಕನ್ನಡ ನಾಡು, ನುಡಿ, ನೆಲ ಜಲದ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಬದ್ಧತೆಯಿದ್ದು ಕನ್ನಡ ಮತ್ತು ಕನ್ನಡಿಗರ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಸಿ.ಸೋಮಶೇಖರ, ಮಾಜಿ ಸಚಿವರಾದ ರಾಣಿ ಸತೀಶ್‌, ಲೀಲಾದೇವಿ ಆರ್‌.ಪ್ರಸಾದ್‌ ಉಪಸ್ಥಿತರಿದ್ದರು.

ಸಾಧಕರಿಗೆ ಪ್ರಶಸ್ತಿ ಪ್ರದಾನ: ಕರ್ನಾಟಕ ಗಡಿನಾಡಿನ ಹಿರಿಯ ಚೇತನಗಳಾದ ಡಾ.ಚನ್ನಬಸವ ಪಟ್ಟದ್ದೇವರು, ಡಾ.ಜಯದೇವಿ ತಾಯಿ ಲಿಗಾಡೆ ಹಾಗೂ ನಾಡೋಜ ಡಾ.ಕಯ್ಯಾರ ಕಿಞ್ಞಣ್ಣರೈ ಅವರುಗಳ ಹೆಸರಿನಲ್ಲಿ ಸ್ಥಾಪಿಸಿರುವ ‘ಗಡಿನಾಡ ಚೇತನ’ ಪ್ರಶಸ್ತಿಯನ್ನು ಗಡಿನಾಡಿನ ಕನ್ನಡ ಹೋರಾಟಗಾರ ಎಂ.ಎಸ್‌.ಸಿಂಧೂರ, ಹೋರಾಟಗಾರ ಅಶೋಕ್‌ ಚಂದರಗಿ ಮತ್ತು ಕಾಸರಗೋಡಿನ ಕನ್ನಡದ ಅಸ್ಮಿತೆಯ ಸಾಂಸ್ಕೃತಿಕ ಪೀಠ ಶ್ರೀ ಎಡನೀರು ಮಠಕ್ಕೆ ಪ್ರದಾನ ಮಾಡಲಾಯಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist