ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗರ್ಭಪಾತಕ್ಕೆ ಯತ್ನ – 19ರ ಯುವತಿ ಸಾವು

Twitter
Facebook
LinkedIn
WhatsApp
file7kz3ooflvhwsmtlldoy1679439394 4

ಚಂಡೀಗಢ: ಅಕ್ರಮ ಗರ್ಭಪಾತಕ್ಕೆ (Abortion) ಯತ್ನಿಸಿದ ಹಿನ್ನೆಲೆಯಲ್ಲಿ 19 ವರ್ಷದ ಯವತಿಯು (Woman) ಸಾವನ್ನಪ್ಪಿದ ಘಟನೆ ಹರಿಯಾಣದ (Haryana) ಹಿಸಾರ್ ಜಿಲ್ಲೆಯಲ್ಲಿ ನಡೆದಿದೆ.

ಹಿಸಾರ್ ಜಿಲ್ಲೆಯ ಆಗ್ರೋಹಾದಲ್ಲಿ ಈ ಘಟನೆ ನಡೆದಿದೆ. ಯುವತಿ ಅವಿವಾಹಿತೆಯಾಗಿದ್ದು, 4 ತಿಂಗಳ ಗರ್ಭಿಣಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ಸಂಬಂಧಿಕರು ಆಕೆಯನ್ನು ಗರ್ಭಪಾತಕ್ಕಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಆಕೆಗೆ ಗರ್ಭಪಾತಕ್ಕೆ ಪ್ರಯತ್ನಿಸಲಾಗಿದೆ. ಆದರೆ ಇದರಿಂದಾಗಿ ಯುವತಿಯ ಸ್ಥಿತಿ ಇನ್ನಷ್ಟು ಹದಗೆಟ್ಟಿದೆ.

ಅದಾದ ಬಳಿಕ ಆಕೆಯ ಸ್ಥಿತಿ ಹದಗೆಟ್ಟಿರುವುದನ್ನು ಕಂಡು, ಪೋಷಕರು ಆಕೆಯನ್ನು ಸಿವಿಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಯಿತು. ಆದರೆ ಅಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಯುವತಿಯ ಕರುಳುಗಳು ಹೊರಬಂದಿದ್ದು, ಗರ್ಭಾಶಯದಲ್ಲಿ ಗಾಯಗಳಾಗಿವೆ. ಅಷ್ಟೇ ಅಲ್ಲದೇ ಮೂತ್ರಪಿಂಡಗಳು ಸಹ ವಿಫಲವಾಗಿತ್ತು. 

ಗಂಭೀರ ಸ್ಥಿತಿಯಲ್ಲಿದ್ದ ಯುವತಿಯನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಯುವತಿ ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ