ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೆಲುವಿನ ಬಳಿಕ ಆರ್ ಸಿಬಿ ಫ್ಯಾನ್ಸ್ ಗೆ ಸುಮ್ಮನಿರಲು ಸನ್ನೆ ಮಾಡಿದ ಗೌತಮ್ ಗಂಭೀರ್ ;ವಿಡಿಯೋ ವೈರಲ್

Twitter
Facebook
LinkedIn
WhatsApp
big tech fb reuters google reuters amazon afp apple reuters 3 1193231 1676907668 1193428 1

ಬೆಂಗಳೂರು(ಏ.11): IPL 2023 ಟೂರ್ನಿಯ ಲೀಗ್ ಪಂದ್ಯದಲ್ಲಿ ಬೆಂಗಳೂರು ತವರಿನಲ್ಲಿ ಮುಗ್ಗರಿಸಿದೆ. ಲಖನೌ ಸೂಪರ್ ಜೈಂಟ್ಸ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲು ಅನುಭವಿಸಿತ್ತು. ಬೆಂಗಳೂರಿನಲ್ಲಿ ಆರ್‌ಸಿಬಿ ಮಣಿಸಿದ ಲಖನೌ ಸಂಭ್ರಮ ಆಚರಿಸಿದೆ. ಆದರೆ ಲಖನೌ ಸೂಪರ್ ಜೈಂಟ್ಸ್ ಮೆಂಟರ್ ಗೌತಮ್ ಗಂಭೀರ್ ನಡೆ ಇದೀಗ ಬೆಂಗಳೂರು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಗೆಲುವಿನ ಬೆನ್ನಲ್ಲೇ ಲಖನೌ ಸಂಭ್ರಮ ಆಚರಿಸಿದೆ. ಗೌತಮ್ ಗಂಭೀರ್ ಕೂಡ ಮೈದಾನಕ್ಕಿಳಿದು ಸಂಭ್ರಮಿಸಿದ್ದಾರೆ. ಆದರೆ ಅಭಿಮಾನಿಗಳು ಮಾತ್ರ ಆರ್‌ಸಿಬಿ ತಂಡಕ್ಕೆ ನಿರಂತರ ಬೆಂಬಲ ಸೂಚಿಸಿದ್ದಾರೆ. ಎಂದಿನಂತೆ ಆರ್‌ಸಿಬಿ..ಆರ್‌ಸಿಬಿ ಎಂದು ಚಿಯರ್ ಮಾಡಿದ್ದಾರೆ. ಇದು ಗಂಭೀರ್ ಪಿತ್ತ ನೆತ್ತಿಗೇರಿಸಿದೆ. ಇತ್ತ ಗೌತಮ್ ಗಂಭೀರ್, ಅಭಿಮಾನಿಗಳತ್ತ ತಿರುಗಿ ಬಾಯಿ ಮುಚ್ಚಲು ಸನ್ನೆ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರ್‌ಸಿಬಿ ತಂಡವನ್ನು 1 ವಿಕೆಟ್‌ನಲ್ಲಿ ಮಣಿಸಿದ ಲಖನೌ ಸೂಪರ್ ಜೈಂಟ್ಸ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಿಸಿತು. ಪಂದ್ಯ ಅಂತಿಮ ಹಂತಕ್ಕೆ ತಲುಪತ್ತಿದ್ದಂತೆ ಗಂಭೀರ್ ಸಂಭ್ರಮಕ್ಕೆ ಸಜ್ಜಾಗಿದ್ದರು. ಪ್ರತಿಯೊಂದು ರನ್‌ಗೂ ಗಂಭೀರ ಸಂಭ್ರಮ ಆಚರಿಸಿದ್ದಾರೆ. ಡಗೌಟ್‌ನಲ್ಲಿ ಕುಳಿತಿದ್ದ ಗಂಭೀರ್ ಪದೇ ಪದೇ ಆಕ್ರೋಶ, ಸಂಭ್ರಮ ಹೊರಹಾಕಿದ್ದಾರೆ. ಇನ್ನು ಗೆಲುವು ಸಾಧಿಸುತ್ತಿದ್ದಂತೆ ಗಂಭೀರ್ ಸಂಭ್ರಮ ಡಬಲ್ ಆಗಿದೆ. ಆದರೆ ಆರ್‌ಸಿಬಿ ಅಭಿಮಾನಿಗಳು ಮಾತ್ರ ಬೆಂಗಳೂರು ತಂಡಕ್ಕೆ ಬೆಂಬಲ ಸೂಚಿಸಿದ್ದರೆ. ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳು ಆರ್‌ಸಿಬಿ ಎಂದು ಘೋಷಣೆ ಕೂಗಿದ್ದಾರೆ. 

ಪಂದ್ಯ ಸೋತರೂ ಆರ್‌ಸಿಬಿ ಅಭಿಮಾನಿಗಳು ಮಾತ್ರ ತಂಡಕ್ಕೆ ಅದೇ ರೀತಿ ಬೆಂಬಲ ಸೂಚಿಸಿದ್ದಾರೆ. ಇದು ಗಂಭೀರ್ ಪಿತ್ತ ನೆತ್ತಿಗೇರಿಸಿದೆ. ಅಭಿಮಾನಿಗಳತ್ತ ತಿರುಗಿದ ಗಂಭೀರ್ ಕೈ ಸನ್ನೈ ಮೂಲಕ ಬಾಯಿ ಮುಚ್ಚಲು ಸೂಚಿಸಿದ್ದಾರೆ. ಆದರೆ ಗಂಭೀರ್ ನಡೆಯಿಂದ ಅಭಿಮಾನಿಗಳು ಮತ್ತಷ್ಟು ಜೋರಾಗಿ ಆರ್‌ಸಿಬಿ..ಆರ್‌ಸಿಬಿ ಎಂದು ಕೂಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಆರ್‌ಸಿಬಿ ಅಭಿಮಾನಿಗಳ ಆಕ್ರೋಶ ಹೆಚ್ಚಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂದ್ಯ ಸೋತರೂ ಗೆದ್ದರೂ ನಮ್ಮ ಬೆಂಬಲ ತಂಡಕ್ಕಿದೆ. ಎದೆಂದಿಗೂ ಆರ್‌ಸಿಬಿ ಅಭಿಮಾನಿಗಳು. ನಮ್ಮ ಚಿಯರ್ ಇದಕ್ಕಿಂತ ಹೆಚ್ಚಾಗಲಿದೆ ಎಂದು ಅಭಿಮಾನಿಗಳು ವಿಡಿಯೋಗೆ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನು ಕೆಲ ಅಭಿಮಾನಿಗಳು ಗಂಭೀರ್‌ಗೆ ಎಚ್ಚರಿಕೆ ನೀಡಿದ್ದಾರೆ. ಲಖನೌ ಸೂಪರ್ ಜೈಂಟ್ಸ್ ತವರಿನಲ್ಲಿ ಮಣಿಸುವುದಾಗಿ ಸವಾಲು ಹಾಕಿದ್ದಾರೆ. 

ಕೊನೆ 6 ಎಸೆತದಲ್ಲಿ ಲಖನೌಗೆ ಗೆಲ್ಲಲು ಬೇಕಿದ್ದಿದ್ದು 5 ರನ್‌. ಮೊದಲ ಎಸೆತದಲ್ಲಿ ಉನಾದ್ಕತ್‌ 1 ರನ್‌ ಪಡೆದರು. 2ನೇ ಎಸೆತದಲ್ಲಿ ವುಡ್‌ ಬೌಲ್ಡ್‌ ಆದರೆ, 3ನೇ ಎಸೆತದಲ್ಲಿ ಬಿಷ್ಣೋಯ್‌ 2 ರನ್‌ ಕದ್ದರು. 4ನೇ ಎಸೆತದಲ್ಲಿ 1 ರನ್‌ ಪಡೆದ ಬಿಷ್ಣೋಯ್‌ ಸ್ಕೋರ್‌ ಸಮಗೊಳ್ಳುವಂತೆ ಮಾಡಿದರು. 5ನೇ ಎಸೆತದಲ್ಲಿ ಉನಾದ್ಕತ್‌ ಔಟಾದರು. ಕೊನೆ ಎಸೆತವನ್ನು ಬೌಲ್‌ ಮಾಡುವಾಗ ಹರ್ಷಲ್‌ ಮೊದಲು ‘ಮನ್‌ಕಡಿಂಗ್‌’ ಯತ್ನವನ್ನು ಕೈಚೆಲ್ಲಿದರು. ಬಳಿಕ ಕೊನೆ ಎಸೆತದಲ್ಲಿ ಬ್ಯಾಟರ್‌ ಆವೇಶ್‌ ಬ್ಯಾಟ್‌ಗೆ ಸಿಗದ ಚೆಂಡನ್ನು ಹಿಡಿದು ರನೌಟ್‌ ಮಾಡಲು ಕಾರ್ತಿಕ್‌ ವಿಫಲರಾದರು. ಲಖನೌ ಗೆದ್ದು ಸಂಭ್ರಮಿಸಿತು. ಕೊನೆ ಬಾಲ್‌ ವರೆಗೂ ಅತ್ತಿತ್ತ ಹೊಯ್ದಾಡಿದ ‘ವಿಜಯಲಕ್ಷ್ಮಿ’ ಕೊನೆಗೆ ಲಖನೌ ಡಗೌಟ್‌ ಸೇರಿದಳು. 3ನೇ ಗೆಲುವು ಕಂಡ ರಾಹುಲ್‌ ಪಡೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ