ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗೃಹಿಣಿ ಕೊಲೆ ಮಾಡಿ 5 ವರ್ಷದ ಮಗು ಕಿಡ್ನ್ಯಾಪ್!

Twitter
Facebook
LinkedIn
WhatsApp
28 1

ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಳೂರು ಗ್ರಾಮದಲ್ಲಿ ಮನೆಯಲ್ಲಿದ್ದ ಗೃಹಿಣಿಯನ್ನ ಕೊಲೆ ಮಾಡಿ, 5ವರ್ಷದ ಮಗುವನ್ನ ಅಪಹರಿಸಿದ ಘಟನೆ ನಡೆದಿದೆ. ಕೊಳೂರು ಗ್ರಾಮದ ನಿವಾಸಿ ಭಾರತಿ(27) ಕೊಲೆಯಾದ ಗೃಹಿಣಿ.

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರ(Doddaballapura) ತಾಲೂಕಿನ ಕೊಳೂರು ಗ್ರಾಮದಲ್ಲಿ ಮನೆಯಲ್ಲಿದ್ದ ಗೃಹಿಣಿಯನ್ನ ಕೊಲೆ ಮಾಡಿ, 5ವರ್ಷದ ಮಗುವನ್ನ ಅಪಹರಿಸಿದ ಘಟನೆ ನಡೆದಿದೆ. ಕೊಳೂರು ಗ್ರಾಮದ ನಿವಾಸಿ ಭಾರತಿ(27) ಕೊಲೆಯಾದ ಗೃಹಿಣಿ.

ಪತಿ ಮನೆಗೆ ಬಂದಾಗ ಪತ್ನಿ ಭಾರತಿ ರಕ್ತದ ಮಡುವಿನಲ್ಲಿ ಬಿದ್ದಿದ್ದಾಳೆ. ಅತ್ತ ಮಗುವನ್ನ ಹುಡುಕಿದರೂ ಎಲ್ಲಿಯೂ ಸಿಕ್ಕಿಲ್ಲ. ಕೂಡಲೇ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೇಲ್ನೊಟಕ್ಕೆ ಕಳೆದ ರಾತ್ರಿ ಮನೆಗೆ ನುಗ್ಗಿ ಪ್ರಿಯಕರ ಹರೀಶ್​ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.

ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಕೊಲೆ ಕೇಸ್; ಜಿ-ನೆಟ್​​ ಕಂಪನಿ ಮಾಲೀಕ, ಎಎಪಿ ಮುಖಂಡ ಅರುಣ್ ಅರೆಸ್ಟ್

ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಕೊಲೆ ಪ್ರಕರಣಕ್ಕೆ( Double Murder Case) ಸಂಬಂಧಿಸಿ ಜಿ-ನೆಟ್​​ ಕಂಪನಿ ಮಾಲೀಕ, ಎಎಪಿ ಮುಖಂಡ ಅರುಣ್ ಕುಮಾರ್​ನನ್ನು(Arun Kumar) ಅಮೃತಹಳ್ಳಿ ಪೊಲೀಸರು(Amruthahalli Police) ಬಂಧಿಸಿದ್ದಾರೆ. ಆರೋಪಿ ಅರುಣ್ ಕುಮಾರ್ ಎಂಡಿ ಫಣೀಂದ್ರ, ಸಿಇಒ ವಿನುಕುಮಾರ್ ಕೊಲೆಗೆ ಸುಪಾರಿ ನೀಡಿದ್ದಾಗಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ.

ವಿಚಾರಣೆ ವೇಳೆ ಪೊಲೀಸರ ಬಳಿ ಸತ್ಯ ಬಾಯ್ಬಿಟ್ಟಿದ್ದಾನೆ. ಕೊಲೆಯಾದ ಫಣೀಂದ್ರ, ವಿನುಕುಮಾರ್ ಇಬ್ಬರೂ ಜಿ-ನೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ಫಿಲೆಕ್ಸ್​ ಕೂಡಾ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ ಫಣೀಂದ್ರ, ವಿನುಕುಮಾರ್ ಜಿ-ನೆಟ್ ಕಂಪನಿ ಬಿಟ್ಟು ಹೊಸ ಕಂಪನಿ ಆರಂಭಿಸಿದ್ದರು. ಜಿ-ನೆಟ್​​ ಕಂಪನಿಯ ಹಲವು ನೌಕರರು ಫಣೀಂದ್ರ ಕಂಪನಿಗೆ ಸೇರಿದ್ದರು. ಇದರಿಂದ ಜಿ-ನೆಟ್​​ ಕಂಪನಿ ನಷ್ಟಕ್ಕೆ ಸಿಲುಕಿತ್ತು. ಇದರಿಂದ ಅರುಣ್ ಆಕ್ರೋಶಗೊಂಡಿದ್ದ. ಹೀಗಾಗಿ ಅರುಣ್, ಫಣೀಂದ್ರ ನಡುವೆ ವೈಮನಸ್ಸು ಉಂಟಾಗಿತ್ತು. ಇದರಿಂದ ಫಣೀಂದ್ರ ಕೊಲೆಗೆ ಫಿಲೆಕ್ಸ್​​ಗೆ ಸುಪಾರಿ ನೀಡಿದ್ದ ಎಂದು ವಿಷಯ ತಿಳಿದು ಬಂದಿದೆ.

ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಕೊಲೆ ಮಾಡಿ ಯಾವ ರೀತಿ ಎಸ್ಕೇಪ್ ಆಗ ಬೇಕು ಎಂಬ ಬಗ್ಗೆಯೂ ಹಂತಕರು ಪ್ಲಾನ್ ಮಾಡಿಕೊಂಡಿದ್ದರು. ಬೈಕ್ ನಲ್ಲಿ ಬಂದಿದ್ದ ಹಂತಕರು ಎಸ್ಕೇಪ್ ಆಗಿದ್ದು ಬರಿಗಾಲಲ್ಲಿ. ಕೊಲೆ ನಂತರ ಎಸ್ಕೇಪ್ ಆಗೋದು ಹೇಗೆ ಅನ್ನೊದನ್ನ ಫಿಲೆಕ್ಸ್ ಮೊದಲೆ ಪ್ಲಾನ್ ಮಾಡಿದ್ದ. ಒಂದು ತಿಂಗಳ ಹಿಂದೆಯೇ ಸ್ಥಳಕ್ಕೆ ಬಂದಿದ್ದ ಫಿಲೆಕ್ಸ್, ಎಸ್ಕೇಪ್ ಆಗೋ ರೂಟ್ ಗಳನ್ನ ಪ್ಲಾನ್ ಮಾಡಿದ್ದ.

ಆರೋಪಿಗಳು ಹಿಂಬದಿ ಡೋರ್ ತೆಗೆದು ಕಾಂಪೌಂಡ್ ಹಾರಿ ಎಸ್ಕೇಪ್ ಆಗಿ ನಂತರ ಮುಖ್ಯ ರಸ್ತೆಗೆ ಬಂದು ಓಲಾ ಬುಕ್ ಮಾಡಿದ್ದರು. ಕೊಲೆ ನಂತರ ಫಿಲೆಕ್ಸ್ಅಂಡ್ ಟೀಂ ಎಸ್ಕೇಪ್ ಆಗೋ ಎಕ್ಸ್ ಕ್ಲೂಸಿವ್ ಸಿಸಿಟಿವಿ ದೃಶ್ಯ ಟಿವಿ9ಗೆ ಲಭ್ಯವಾಗಿದೆ. ವಿನಯ್ ಕುಮಾರ್ ರೆಡ್ಡಿ ತನ್ನ ಪ್ಯಾಂಟ್ ನಲ್ಲಿ ಡ್ರ್ಯಾಗರ್ ಇಟ್ಟುಕೊಂಡು ಎಸ್ಕೇಪ್ ಆಗಿದ್ದು ಡ್ರ್ಯಾಗರ್ ಇಟ್ಟುಕೊಳ್ಳಲು ಸಂತೋಷ್ ಸಹಾಯ ಮಾಡಿದ್ದಾನೆ. ಸಾಚಾ ಎಂಬಂತೆ ಆರೋಪಿ ಫಿಲೆಕ್ಸ್ ಜುಬ್ಬ ಧರಿಸಿ ಕೊಲೆ ಮಾಡಲು ಬಂದಿದ್ದ. ಯಾರ ಭಯವೂ ಇಲ್ಲದೇ ರಾಜಾ ರೋಷವಾಗಿ ಆರೋಪಿಗಳು ಎಸ್ಕೇಪ್ ಆದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist